Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...