Homeಕರ್ನಾಟಕಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

ಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

- Advertisement -
- Advertisement -

| ನಹುಷ |
ಉಡುಪಿ-ಚಿಕ್ಕಮಗಳೂರು ಲೋಕಾ ರಣರಂಗದಲ್ಲಿ ಬಿಜೆಪಿಯ ಕೂಗುಮಾರಿ ಬ್ರಾಂಡಿನ ಶೋಭಾ ಕರಂದ್ಲಾಜೆ ಮತ್ತ ಜೆಡಿಎಸ್ ವೇಷದ ಕಾಂಗ್ರೆಸಿಗ ಪ್ರಮೋದ್ ಮಧ್ವರಾಜ್ ನಡುವೆ ಮುಖಾಮುಖಿ ಹಣಾಹಣಿ ನಡೆದಿದೆ. ಜನದ್ರೋಹದಿಂದ ಹೆಸರು ಕೆಡಿಸಿಕೊಂಡಿರುವ ಶೋಭಕ್ಕ ಹೋದಹೋದಲ್ಲಿ ಕಾರಿಂದ ಇಳಿಯಲಿಕ್ಕೂ ಸಾಧ್ಯವಾಗುತ್ತಿಲ್ಲ. ಆಕೆಗೆ ದಿನಗಳೆದಂತೆ ಸಂಕಟ ಹೆಚ್ಚಾಗುತ್ತಲೇ ಇದೆ. ಪ್ರಮೋದ್ ತನ್ನ ರಾಯಲ್ ದೌಲತ್ತಿನ ಹಮ್ಮು ಅಹಂಕಾರ ಬಿಟ್ಟು ಸಂಪ್ರದಾಯಿಕ ಶತ್ರುಗಳಿಗೆಲ್ಲಾ ಶರಣಾಗುತ್ತ ಅಖಾಡದಲ್ಲಿ ಗಟ್ಟಿಗೊಳ್ಳುತ್ತಿದ್ದಾರೆ. ಶೋಭಕ್ಕನ ಮೇಲಿರುವ ತಾತ್ಸಾರವನ್ನು ಹಿಂದೂತ್ವದ ಅಮಲಿಂದ ತಪ್ಪಿಸಿ ತಂದು ಓಟು ಮಾಡಿಕೊಳ್ಳಬೇಕಾದ ಸವಾಲು ಮೈತ್ರಿಕೂಟಕ್ಕೆ ಎದುರಾಗಿದೆ.

ಶೋಭಕ್ಕನ ದುಃಸ್ಥಿತಿ ಕಂಡು ಆರೆಸೆಸ್ ಬೆಚ್ಚಿಬಿದ್ದಿದೆ. ಈಯಮ್ಮನ ಫೀಲ್ಡಿಗೆ ಕಳಿಸಬೇಡಿ ಎಂದು ಬಿಜೆಪಿ ಲೀಡರ್‍ಗಳಿಗೆ ಆರೆಸೆಸ್ ಸೂತ್ರದಾರಿಗಳು ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ನಾವೇ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ, ಆದರೆ ಆಕೆ ತೆರೆಮರೆಯಲ್ಲೇ ಇರಬೇಕು, ಆಕೆ ಕಂಡರೆ ಮತದಾರರಿಗೆ ಆಕ್ರೋಶ ಉಕ್ಕುತ್ತದೆಂದು ಚೆಡ್ಡಿ ಚತುರರು ಅಲವತ್ತು ಕೇಳುತ್ತಿದ್ದಾರೆ. ಹುಸಿ ಹಿಂದೂತ್ವದ ದೆಸೆಯಿಂದ ಕರಾವಳಿಯಲ್ಲಿ ಒಂಚೂರು ಶೋಭಕ್ಕನಿಗೆ ಬೆಂಬಲ ಇದೆಯಾದರೂ ಮಲೆನಾಡಿನ ಭಾಗದಲ್ಲಿ ಆಕೆಗೆ ಮಾನ-ಮರ್ಯಾದೆಯೇ ಇಲ್ಲ ಬಿಜೆಪಿಉ ಸೆಕೆಂಡ್ ಕಿಂಗ್ ಅಮಿತ್ ಶಾ ತೆಂಗಿಗೆ ರೇಟು ಏರಿಸಿದಂತೆ ಅಡಿಕೆಗೂ ಬಂಪರ್ ಬೆಲೆಬರುವಂತೆ ಮಾಡುತ್ತೇನೆಂದು ಮೋಸ ಮಾಡಿದ್ದು ಚಿಕ್ಕಮಗಳೂರು ಕಡೆಯ ತೋಟಗಾರರನ್ನು ಕೆರಳಿಸಿದೆ. ಅಡಿಕೆ-ಕರಿಮೆಣಸು ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಬಿಜೆಪಿ ಅಂದರೆ ಬುಸುಗುಡುತ್ತಿದ್ದಾರೆ.

