Homeಮುಖಪುಟಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

- Advertisement -
- Advertisement -

ಈ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ರಣನೀತಿ ರೂಪಿಸಿ ಬೃಹತ್ ಗೆಲುವಿನಲ್ಲಿ ಪಾತ್ರ ವಹಿಸಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೋಲ್ಕತ್ತಾದ ಮತದಾರರೂ ಆಗಿದ್ದಾರೆ. ಇದುವರೆಗೂ ಬಿಹಾರದ ಸಸಾರಾಮ್ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿ ಮತದಾರರಾಗಿದ್ದ ಅವರು ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿಯೇ ಪಶ್ಚಿಮ ಬಂಗಾಳಕ್ಕೆ ವರ್ಗಾಯಿಸಿಕೊಂಡಿದ್ದು ಸದ್ಯ ದಕ್ಷಿಣ ಕೋಲ್ಕತ್ತಾ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದಾರೆ. ಮಾತ್ರವಲ್ಲ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಮತ ಚಲಾಯಿಸಿದ್ದಾರೆ.

ಈ ಬಾರಿಯ ಬಂಗಾಳ ಚುನಾವಣೆ ರೋಚಕತೆ ಸೃಷ್ಟಿಸಿತ್ತು. ಬಿಜೆಪಿ ಶತಾಯಗತಾಯ ಅಧಿಕಾರ ಹಿಡಿಯಲು ಭಾರೀ ಯತ್ನ ನಡೆಸಿತ್ತು. ಟಿಎಂಸಿ ಕೂಡ ಮೂರನೇ ಬಾರಿಗೆ ಅಧಿಕಾರ ಪಡೆಯುವ ಯತ್ನದಲ್ಲಿ ಪ್ರಶಾಂತ್ ಕಿಶೋರ್‌ರವರನ್ನು ಚುನಾವಣಾ ತಂತ್ರಜ್ಞರನ್ನಾಗಿ ನೇಮಿಸಿಕೊಂಡಿತ್ತು. 8 ಹಂತಗಳಲ್ಲಿ ನಡೆದ ಚುನವಣೆ ಜಿದ್ದಾಜಿದ್ದಿನಿಂದ ಕೂಡಿತ್ತು. ಮೇ 2 ರಂದು ಚುನಾವಣಾ ಫಲಿತಾಂಶ ಘೋಷಣೆಯಾದಾಗ ಟಿಎಂಸಿಯು ಒಟ್ಟು ಇರುವ 292 ಕ್ಷೇತ್ರಗಳಲ್ಲಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪಾರಮ್ಯ ಮೆರದಿತ್ತು. ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು.

ಈ ಚುನಾವಣಾ ಸಮಯದಲ್ಲಿ ಪ್ರಶಾಂತ್ ಕಿಶೋರ್ ಬಂಗಾಳದಲ್ಲಿದ್ದರು. ಚುನಾವಣಾ ಬಿಸಿಯೇರುತ್ತಿದ್ದ ಸಮಯದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿತ್ತು ಎಂಬ ಆರೋಪ ಕೇಳಿಬಂದಿತ್ತು. ಆಗ ಚುನಾವಣಾ ಘರ್ಷಣೆಗಳ ಹಿನ್ನೆಲೆಯಲ್ಲಿ ಬಿಜೆಪಿಯು ಪ್ರಶಾಂತ್ ಕಿಶೋರ್ ವಿರುದ್ಧ ದೂರು ನೀಡಿ ಅವರನ್ನು ಕೋಲ್ಕತ್ತಾದಿಂದ ಹೊರಹಾಕಬಹುದಾದ ಸಾಧ್ಯತೆಯಿದ್ದುದರಿಂದ ಅವರು ಕೋಲ್ಕತ್ತಾದ ಮತದಾರರಾಗಿ ಬದಲಾದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವು ಹಂತಗಳಲ್ಲಿ ಮತದಾನ ನಡೆಯುತ್ತಿರುವಾಗ ಅವರು ಪ್ರಚಾರಕರಾಗಿ ಕೋಲ್ಕತ್ತಾದಲ್ಲಿ ಹೇಗೆ ಉಳಿಯಬಹುದು ಎಂದು ಬಿಜೆಪಿ ದೂರು ನೀಡಿದರೆ ತೊಂದರೆಯಾಗಬಹುದು ಎಂಬ ಆತಂಕದಿಂದ ಅವರು ಈ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ. ಚುನಾವಣೆ ಮತ್ತು ನಂತರದ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಅವರು ಸಿಎಂ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮನೆಯಲ್ಲಿ ತಂಗಿದ್ದರು. ಅದನ್ನೆ ತಾತ್ಕಾಲಿಕ ವಿಳಾಸವಾಗಿ ನೀಡಿದ್ದಾರೆ.

ಆ ಚುನಾವಣೆಯಲ್ಲಿ ಟಿಎಂಸಿ ಬಹುದೊಡ್ಡ ಅಂತರದಲ್ಲಿ ಗೆದ್ದರೂ ಸಹ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಕೂದಲೆಳೆ ಅಂತರದಲ್ಲಿ ಸೋಲುಂಡರು. ಈ ಸೆಪ್ಟಂಬರ್ 30 ರಂದು ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಪ್ರತಿಷ್ಠಿತ ಕಣವಾಗಿರುವ ಭವಾನಿಪುರ ಉಪ ಚುಣಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ದ ಅಭ್ಯರ್ಥಿಯನ್ನು ನಿಲ್ಲಿಸದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಮಮತಾ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲು ನವೆಂಬರ್‌ 5 ರ ಒಳಗೆ ಶಾಸಕಿಯಾಗಿ ಆಯ್ಕೆಯಾಗಲೇಬೇಕಾಗಿದೆ.


ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...