Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...