ಚಿಕ್ಕಮಗಳೂರು ಶಾಸಕ ಸಿಟಿ.ರವಿ “ಈಕೆ ಮತ್ತೆ ಗೆದ್ದರೆ ನಮಗೆ ಉಳಿಗಾಲವಿಲ್ಲವೆಂದು ಹೇಳುತ್ತಿರುವುದು, ಅತ್ತ ಉಡುಪಿ ಭಾಗದ ರಘುಪತಿ ಭಟ್ಟ, ಸುನೀಲ್ ಕುಮಾರ್ ಶೋಭಕ್ಕ ಸೋತುಹೋಗಲೆಂದು ಒಳಗೊಳಗೇ ಹರಕೆ ಹೊರುತ್ತಿದ್ದಾರೆ. ಓಟು ಕೇಳುವ ನೈತಿಕ ಧೈರ್ಯ ಶೋಭಕ್ಕನಿಗೆ ಇಲ್ಲ, ಆಕೆ ಮೋದಿಗಾಗಿ ಮತ ಹಾಕಿ ಎನ್ನುತ್ತಿದ್ದಾರೆ. ಆರೆಸೆಸ್ ತಂಡ ಹಿಂದೂತ್ವ ಉದ್ದೀತನಕ್ಕೆ ಬಿಜೆಪಿಗೆ ಓಟು ಅನಿವಾರ್ಯವೆಂದು ಪ್ರಚಾರ ನಡೆಸಿದೆ. ಯಡ್ಡಿಯನ್ನು ಕುಣಿಸಲು ಶೋಭಕ್ಕನ ಗೆಲ್ಲಿಸಿಕೊಳ್ಳಬೇಕಾದ ದರ್ದು ಚೆಡ್ಡಿ ಚೆತುರರ ಕಾಡುತ್ತಿದೆ. ಕೇಸರಿ ಪಡೆ ಏನೇ ಹೇಳಿದರೂ ಕಟ್ಟರ್ ಭಜರಂಗಿಳು “ನೋಟಾ” ಒತ್ತುವ ಸಾಧ್ಯತೆಯೇ ಜಾಸ್ತಿ ನೋಟಾ ಹೆಚ್ಚಾದಂತೆ ಮೈತ್ರಿ ಅಭ್ಯರ್ಥಿಯ ಸೋಲಿನ ಸಾಧ್ಯತೆ ಕಮ್ಮಿಯಾಗುತ್ತದೆ.

