Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...