Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...