Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...