Homeಕರ್ನಾಟಕಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

ಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

- Advertisement -
- Advertisement -

| ನಹುಷ |
ಉಡುಪಿ-ಚಿಕ್ಕಮಗಳೂರು ಲೋಕಾ ರಣರಂಗದಲ್ಲಿ ಬಿಜೆಪಿಯ ಕೂಗುಮಾರಿ ಬ್ರಾಂಡಿನ ಶೋಭಾ ಕರಂದ್ಲಾಜೆ ಮತ್ತ ಜೆಡಿಎಸ್ ವೇಷದ ಕಾಂಗ್ರೆಸಿಗ ಪ್ರಮೋದ್ ಮಧ್ವರಾಜ್ ನಡುವೆ ಮುಖಾಮುಖಿ ಹಣಾಹಣಿ ನಡೆದಿದೆ. ಜನದ್ರೋಹದಿಂದ ಹೆಸರು ಕೆಡಿಸಿಕೊಂಡಿರುವ ಶೋಭಕ್ಕ ಹೋದಹೋದಲ್ಲಿ ಕಾರಿಂದ ಇಳಿಯಲಿಕ್ಕೂ ಸಾಧ್ಯವಾಗುತ್ತಿಲ್ಲ. ಆಕೆಗೆ ದಿನಗಳೆದಂತೆ ಸಂಕಟ ಹೆಚ್ಚಾಗುತ್ತಲೇ ಇದೆ. ಪ್ರಮೋದ್ ತನ್ನ ರಾಯಲ್ ದೌಲತ್ತಿನ ಹಮ್ಮು ಅಹಂಕಾರ ಬಿಟ್ಟು ಸಂಪ್ರದಾಯಿಕ ಶತ್ರುಗಳಿಗೆಲ್ಲಾ ಶರಣಾಗುತ್ತ ಅಖಾಡದಲ್ಲಿ ಗಟ್ಟಿಗೊಳ್ಳುತ್ತಿದ್ದಾರೆ. ಶೋಭಕ್ಕನ ಮೇಲಿರುವ ತಾತ್ಸಾರವನ್ನು ಹಿಂದೂತ್ವದ ಅಮಲಿಂದ ತಪ್ಪಿಸಿ ತಂದು ಓಟು ಮಾಡಿಕೊಳ್ಳಬೇಕಾದ ಸವಾಲು ಮೈತ್ರಿಕೂಟಕ್ಕೆ ಎದುರಾಗಿದೆ.

ಶೋಭಕ್ಕನ ದುಃಸ್ಥಿತಿ ಕಂಡು ಆರೆಸೆಸ್ ಬೆಚ್ಚಿಬಿದ್ದಿದೆ. ಈಯಮ್ಮನ ಫೀಲ್ಡಿಗೆ ಕಳಿಸಬೇಡಿ ಎಂದು ಬಿಜೆಪಿ ಲೀಡರ್‍ಗಳಿಗೆ ಆರೆಸೆಸ್ ಸೂತ್ರದಾರಿಗಳು ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ನಾವೇ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ, ಆದರೆ ಆಕೆ ತೆರೆಮರೆಯಲ್ಲೇ ಇರಬೇಕು, ಆಕೆ ಕಂಡರೆ ಮತದಾರರಿಗೆ ಆಕ್ರೋಶ ಉಕ್ಕುತ್ತದೆಂದು ಚೆಡ್ಡಿ ಚತುರರು ಅಲವತ್ತು ಕೇಳುತ್ತಿದ್ದಾರೆ. ಹುಸಿ ಹಿಂದೂತ್ವದ ದೆಸೆಯಿಂದ ಕರಾವಳಿಯಲ್ಲಿ ಒಂಚೂರು ಶೋಭಕ್ಕನಿಗೆ ಬೆಂಬಲ ಇದೆಯಾದರೂ ಮಲೆನಾಡಿನ ಭಾಗದಲ್ಲಿ ಆಕೆಗೆ ಮಾನ-ಮರ್ಯಾದೆಯೇ ಇಲ್ಲ ಬಿಜೆಪಿಉ ಸೆಕೆಂಡ್ ಕಿಂಗ್ ಅಮಿತ್ ಶಾ ತೆಂಗಿಗೆ ರೇಟು ಏರಿಸಿದಂತೆ ಅಡಿಕೆಗೂ ಬಂಪರ್ ಬೆಲೆಬರುವಂತೆ ಮಾಡುತ್ತೇನೆಂದು ಮೋಸ ಮಾಡಿದ್ದು ಚಿಕ್ಕಮಗಳೂರು ಕಡೆಯ ತೋಟಗಾರರನ್ನು ಕೆರಳಿಸಿದೆ. ಅಡಿಕೆ-ಕರಿಮೆಣಸು ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಬಿಜೆಪಿ ಅಂದರೆ ಬುಸುಗುಡುತ್ತಿದ್ದಾರೆ.

