Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...