Homeಕರ್ನಾಟಕಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

ಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಎಲೆಕ್ಷನ್ ರೌಂಡ್ ಅಪ್: ಬಾಗಲಕೋಟೆ
ಒಂದು ಕಡೆ ಚುನಾವಣೆಗೆ ನಿಲ್ಲಲು ಆಸಕ್ತಿಯೇ ಇರದ ಸಂಸದ ಪಿ.ಸಿ. ಗದ್ದಿಗೌಡರನ್ನು ಬಿಜೆಪಿ ಒತ್ತಾಯದಿಂದ ಕಣಕ್ಕಿಳಿಸಿದೆ. ಇನ್ನೊಂದು ಕಡೆ ಪಾರಂಪರಿಕ ಲೋಕಲ್ ಕಾಂಗ್ರೆಸ್ ನಾಯಕರ ಅಸಡ್ಡೆಯನ್ನು ಮೆಟ್ಟಿ ಹಾಕಿದ ಯುವತಿಯೊಬ್ಬಳು ಗೆಲ್ಲಲೇಬೇಕೆಂದು ಹಟಕ್ಕೆ ಬಿದ್ದು ಫೀಲ್ಡಿಗೆ ಇಳಿದಿದ್ದಾಳೆ. ಗೆಲುವು ಈ ಯುವತಿಯ ಪರವೇ ನಿಂತಂತಿದೆ.

ಬಾಗಲಕೋಟೆ ಕ್ಷೇತ್ರ ಈ ಸಲ ಗಮನ ಸೆಳೆದಿರುವುದು ಮೂರು ಕಾರಣಗಳಿಂದಾಗಿ. ಒಂದು, ಪುಟು ಪುಟು ಓಡಾಡುತ್ತ ಕ್ಷೇತ್ರದ ತುಂಬೆಲ್ಲ ಪ್ರಚಾರ ಮಾಡುತ್ತ ಜನರನ್ನು ಸೆಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶೆಪ್ಪನವರ್. ಎರಡನೇಯದು, ಬಾದಾಮಿ ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರವನ್ನು ಗಂಭಿರವಾಗಿ ಪರಿಗಣಿಸಿರುವುದು. ಮೂರನೆಯ ಮತ್ತು ಅತಿ ಮುಖ್ಯ ಕಾರಣ: ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಪರವಿದ್ದ ಪಂಚಮಸಾಲಿ ಸಮಯದಾಯ ಈ ಸಲ ತಮ್ಮದೇ ಸಮುದಾಯದ ವೀಣಾ ಪರ ನಿಂತಿರುವುದು.

ಬಾಗಲಕೋಟೆಯಲ್ಲಿ 2009 ಮತ್ತು 2014ರಲ್ಲಿ ಬಿಜೆಪಿಯಿಂದ ಸಂಸದರಾಗಿರುವ ಗಾಣಿಗ ಸಮುದಾಯದ ಗದ್ದಿಗೌಡರು ಸಂಭಾವಿತರು ಎಂಬ ಬಗ್ಗೆ ಎರಡು ಮಾತಿಲ್ಲ. ಅವರೆಂದೂ ಬಾಗಲಕೋಟೆ ಬಿಜೆಪಿ ಶಾಸಕ ಚರಂತಿಮಠ, ತೇರದಾಳದ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ತರಹ ಕೋಮು ಉನ್ಮಾದದ ರಾಜಕಾರಣ ಮಾಡಿದವರಲ್ಲ. ಜಮಖಂಡಿ ಶಾಸಕ ಮುರುಗೇಶ ನಿರಾಣಿ, ಹುನಗುಂದದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲರಂತೆ ಬ್ಯುಸಿನೆಸ್ ಇಂಟರೆಸ್ಟ್ ಹೊಂದಿದವರಲ್ಲ. ಆದರೆ, ಅವರು ಮಹಾ ಸೋಮಾರಿ. ಚುನಾವಣೆಯಲ್ಲಿ ಮುಖ ತೋರಿಸುವ ಗದ್ದಿಗೌಡರು ನಂತರ ಎಲ್ಲೂ ಕಾಣಿಸಿಕೊಳ್ಳುವುದೇ ಇಲ್ಲ. ಪಕ್ಷದ ಸಾರ್ವಜನಿಕ ಸಭೆಗಳಲ್ಲೂ ಅವರಿಗೆ ಆಸಕ್ತಿ ಇಲ್ಲವೇ ಇಲ್ಲ. ಇದಕ್ಕಿಂತ ಮಿಗಿಲಾಗಿ 10 ವರ್ಷಗಳಲ್ಲಿ ಬಾಗಲಕೋಟೆಗೆ ಅವರು ಕೊಟ್ಟಿದ್ದು ಶೂನ್ಯ.

