Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...