Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...