Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...