Homeಮುಖಪುಟಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

- Advertisement -
- Advertisement -

ಈ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ರಣನೀತಿ ರೂಪಿಸಿ ಬೃಹತ್ ಗೆಲುವಿನಲ್ಲಿ ಪಾತ್ರ ವಹಿಸಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೋಲ್ಕತ್ತಾದ ಮತದಾರರೂ ಆಗಿದ್ದಾರೆ. ಇದುವರೆಗೂ ಬಿಹಾರದ ಸಸಾರಾಮ್ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿ ಮತದಾರರಾಗಿದ್ದ ಅವರು ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿಯೇ ಪಶ್ಚಿಮ ಬಂಗಾಳಕ್ಕೆ ವರ್ಗಾಯಿಸಿಕೊಂಡಿದ್ದು ಸದ್ಯ ದಕ್ಷಿಣ ಕೋಲ್ಕತ್ತಾ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದಾರೆ. ಮಾತ್ರವಲ್ಲ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಮತ ಚಲಾಯಿಸಿದ್ದಾರೆ.

ಈ ಬಾರಿಯ ಬಂಗಾಳ ಚುನಾವಣೆ ರೋಚಕತೆ ಸೃಷ್ಟಿಸಿತ್ತು. ಬಿಜೆಪಿ ಶತಾಯಗತಾಯ ಅಧಿಕಾರ ಹಿಡಿಯಲು ಭಾರೀ ಯತ್ನ ನಡೆಸಿತ್ತು. ಟಿಎಂಸಿ ಕೂಡ ಮೂರನೇ ಬಾರಿಗೆ ಅಧಿಕಾರ ಪಡೆಯುವ ಯತ್ನದಲ್ಲಿ ಪ್ರಶಾಂತ್ ಕಿಶೋರ್‌ರವರನ್ನು ಚುನಾವಣಾ ತಂತ್ರಜ್ಞರನ್ನಾಗಿ ನೇಮಿಸಿಕೊಂಡಿತ್ತು. 8 ಹಂತಗಳಲ್ಲಿ ನಡೆದ ಚುನವಣೆ ಜಿದ್ದಾಜಿದ್ದಿನಿಂದ ಕೂಡಿತ್ತು. ಮೇ 2 ರಂದು ಚುನಾವಣಾ ಫಲಿತಾಂಶ ಘೋಷಣೆಯಾದಾಗ ಟಿಎಂಸಿಯು ಒಟ್ಟು ಇರುವ 292 ಕ್ಷೇತ್ರಗಳಲ್ಲಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪಾರಮ್ಯ ಮೆರದಿತ್ತು. ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು.

ಈ ಚುನಾವಣಾ ಸಮಯದಲ್ಲಿ ಪ್ರಶಾಂತ್ ಕಿಶೋರ್ ಬಂಗಾಳದಲ್ಲಿದ್ದರು. ಚುನಾವಣಾ ಬಿಸಿಯೇರುತ್ತಿದ್ದ ಸಮಯದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿತ್ತು ಎಂಬ ಆರೋಪ ಕೇಳಿಬಂದಿತ್ತು. ಆಗ ಚುನಾವಣಾ ಘರ್ಷಣೆಗಳ ಹಿನ್ನೆಲೆಯಲ್ಲಿ ಬಿಜೆಪಿಯು ಪ್ರಶಾಂತ್ ಕಿಶೋರ್ ವಿರುದ್ಧ ದೂರು ನೀಡಿ ಅವರನ್ನು ಕೋಲ್ಕತ್ತಾದಿಂದ ಹೊರಹಾಕಬಹುದಾದ ಸಾಧ್ಯತೆಯಿದ್ದುದರಿಂದ ಅವರು ಕೋಲ್ಕತ್ತಾದ ಮತದಾರರಾಗಿ ಬದಲಾದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವು ಹಂತಗಳಲ್ಲಿ ಮತದಾನ ನಡೆಯುತ್ತಿರುವಾಗ ಅವರು ಪ್ರಚಾರಕರಾಗಿ ಕೋಲ್ಕತ್ತಾದಲ್ಲಿ ಹೇಗೆ ಉಳಿಯಬಹುದು ಎಂದು ಬಿಜೆಪಿ ದೂರು ನೀಡಿದರೆ ತೊಂದರೆಯಾಗಬಹುದು ಎಂಬ ಆತಂಕದಿಂದ ಅವರು ಈ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ. ಚುನಾವಣೆ ಮತ್ತು ನಂತರದ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಅವರು ಸಿಎಂ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮನೆಯಲ್ಲಿ ತಂಗಿದ್ದರು. ಅದನ್ನೆ ತಾತ್ಕಾಲಿಕ ವಿಳಾಸವಾಗಿ ನೀಡಿದ್ದಾರೆ.

ಆ ಚುನಾವಣೆಯಲ್ಲಿ ಟಿಎಂಸಿ ಬಹುದೊಡ್ಡ ಅಂತರದಲ್ಲಿ ಗೆದ್ದರೂ ಸಹ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಕೂದಲೆಳೆ ಅಂತರದಲ್ಲಿ ಸೋಲುಂಡರು. ಈ ಸೆಪ್ಟಂಬರ್ 30 ರಂದು ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಪ್ರತಿಷ್ಠಿತ ಕಣವಾಗಿರುವ ಭವಾನಿಪುರ ಉಪ ಚುಣಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ದ ಅಭ್ಯರ್ಥಿಯನ್ನು ನಿಲ್ಲಿಸದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಮಮತಾ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲು ನವೆಂಬರ್‌ 5 ರ ಒಳಗೆ ಶಾಸಕಿಯಾಗಿ ಆಯ್ಕೆಯಾಗಲೇಬೇಕಾಗಿದೆ.


ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...