Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...