ಚಿಕ್ಕಮಗಳೂರು ಶಾಸಕ ಸಿಟಿ.ರವಿ “ಈಕೆ ಮತ್ತೆ ಗೆದ್ದರೆ ನಮಗೆ ಉಳಿಗಾಲವಿಲ್ಲವೆಂದು ಹೇಳುತ್ತಿರುವುದು, ಅತ್ತ ಉಡುಪಿ ಭಾಗದ ರಘುಪತಿ ಭಟ್ಟ, ಸುನೀಲ್ ಕುಮಾರ್ ಶೋಭಕ್ಕ ಸೋತುಹೋಗಲೆಂದು ಒಳಗೊಳಗೇ ಹರಕೆ ಹೊರುತ್ತಿದ್ದಾರೆ. ಓಟು ಕೇಳುವ ನೈತಿಕ ಧೈರ್ಯ ಶೋಭಕ್ಕನಿಗೆ ಇಲ್ಲ, ಆಕೆ ಮೋದಿಗಾಗಿ ಮತ ಹಾಕಿ ಎನ್ನುತ್ತಿದ್ದಾರೆ. ಆರೆಸೆಸ್ ತಂಡ ಹಿಂದೂತ್ವ ಉದ್ದೀತನಕ್ಕೆ ಬಿಜೆಪಿಗೆ ಓಟು ಅನಿವಾರ್ಯವೆಂದು ಪ್ರಚಾರ ನಡೆಸಿದೆ. ಯಡ್ಡಿಯನ್ನು ಕುಣಿಸಲು ಶೋಭಕ್ಕನ ಗೆಲ್ಲಿಸಿಕೊಳ್ಳಬೇಕಾದ ದರ್ದು ಚೆಡ್ಡಿ ಚೆತುರರ ಕಾಡುತ್ತಿದೆ. ಕೇಸರಿ ಪಡೆ ಏನೇ ಹೇಳಿದರೂ ಕಟ್ಟರ್ ಭಜರಂಗಿಳು “ನೋಟಾ” ಒತ್ತುವ ಸಾಧ್ಯತೆಯೇ ಜಾಸ್ತಿ ನೋಟಾ ಹೆಚ್ಚಾದಂತೆ ಮೈತ್ರಿ ಅಭ್ಯರ್ಥಿಯ ಸೋಲಿನ ಸಾಧ್ಯತೆ ಕಮ್ಮಿಯಾಗುತ್ತದೆ.

