Homeಕರ್ನಾಟಕಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

ಬಾಗಲಕೋಟೆ: ಸೋಮಾರಿ ಸಂಸದನ ಗದ್ದುಗೆಗೆ ಆ್ಯಕ್ಟಿವ್ ಹುಡುಗಿಯ ಚಾಲೆಂಜ್!

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಎಲೆಕ್ಷನ್ ರೌಂಡ್ ಅಪ್: ಬಾಗಲಕೋಟೆ
ಒಂದು ಕಡೆ ಚುನಾವಣೆಗೆ ನಿಲ್ಲಲು ಆಸಕ್ತಿಯೇ ಇರದ ಸಂಸದ ಪಿ.ಸಿ. ಗದ್ದಿಗೌಡರನ್ನು ಬಿಜೆಪಿ ಒತ್ತಾಯದಿಂದ ಕಣಕ್ಕಿಳಿಸಿದೆ. ಇನ್ನೊಂದು ಕಡೆ ಪಾರಂಪರಿಕ ಲೋಕಲ್ ಕಾಂಗ್ರೆಸ್ ನಾಯಕರ ಅಸಡ್ಡೆಯನ್ನು ಮೆಟ್ಟಿ ಹಾಕಿದ ಯುವತಿಯೊಬ್ಬಳು ಗೆಲ್ಲಲೇಬೇಕೆಂದು ಹಟಕ್ಕೆ ಬಿದ್ದು ಫೀಲ್ಡಿಗೆ ಇಳಿದಿದ್ದಾಳೆ. ಗೆಲುವು ಈ ಯುವತಿಯ ಪರವೇ ನಿಂತಂತಿದೆ.

ಬಾಗಲಕೋಟೆ ಕ್ಷೇತ್ರ ಈ ಸಲ ಗಮನ ಸೆಳೆದಿರುವುದು ಮೂರು ಕಾರಣಗಳಿಂದಾಗಿ. ಒಂದು, ಪುಟು ಪುಟು ಓಡಾಡುತ್ತ ಕ್ಷೇತ್ರದ ತುಂಬೆಲ್ಲ ಪ್ರಚಾರ ಮಾಡುತ್ತ ಜನರನ್ನು ಸೆಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶೆಪ್ಪನವರ್. ಎರಡನೇಯದು, ಬಾದಾಮಿ ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರವನ್ನು ಗಂಭಿರವಾಗಿ ಪರಿಗಣಿಸಿರುವುದು. ಮೂರನೆಯ ಮತ್ತು ಅತಿ ಮುಖ್ಯ ಕಾರಣ: ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಪರವಿದ್ದ ಪಂಚಮಸಾಲಿ ಸಮಯದಾಯ ಈ ಸಲ ತಮ್ಮದೇ ಸಮುದಾಯದ ವೀಣಾ ಪರ ನಿಂತಿರುವುದು.

ಬಾಗಲಕೋಟೆಯಲ್ಲಿ 2009 ಮತ್ತು 2014ರಲ್ಲಿ ಬಿಜೆಪಿಯಿಂದ ಸಂಸದರಾಗಿರುವ ಗಾಣಿಗ ಸಮುದಾಯದ ಗದ್ದಿಗೌಡರು ಸಂಭಾವಿತರು ಎಂಬ ಬಗ್ಗೆ ಎರಡು ಮಾತಿಲ್ಲ. ಅವರೆಂದೂ ಬಾಗಲಕೋಟೆ ಬಿಜೆಪಿ ಶಾಸಕ ಚರಂತಿಮಠ, ತೇರದಾಳದ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ತರಹ ಕೋಮು ಉನ್ಮಾದದ ರಾಜಕಾರಣ ಮಾಡಿದವರಲ್ಲ. ಜಮಖಂಡಿ ಶಾಸಕ ಮುರುಗೇಶ ನಿರಾಣಿ, ಹುನಗುಂದದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲರಂತೆ ಬ್ಯುಸಿನೆಸ್ ಇಂಟರೆಸ್ಟ್ ಹೊಂದಿದವರಲ್ಲ. ಆದರೆ, ಅವರು ಮಹಾ ಸೋಮಾರಿ. ಚುನಾವಣೆಯಲ್ಲಿ ಮುಖ ತೋರಿಸುವ ಗದ್ದಿಗೌಡರು ನಂತರ ಎಲ್ಲೂ ಕಾಣಿಸಿಕೊಳ್ಳುವುದೇ ಇಲ್ಲ. ಪಕ್ಷದ ಸಾರ್ವಜನಿಕ ಸಭೆಗಳಲ್ಲೂ ಅವರಿಗೆ ಆಸಕ್ತಿ ಇಲ್ಲವೇ ಇಲ್ಲ. ಇದಕ್ಕಿಂತ ಮಿಗಿಲಾಗಿ 10 ವರ್ಷಗಳಲ್ಲಿ ಬಾಗಲಕೋಟೆಗೆ ಅವರು ಕೊಟ್ಟಿದ್ದು ಶೂನ್ಯ.