ಮಜಾ ಎಂದರೆ, ಕಾಂಗ್ರೆಸ್‍ನಲ್ಲಿ ಒಳ ಹೊಡೆತಗಳ ಆಟವಿಲ್ಲ ಕಾಪುನಲ್ಲಿ ಮಾಜಿ ಸಚಿವ ಸೊರಕೆ, ಉಡುಪುಯಲ್ಲಿ ಮಾಜಿ ಎಮ್ಮೆಲ್ಲೆ ಸಭಾಪತಿ, ಕಾರ್ಕಳದಲ್ಲಿ ಮೊಯ್ಲಿ ಮುನಿಯಾಲ್ ಬಣ, ಮಲೆನಾಡಲ್ಲಿ ಜೆಡಿಎಸ್-ಕಾಂಗ್ರೆಸ್ ತಂಡ ಮೊದಲಿನ ಹೊಟ್ಟೆಕಿಚ್ಚು ಬಿಟ್ಟು ದುಡಿಯುತ್ತಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾಗಿದ್ದ ವೇಗವೀರರು ಸ್ವಜಾತಿ ಪ್ರಮೋದ್ ಪರ ಏಕಗಂಟಲ್ಲಿ ಓಟು ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಘಟ್ಟದ ಮೇಲಿನ ಒಕ್ಕಲಿಗರ ಮತಕ್ಕಾಗಿ ದೇವೇಗೌಡ-ಕುಮಾರಣ್ಣ ಸ್ಟ್ರೇಟಜಿ ಹೆಣೆಯುತ್ತಿದ್ದಾರೆ. ಶೋಭಕ್ಕನ ಪರವಾಗಿ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟ ಒಬ್ಬರ ಬಿಟ್ಟರೆ ಉಳಿದ ಎಮ್ಮೆಲ್ಲೆಗಳು ಮೊದಲಿನ ನಿಷ್ಠೆ-ನಿಯತ್ತು ತೋರಿಸುತ್ತಿಲ್ಲ. ಹೀಗಾಗಿ ಶೋಭಕ್ಕನಿಗೆ ಬಿಜೆಪಿ ಓಟ್ ಬ್ಯಾಂಕಿನ ಶೇ.25-30 ಮತ ಖೋತಾ ಆಗುವ ಲೆಕ್ಕಾಚಾರ ನಡೆದಿದೆ. ಮೈತ್ರಿ ಕೂಟ ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಪಡೆದ ಅಷ್ಟೂ ಮತ ಪಡೆದರೂ ಸಾಕು, ಗೆಲುವಿನ ಛಾನ್ಸ್‍ನ ಗ್ರಾಫ್ಟ್ ಏರಿಕೆಯಾಗುತ್ತದೆ.

ಶೋಭಕ್ಕನಿಗೆ ಮೋದಿ ಮಂಕು ಬೂದಿ ಬಿಟ್ಟರೆ ಮತ್ತ್ಯಾವ ಪ್ಲಸ್ ಪಾಯಿಂಟ್ ಇಲ್ಲ. ಸುಳ್ಯ ಕಡೆಯ ಆಕೆಗಿಲ್ಲ, ಸ್ವಜಾತಿ ಮತ ಬಾಂಧವರೂ ಇಲ್ಲ! ಕರಾವಳಿಯ ಬಿಲ್ಲವರು ಮತ್ತು ಬಂಟರಿಗೆ ಸಂಘಪರಿವಾರದ ಹಿಂದೂತ್ವದ ಅಸಲೀ ಆಟದ ಹಿಕಮತ್ತು ಶೂದ್ರರಿಗೆಷ್ಟು ಗಂಡಾಂತರಕಾರಿ ಎಂಬುದು ಅರ್ಥವಾಗಿದೆ. ಬಿಲ್ಲವರು ಪಾಪದ ಹುಡುಗರು ಹಿಂದೂತ್ವದ ಹೆಸರಲ್ಲಿ ಜೈಲು ಪಾಲಾಗಿರುವ ಕರುಣಾ ಕತೆ ಆ ಜಾತಿಯ ಹಿರಿಯರ ಕಣ್ಣು ತೆರೆಸಿದರೆ ಮೈತ್ರಿಕೂಟದ ಗೆಲುವು ಇನ್ನಷ್ಟು ನಿಚ್ಚಳವಾಗುತ್ತದೆ. ಫೋಟೋ ಫಿನಿಶ್ ಫಲಿತಾಂಶ ಉಡುಪಿ-ಚಿಕ್ಕಮಗಳೂರು ಈ ಬಾರಿ ಕೊಡುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...