Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...