ಗದ್ದಿಗೌಡರ್ ನಿರುಪ್ರದವಿ ಇರಬಹುದು, ಆದರೆ ಸೋಮಾರಿ ಎಂಬುದು ಈ ಸಲ ಹೈಟಾಗಲು ಕಾರಣ ಎದುರಿಗೆ ನಿಂತಿರುವ ಯುವತಿ ಹುಮ್ಮಸ್ಸಿನಿಂದ ಪುಟಿದೇಳುವ, ರಾಜಕೀಯವನ್ನು ಜನಸೇವೆಗೆ ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಪ್ರಾಕ್ಟಿಕಲ್ ಆಗಿ ಮಾಡಿ ತೋರಿಸಿರುವ ಯುವತಿ.

ಬಾಗಲಕೋಟೆ ಕ್ಷೇತ್ರದಲ್ಲಿ ಗದಗ ಜಿಲ್ಲೆಯಾ ನರಗುಂದವೂ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು ಐದರಲ್ಲಿ ಬಿಜೆಪಿ ಶಾಸಕರಿದ್ದಾರೆ. ಇದುಬಿಜೆಪಿಗೆ ವರವಾಗಬಹುದೇ ಎಂಬ ಪ್ರಶನೆ ಸಹಜ. 2014ರಲ್ಲಿ ಕಾಂಗ್ರಸ್‍ನಿಂದ ಇಲ್ಲಿ 7 ಶಾಸಕರಿದ್ದರೂ ಗದ್ದಿಗೌಡರ್ ಇಲ್ಲಿ 5,220 ಮತಗಳಿಂದ ಗೆದ್ದಿದ್ದರು. ಆಗ ಮೋದಿಯ ಸೃಷ್ಟಿತ ಹವಾ ಇತ್ತು. ಅದಕ್ಕೂ ಮುಖ್ಯವಾಗಿ ಇಲ್ಲಿ ಸದಾ ಜಾತಿ ರಾಜಕಾರಣವೇ ರ್ಮಯಲುಗೈ ಪಡೆದಿದ್ದು ಬಿಜೆಪಿಗೆ ವರದಾನವಾಗಿತ್ತು.

ಇಲ್ಲಿ ಲಿಂಗಾಯತ/ವೀರಶೈವ ಜಾತಿಗೆ ಸೇರಿದ ಗಾಣಿಗರು, ಪಂಚಮಸಾಲಿಗಳು ಮತ್ತು ರೆಡಿಗಳು ತಲಾ ಒಂದೂವರೆ ಲಕ್ಷದಷ್ಟು ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ರಡ್ಡಿಗಳ ಟಿಕೆಟ್ ಕೊಟ್ಟ ಪರಿಣಾಮ, ಗಾಣಿಗರು ಮತ್ತು ಪಂಚಮಸಾಲಿಗಳು ಒಟ್ಟಾಗಿ ಬಿಜೆಪಿ ನೆರವಿಗೆ ಬರುತ್ತಿದ್ದರು. ಈ ಸಲ ಪಂಚಮಸಾಲಿಗೆ ಸೇರಿದ ಮಹಿಳಾ ಅಭ್ಯರ್ಥಿ ಕಣದಲ್ಲಿ ರಂಗು ಎಬ್ಬಿಸುವ ಮೂಲಕ ಹೊಸ ಜಾತಿ ಸಂಇಕರಣದ ಗೆಲುವಿನತ್ತ ಮುನ್ನುಗುತ್ತಿದ್ದಾರೆ.