ಮಜಾ ಎಂದರೆ, ಕಾಂಗ್ರೆಸ್‍ನಲ್ಲಿ ಒಳ ಹೊಡೆತಗಳ ಆಟವಿಲ್ಲ ಕಾಪುನಲ್ಲಿ ಮಾಜಿ ಸಚಿವ ಸೊರಕೆ, ಉಡುಪುಯಲ್ಲಿ ಮಾಜಿ ಎಮ್ಮೆಲ್ಲೆ ಸಭಾಪತಿ, ಕಾರ್ಕಳದಲ್ಲಿ ಮೊಯ್ಲಿ ಮುನಿಯಾಲ್ ಬಣ, ಮಲೆನಾಡಲ್ಲಿ ಜೆಡಿಎಸ್-ಕಾಂಗ್ರೆಸ್ ತಂಡ ಮೊದಲಿನ ಹೊಟ್ಟೆಕಿಚ್ಚು ಬಿಟ್ಟು ದುಡಿಯುತ್ತಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾಗಿದ್ದ ವೇಗವೀರರು ಸ್ವಜಾತಿ ಪ್ರಮೋದ್ ಪರ ಏಕಗಂಟಲ್ಲಿ ಓಟು ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಘಟ್ಟದ ಮೇಲಿನ ಒಕ್ಕಲಿಗರ ಮತಕ್ಕಾಗಿ ದೇವೇಗೌಡ-ಕುಮಾರಣ್ಣ ಸ್ಟ್ರೇಟಜಿ ಹೆಣೆಯುತ್ತಿದ್ದಾರೆ. ಶೋಭಕ್ಕನ ಪರವಾಗಿ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟ ಒಬ್ಬರ ಬಿಟ್ಟರೆ ಉಳಿದ ಎಮ್ಮೆಲ್ಲೆಗಳು ಮೊದಲಿನ ನಿಷ್ಠೆ-ನಿಯತ್ತು ತೋರಿಸುತ್ತಿಲ್ಲ. ಹೀಗಾಗಿ ಶೋಭಕ್ಕನಿಗೆ ಬಿಜೆಪಿ ಓಟ್ ಬ್ಯಾಂಕಿನ ಶೇ.25-30 ಮತ ಖೋತಾ ಆಗುವ ಲೆಕ್ಕಾಚಾರ ನಡೆದಿದೆ. ಮೈತ್ರಿ ಕೂಟ ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಪಡೆದ ಅಷ್ಟೂ ಮತ ಪಡೆದರೂ ಸಾಕು, ಗೆಲುವಿನ ಛಾನ್ಸ್‍ನ ಗ್ರಾಫ್ಟ್ ಏರಿಕೆಯಾಗುತ್ತದೆ.

ಶೋಭಕ್ಕನಿಗೆ ಮೋದಿ ಮಂಕು ಬೂದಿ ಬಿಟ್ಟರೆ ಮತ್ತ್ಯಾವ ಪ್ಲಸ್ ಪಾಯಿಂಟ್ ಇಲ್ಲ. ಸುಳ್ಯ ಕಡೆಯ ಆಕೆಗಿಲ್ಲ, ಸ್ವಜಾತಿ ಮತ ಬಾಂಧವರೂ ಇಲ್ಲ! ಕರಾವಳಿಯ ಬಿಲ್ಲವರು ಮತ್ತು ಬಂಟರಿಗೆ ಸಂಘಪರಿವಾರದ ಹಿಂದೂತ್ವದ ಅಸಲೀ ಆಟದ ಹಿಕಮತ್ತು ಶೂದ್ರರಿಗೆಷ್ಟು ಗಂಡಾಂತರಕಾರಿ ಎಂಬುದು ಅರ್ಥವಾಗಿದೆ. ಬಿಲ್ಲವರು ಪಾಪದ ಹುಡುಗರು ಹಿಂದೂತ್ವದ ಹೆಸರಲ್ಲಿ ಜೈಲು ಪಾಲಾಗಿರುವ ಕರುಣಾ ಕತೆ ಆ ಜಾತಿಯ ಹಿರಿಯರ ಕಣ್ಣು ತೆರೆಸಿದರೆ ಮೈತ್ರಿಕೂಟದ ಗೆಲುವು ಇನ್ನಷ್ಟು ನಿಚ್ಚಳವಾಗುತ್ತದೆ. ಫೋಟೋ ಫಿನಿಶ್ ಫಲಿತಾಂಶ ಉಡುಪಿ-ಚಿಕ್ಕಮಗಳೂರು ಈ ಬಾರಿ ಕೊಡುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...