Homeಮುಖಪುಟಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

- Advertisement -
- Advertisement -

ಈ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ರಣನೀತಿ ರೂಪಿಸಿ ಬೃಹತ್ ಗೆಲುವಿನಲ್ಲಿ ಪಾತ್ರ ವಹಿಸಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೋಲ್ಕತ್ತಾದ ಮತದಾರರೂ ಆಗಿದ್ದಾರೆ. ಇದುವರೆಗೂ ಬಿಹಾರದ ಸಸಾರಾಮ್ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿ ಮತದಾರರಾಗಿದ್ದ ಅವರು ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿಯೇ ಪಶ್ಚಿಮ ಬಂಗಾಳಕ್ಕೆ ವರ್ಗಾಯಿಸಿಕೊಂಡಿದ್ದು ಸದ್ಯ ದಕ್ಷಿಣ ಕೋಲ್ಕತ್ತಾ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದಾರೆ. ಮಾತ್ರವಲ್ಲ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಮತ ಚಲಾಯಿಸಿದ್ದಾರೆ.

ಈ ಬಾರಿಯ ಬಂಗಾಳ ಚುನಾವಣೆ ರೋಚಕತೆ ಸೃಷ್ಟಿಸಿತ್ತು. ಬಿಜೆಪಿ ಶತಾಯಗತಾಯ ಅಧಿಕಾರ ಹಿಡಿಯಲು ಭಾರೀ ಯತ್ನ ನಡೆಸಿತ್ತು. ಟಿಎಂಸಿ ಕೂಡ ಮೂರನೇ ಬಾರಿಗೆ ಅಧಿಕಾರ ಪಡೆಯುವ ಯತ್ನದಲ್ಲಿ ಪ್ರಶಾಂತ್ ಕಿಶೋರ್‌ರವರನ್ನು ಚುನಾವಣಾ ತಂತ್ರಜ್ಞರನ್ನಾಗಿ ನೇಮಿಸಿಕೊಂಡಿತ್ತು. 8 ಹಂತಗಳಲ್ಲಿ ನಡೆದ ಚುನವಣೆ ಜಿದ್ದಾಜಿದ್ದಿನಿಂದ ಕೂಡಿತ್ತು. ಮೇ 2 ರಂದು ಚುನಾವಣಾ ಫಲಿತಾಂಶ ಘೋಷಣೆಯಾದಾಗ ಟಿಎಂಸಿಯು ಒಟ್ಟು ಇರುವ 292 ಕ್ಷೇತ್ರಗಳಲ್ಲಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪಾರಮ್ಯ ಮೆರದಿತ್ತು. ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು.

ಈ ಚುನಾವಣಾ ಸಮಯದಲ್ಲಿ ಪ್ರಶಾಂತ್ ಕಿಶೋರ್ ಬಂಗಾಳದಲ್ಲಿದ್ದರು. ಚುನಾವಣಾ ಬಿಸಿಯೇರುತ್ತಿದ್ದ ಸಮಯದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿತ್ತು ಎಂಬ ಆರೋಪ ಕೇಳಿಬಂದಿತ್ತು. ಆಗ ಚುನಾವಣಾ ಘರ್ಷಣೆಗಳ ಹಿನ್ನೆಲೆಯಲ್ಲಿ ಬಿಜೆಪಿಯು ಪ್ರಶಾಂತ್ ಕಿಶೋರ್ ವಿರುದ್ಧ ದೂರು ನೀಡಿ ಅವರನ್ನು ಕೋಲ್ಕತ್ತಾದಿಂದ ಹೊರಹಾಕಬಹುದಾದ ಸಾಧ್ಯತೆಯಿದ್ದುದರಿಂದ ಅವರು ಕೋಲ್ಕತ್ತಾದ ಮತದಾರರಾಗಿ ಬದಲಾದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವು ಹಂತಗಳಲ್ಲಿ ಮತದಾನ ನಡೆಯುತ್ತಿರುವಾಗ ಅವರು ಪ್ರಚಾರಕರಾಗಿ ಕೋಲ್ಕತ್ತಾದಲ್ಲಿ ಹೇಗೆ ಉಳಿಯಬಹುದು ಎಂದು ಬಿಜೆಪಿ ದೂರು ನೀಡಿದರೆ ತೊಂದರೆಯಾಗಬಹುದು ಎಂಬ ಆತಂಕದಿಂದ ಅವರು ಈ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ. ಚುನಾವಣೆ ಮತ್ತು ನಂತರದ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಅವರು ಸಿಎಂ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮನೆಯಲ್ಲಿ ತಂಗಿದ್ದರು. ಅದನ್ನೆ ತಾತ್ಕಾಲಿಕ ವಿಳಾಸವಾಗಿ ನೀಡಿದ್ದಾರೆ.

ಆ ಚುನಾವಣೆಯಲ್ಲಿ ಟಿಎಂಸಿ ಬಹುದೊಡ್ಡ ಅಂತರದಲ್ಲಿ ಗೆದ್ದರೂ ಸಹ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಕೂದಲೆಳೆ ಅಂತರದಲ್ಲಿ ಸೋಲುಂಡರು. ಈ ಸೆಪ್ಟಂಬರ್ 30 ರಂದು ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಪ್ರತಿಷ್ಠಿತ ಕಣವಾಗಿರುವ ಭವಾನಿಪುರ ಉಪ ಚುಣಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ದ ಅಭ್ಯರ್ಥಿಯನ್ನು ನಿಲ್ಲಿಸದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಮಮತಾ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲು ನವೆಂಬರ್‌ 5 ರ ಒಳಗೆ ಶಾಸಕಿಯಾಗಿ ಆಯ್ಕೆಯಾಗಲೇಬೇಕಾಗಿದೆ.


ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....