Homeಮುಖಪುಟಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಈಗ ಕೋಲ್ಕತ್ತಾ ಮತದಾರ! ಕಾರಣವೇನು?

- Advertisement -
- Advertisement -

ಈ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ರಣನೀತಿ ರೂಪಿಸಿ ಬೃಹತ್ ಗೆಲುವಿನಲ್ಲಿ ಪಾತ್ರ ವಹಿಸಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೋಲ್ಕತ್ತಾದ ಮತದಾರರೂ ಆಗಿದ್ದಾರೆ. ಇದುವರೆಗೂ ಬಿಹಾರದ ಸಸಾರಾಮ್ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿ ಮತದಾರರಾಗಿದ್ದ ಅವರು ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿಯೇ ಪಶ್ಚಿಮ ಬಂಗಾಳಕ್ಕೆ ವರ್ಗಾಯಿಸಿಕೊಂಡಿದ್ದು ಸದ್ಯ ದಕ್ಷಿಣ ಕೋಲ್ಕತ್ತಾ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದಾರೆ. ಮಾತ್ರವಲ್ಲ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಮತ ಚಲಾಯಿಸಿದ್ದಾರೆ.

ಈ ಬಾರಿಯ ಬಂಗಾಳ ಚುನಾವಣೆ ರೋಚಕತೆ ಸೃಷ್ಟಿಸಿತ್ತು. ಬಿಜೆಪಿ ಶತಾಯಗತಾಯ ಅಧಿಕಾರ ಹಿಡಿಯಲು ಭಾರೀ ಯತ್ನ ನಡೆಸಿತ್ತು. ಟಿಎಂಸಿ ಕೂಡ ಮೂರನೇ ಬಾರಿಗೆ ಅಧಿಕಾರ ಪಡೆಯುವ ಯತ್ನದಲ್ಲಿ ಪ್ರಶಾಂತ್ ಕಿಶೋರ್‌ರವರನ್ನು ಚುನಾವಣಾ ತಂತ್ರಜ್ಞರನ್ನಾಗಿ ನೇಮಿಸಿಕೊಂಡಿತ್ತು. 8 ಹಂತಗಳಲ್ಲಿ ನಡೆದ ಚುನವಣೆ ಜಿದ್ದಾಜಿದ್ದಿನಿಂದ ಕೂಡಿತ್ತು. ಮೇ 2 ರಂದು ಚುನಾವಣಾ ಫಲಿತಾಂಶ ಘೋಷಣೆಯಾದಾಗ ಟಿಎಂಸಿಯು ಒಟ್ಟು ಇರುವ 292 ಕ್ಷೇತ್ರಗಳಲ್ಲಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪಾರಮ್ಯ ಮೆರದಿತ್ತು. ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು.

ಈ ಚುನಾವಣಾ ಸಮಯದಲ್ಲಿ ಪ್ರಶಾಂತ್ ಕಿಶೋರ್ ಬಂಗಾಳದಲ್ಲಿದ್ದರು. ಚುನಾವಣಾ ಬಿಸಿಯೇರುತ್ತಿದ್ದ ಸಮಯದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿತ್ತು ಎಂಬ ಆರೋಪ ಕೇಳಿಬಂದಿತ್ತು. ಆಗ ಚುನಾವಣಾ ಘರ್ಷಣೆಗಳ ಹಿನ್ನೆಲೆಯಲ್ಲಿ ಬಿಜೆಪಿಯು ಪ್ರಶಾಂತ್ ಕಿಶೋರ್ ವಿರುದ್ಧ ದೂರು ನೀಡಿ ಅವರನ್ನು ಕೋಲ್ಕತ್ತಾದಿಂದ ಹೊರಹಾಕಬಹುದಾದ ಸಾಧ್ಯತೆಯಿದ್ದುದರಿಂದ ಅವರು ಕೋಲ್ಕತ್ತಾದ ಮತದಾರರಾಗಿ ಬದಲಾದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವು ಹಂತಗಳಲ್ಲಿ ಮತದಾನ ನಡೆಯುತ್ತಿರುವಾಗ ಅವರು ಪ್ರಚಾರಕರಾಗಿ ಕೋಲ್ಕತ್ತಾದಲ್ಲಿ ಹೇಗೆ ಉಳಿಯಬಹುದು ಎಂದು ಬಿಜೆಪಿ ದೂರು ನೀಡಿದರೆ ತೊಂದರೆಯಾಗಬಹುದು ಎಂಬ ಆತಂಕದಿಂದ ಅವರು ಈ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ. ಚುನಾವಣೆ ಮತ್ತು ನಂತರದ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಅವರು ಸಿಎಂ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮನೆಯಲ್ಲಿ ತಂಗಿದ್ದರು. ಅದನ್ನೆ ತಾತ್ಕಾಲಿಕ ವಿಳಾಸವಾಗಿ ನೀಡಿದ್ದಾರೆ.

ಆ ಚುನಾವಣೆಯಲ್ಲಿ ಟಿಎಂಸಿ ಬಹುದೊಡ್ಡ ಅಂತರದಲ್ಲಿ ಗೆದ್ದರೂ ಸಹ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಕೂದಲೆಳೆ ಅಂತರದಲ್ಲಿ ಸೋಲುಂಡರು. ಈ ಸೆಪ್ಟಂಬರ್ 30 ರಂದು ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಪ್ರತಿಷ್ಠಿತ ಕಣವಾಗಿರುವ ಭವಾನಿಪುರ ಉಪ ಚುಣಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ದ ಅಭ್ಯರ್ಥಿಯನ್ನು ನಿಲ್ಲಿಸದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಮಮತಾ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲು ನವೆಂಬರ್‌ 5 ರ ಒಳಗೆ ಶಾಸಕಿಯಾಗಿ ಆಯ್ಕೆಯಾಗಲೇಬೇಕಾಗಿದೆ.


ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...