ಸುಮಾರು ಎರಡೂವರೆ ಲಕ್ಷದಷ್ಟಿರು ದಲಿತ ಮತಗಳು ಹೆಚ್ಚೂ ಕಡಿಮೆ ಕಾಂಗ್ರೆಸ್ ಪರವೇ ಇವೆ. ಒಂದು ಲಕ್ಷದಷ್ಟಿರುವ ಎಸ್‍ಟಿ ಮತಗಳಲ್ಲಿ ಎರಡೂ ಪಾರ್ಟಿಗಳು ಸಮಾನವಾಗಿ ಮತ ಪಡೆಯಬಹುದೇನೋ? ಎರಡೂವರೆ ಲಕ್ಷದಷ್ಟಿರುವ ಮುಸ್ಲಿಮರು ಕಾಂಗ್ರೆಸ್ ಪರವೇ. ಎರಡೂವರೆ ಲಕ್ಷದಷ್ಟಿರುವ ಕುರುಬರು ಮತ್ತು ಒಂದೂವರೆ ಲಕ್ಷದಷ್ಟಿರುವ ನೇಕಾರರು ಈ ಸಲ ಸಿದ್ದರಾಮಯ್ಯ ಕಾರಣಕ್ಕೆ ಕಾಂಗ್ರೆಸ್ ಪರ ನಿಲ್ಲುವ ದಟ್ಟ ಸಾಧ್ಯತೆ ಇವೆ. ಸಿದ್ದರಾಮಯ್ಯ ಒಂದು ದಿನ ಮತ್ತು ಸತೀಶ ಜಾರಕಿಹೊಳಿ ಎರಡು ದಿನ ಇಲ್ಲಿ ಪ್ರಚಾರ ಮಾಡಲಿದ್ದು ಅದು ಕಾಂಗ್ರೆಸ್ ಗೆಲುವಿಗೆ ದೊಡ್ಡ ‘ಬೂಸ್ಟ್’

ಜಾತಿ ಮೀರಿದ ಜಾಣೆ
ಜಿಪಂ ಸದಸ್ಯೆ ಆಗಿರುವ ವೀಣಾ ಕಾಶಪ್ಪನವರ್ ಹುನಗುಂದದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಾನಂದ ಕಾಶಪ್ಪನವರ್ ಪತ್ನಿ. ವಿಜಯಾನಂದನ ಹುಂಬ ಕ್ಯಾರೆಕ್ಟರ್‍ಗೆ ಈಕೆ ತದ್ವಿರುದ್ಧ. ಎಲ್ಲ ಜನರೊಡನೆ ಆತ್ಮೀಯತೆಯಿಂದ ಬೆರೆಯುವ, ಯುಜನತೆಯ ಮಧ್ಯದಲ್ಲಿ ಸ್ಪೂರ್ತಿ ತುಂಬುವ ಕೆಲಸವನ್ನು ವೀಣಾ ಮಾಡಿದ್ದಾರೆ. ಈಲ್ಲಾ ಪಂಚಾಯತಿ ಅಧ್ಯಕ್ಷೆಯಾಗಿ ಅವರು ಮಾಡಿರುವ ಕೆಲಸಗಳು ಗಮನ ಸೆಳೆದಿವೆ. ನೀರಾವರಿ, ಕುಡಿಯುವ ನೀರಿಗೆ ಆದ್ಯತೆ ನೀಡಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಹಾಸ್ಟೇಲ್‍ಗಳ ನಿರ್ವಹಣೆಯಲ್ಲಿ ಗುಣಮಟ್ಟ ತಂದ ಹಿರಿಮೆಯೂ ಅವರಿಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳಲ್ಲಿ ವಿಶೇಷ ಆಸಕ್ತಿ ತೋರಿದ್ದರಿಂದ ಅವರಿಗೆ ಮಹಿಳಾ ಮತದಾರರೂ ಒಲಿದಿದ್ದಾರೆ.
ಹೀಗಾಗಿ, ಈ ಸಲ ಗದ್ದಿಗೌಡರ ಗದ್ದುಗೆಯನ್ನು ಈ ಯುವತಿ ಕಿತ್ತುಕೊಳ್ಳುವ ಚಾನ್ಸ್ ಜಾಸ್ತಿನೇ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...