ಗದ್ದಿಗೌಡರ್ ನಿರುಪ್ರದವಿ ಇರಬಹುದು, ಆದರೆ ಸೋಮಾರಿ ಎಂಬುದು ಈ ಸಲ ಹೈಟಾಗಲು ಕಾರಣ ಎದುರಿಗೆ ನಿಂತಿರುವ ಯುವತಿ ಹುಮ್ಮಸ್ಸಿನಿಂದ ಪುಟಿದೇಳುವ, ರಾಜಕೀಯವನ್ನು ಜನಸೇವೆಗೆ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಪ್ರಾಕ್ಟಿಕಲ್ ಆಗಿ ಮಾಡಿ ತೋರಿಸಿರುವ ಯುವತಿ.

ಬಾಗಲಕೋಟೆ ಕ್ಷೇತ್ರದಲ್ಲಿ ಗದಗ ಜಿಲ್ಲೆಯಾ ನರಗುಂದವೂ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು ಐದರಲ್ಲಿ ಬಿಜೆಪಿ ಶಾಸಕರಿದ್ದಾರೆ. ಇದುಬಿಜೆಪಿಗೆ ವರವಾಗಬಹುದೇ ಎಂಬ ಪ್ರಶನೆ ಸಹಜ. 2014ರಲ್ಲಿ ಕಾಂಗ್ರಸ್‍ನಿಂದ ಇಲ್ಲಿ 7 ಶಾಸಕರಿದ್ದರೂ ಗದ್ದಿಗೌಡರ್ ಇಲ್ಲಿ 5,220 ಮತಗಳಿಂದ ಗೆದ್ದಿದ್ದರು. ಆಗ ಮೋದಿಯ ಸೃಷ್ಟಿತ ಹವಾ ಇತ್ತು. ಅದಕ್ಕೂ ಮುಖ್ಯವಾಗಿ ಇಲ್ಲಿ ಸದಾ ಜಾತಿ ರಾಜಕಾರಣವೇ ರ್ಮಯಲುಗೈ ಪಡೆದಿದ್ದು ಬಿಜೆಪಿಗೆ ವರದಾನವಾಗಿತ್ತು.

ಇಲ್ಲಿ ಲಿಂಗಾಯತ/ವೀರಶೈವ ಜಾತಿಗೆ ಸೇರಿದ ಗಾಣಿಗರು, ಪಂಚಮಸಾಲಿಗಳು ಮತ್ತು ರೆಡಿಗಳು ತಲಾ ಒಂದೂವರೆ ಲಕ್ಷದಷ್ಟು ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ರಡ್ಡಿಗಳ ಟಿಕೆಟ್ ಕೊಟ್ಟ ಪರಿಣಾಮ, ಗಾಣಿಗರು ಮತ್ತು ಪಂಚಮಸಾಲಿಗಳು ಒಟ್ಟಾಗಿ ಬಿಜೆಪಿ ನೆರವಿಗೆ ಬರುತ್ತಿದ್ದರು. ಈ ಸಲ ಪಂಚಮಸಾಲಿಗೆ ಸೇರಿದ ಮಹಿಳಾ ಅಭ್ಯರ್ಥಿ ಕಣದಲ್ಲಿ ರಂಗು ಎಬ್ಬಿಸುವ ಮೂಲಕ ಹೊಸ ಜಾತಿ ಸಂಇಕರಣದ ಗೆಲುವಿನತ್ತ ಮುನ್ನುಗುತ್ತಿದ್ದಾರೆ.

