Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...