Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...