ಸುಮಾರು ಎರಡೂವರೆ ಲಕ್ಷದಷ್ಟಿರು ದಲಿತ ಮತಗಳು ಹೆಚ್ಚೂ ಕಡಿಮೆ ಕಾಂಗ್ರೆಸ್ ಪರವೇ ಇವೆ. ಒಂದು ಲಕ್ಷದಷ್ಟಿರುವ ಎಸ್‍ಟಿ ಮತಗಳಲ್ಲಿ ಎರಡೂ ಪಾರ್ಟಿಗಳು ಸಮಾನವಾಗಿ ಮತ ಪಡೆಯಬಹುದೇನೋ? ಎರಡೂವರೆ ಲಕ್ಷದಷ್ಟಿರುವ ಮುಸ್ಲಿಮರು ಕಾಂಗ್ರೆಸ್ ಪರವೇ. ಎರಡೂವರೆ ಲಕ್ಷದಷ್ಟಿರುವ ಕುರುಬರು ಮತ್ತು ಒಂದೂವರೆ ಲಕ್ಷದಷ್ಟಿರುವ ನೇಕಾರರು ಈ ಸಲ ಸಿದ್ದರಾಮಯ್ಯ ಕಾರಣಕ್ಕೆ ಕಾಂಗ್ರೆಸ್ ಪರ ನಿಲ್ಲುವ ದಟ್ಟ ಸಾಧ್ಯತೆ ಇವೆ. ಸಿದ್ದರಾಮಯ್ಯ ಒಂದು ದಿನ ಮತ್ತು ಸತೀಶ ಜಾರಕಿಹೊಳಿ ಎರಡು ದಿನ ಇಲ್ಲಿ ಪ್ರಚಾರ ಮಾಡಲಿದ್ದು ಅದು ಕಾಂಗ್ರೆಸ್ ಗೆಲುವಿಗೆ ದೊಡ್ಡ ‘ಬೂಸ್ಟ್’

ಜಾತಿ ಮೀರಿದ ಜಾಣೆ
ಜಿಪಂ ಸದಸ್ಯೆ ಆಗಿರುವ ವೀಣಾ ಕಾಶಪ್ಪನವರ್ ಹುನಗುಂದದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಾನಂದ ಕಾಶಪ್ಪನವರ್ ಪತ್ನಿ. ವಿಜಯಾನಂದನ ಹುಂಬ ಕ್ಯಾರೆಕ್ಟರ್‍ಗೆ ಈಕೆ ತದ್ವಿರುದ್ಧ. ಎಲ್ಲ ಜನರೊಡನೆ ಆತ್ಮೀಯತೆಯಿಂದ ಬೆರೆಯುವ, ಯುಜನತೆಯ ಮಧ್ಯದಲ್ಲಿ ಸ್ಪೂರ್ತಿ ತುಂಬುವ ಕೆಲಸವನ್ನು ವೀಣಾ ಮಾಡಿದ್ದಾರೆ. ಈಲ್ಲಾ ಪಂಚಾಯತಿ ಅಧ್ಯಕ್ಷೆಯಾಗಿ ಅವರು ಮಾಡಿರುವ ಕೆಲಸಗಳು ಗಮನ ಸೆಳೆದಿವೆ. ನೀರಾವರಿ, ಕುಡಿಯುವ ನೀರಿಗೆ ಆದ್ಯತೆ ನೀಡಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಹಾಸ್ಟೇಲ್‍ಗಳ ನಿರ್ವಹಣೆಯಲ್ಲಿ ಗುಣಮಟ್ಟ ತಂದ ಹಿರಿಮೆಯೂ ಅವರಿಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳಲ್ಲಿ ವಿಶೇಷ ಆಸಕ್ತಿ ತೋರಿದ್ದರಿಂದ ಅವರಿಗೆ ಮಹಿಳಾ ಮತದಾರರೂ ಒಲಿದಿದ್ದಾರೆ.
ಹೀಗಾಗಿ, ಈ ಸಲ ಗದ್ದಿಗೌಡರ ಗದ್ದುಗೆಯನ್ನು ಈ ಯುವತಿ ಕಿತ್ತುಕೊಳ್ಳುವ ಚಾನ್ಸ್ ಜಾಸ್ತಿನೇ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...