Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...