Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...