Homeಕರ್ನಾಟಕಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

ಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

- Advertisement -
- Advertisement -

| ನಹುಷ |
ಉಡುಪಿ-ಚಿಕ್ಕಮಗಳೂರು ಲೋಕಾ ರಣರಂಗದಲ್ಲಿ ಬಿಜೆಪಿಯ ಕೂಗುಮಾರಿ ಬ್ರಾಂಡಿನ ಶೋಭಾ ಕರಂದ್ಲಾಜೆ ಮತ್ತ ಜೆಡಿಎಸ್ ವೇಷದ ಕಾಂಗ್ರೆಸಿಗ ಪ್ರಮೋದ್ ಮಧ್ವರಾಜ್ ನಡುವೆ ಮುಖಾಮುಖಿ ಹಣಾಹಣಿ ನಡೆದಿದೆ. ಜನದ್ರೋಹದಿಂದ ಹೆಸರು ಕೆಡಿಸಿಕೊಂಡಿರುವ ಶೋಭಕ್ಕ ಹೋದಹೋದಲ್ಲಿ ಕಾರಿಂದ ಇಳಿಯಲಿಕ್ಕೂ ಸಾಧ್ಯವಾಗುತ್ತಿಲ್ಲ. ಆಕೆಗೆ ದಿನಗಳೆದಂತೆ ಸಂಕಟ ಹೆಚ್ಚಾಗುತ್ತಲೇ ಇದೆ. ಪ್ರಮೋದ್ ತನ್ನ ರಾಯಲ್ ದೌಲತ್ತಿನ ಹಮ್ಮು ಅಹಂಕಾರ ಬಿಟ್ಟು ಸಂಪ್ರದಾಯಿಕ ಶತ್ರುಗಳಿಗೆಲ್ಲಾ ಶರಣಾಗುತ್ತ ಅಖಾಡದಲ್ಲಿ ಗಟ್ಟಿಗೊಳ್ಳುತ್ತಿದ್ದಾರೆ. ಶೋಭಕ್ಕನ ಮೇಲಿರುವ ತಾತ್ಸಾರವನ್ನು ಹಿಂದೂತ್ವದ ಅಮಲಿಂದ ತಪ್ಪಿಸಿ ತಂದು ಓಟು ಮಾಡಿಕೊಳ್ಳಬೇಕಾದ ಸವಾಲು ಮೈತ್ರಿಕೂಟಕ್ಕೆ ಎದುರಾಗಿದೆ.

ಶೋಭಕ್ಕನ ದುಃಸ್ಥಿತಿ ಕಂಡು ಆರೆಸೆಸ್ ಬೆಚ್ಚಿಬಿದ್ದಿದೆ. ಈಯಮ್ಮನ ಫೀಲ್ಡಿಗೆ ಕಳಿಸಬೇಡಿ ಎಂದು ಬಿಜೆಪಿ ಲೀಡರ್‍ಗಳಿಗೆ ಆರೆಸೆಸ್ ಸೂತ್ರದಾರಿಗಳು ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ನಾವೇ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ, ಆದರೆ ಆಕೆ ತೆರೆಮರೆಯಲ್ಲೇ ಇರಬೇಕು, ಆಕೆ ಕಂಡರೆ ಮತದಾರರಿಗೆ ಆಕ್ರೋಶ ಉಕ್ಕುತ್ತದೆಂದು ಚೆಡ್ಡಿ ಚತುರರು ಅಲವತ್ತು ಕೇಳುತ್ತಿದ್ದಾರೆ. ಹುಸಿ ಹಿಂದೂತ್ವದ ದೆಸೆಯಿಂದ ಕರಾವಳಿಯಲ್ಲಿ ಒಂಚೂರು ಶೋಭಕ್ಕನಿಗೆ ಬೆಂಬಲ ಇದೆಯಾದರೂ ಮಲೆನಾಡಿನ ಭಾಗದಲ್ಲಿ ಆಕೆಗೆ ಮಾನ-ಮರ್ಯಾದೆಯೇ ಇಲ್ಲ ಬಿಜೆಪಿಉ ಸೆಕೆಂಡ್ ಕಿಂಗ್ ಅಮಿತ್ ಶಾ ತೆಂಗಿಗೆ ರೇಟು ಏರಿಸಿದಂತೆ ಅಡಿಕೆಗೂ ಬಂಪರ್ ಬೆಲೆಬರುವಂತೆ ಮಾಡುತ್ತೇನೆಂದು ಮೋಸ ಮಾಡಿದ್ದು ಚಿಕ್ಕಮಗಳೂರು ಕಡೆಯ ತೋಟಗಾರರನ್ನು ಕೆರಳಿಸಿದೆ. ಅಡಿಕೆ-ಕರಿಮೆಣಸು ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಬಿಜೆಪಿ ಅಂದರೆ ಬುಸುಗುಡುತ್ತಿದ್ದಾರೆ.

ಚಿಕ್ಕಮಗಳೂರು ಶಾಸಕ ಸಿಟಿ.ರವಿ “ಈಕೆ ಮತ್ತೆ ಗೆದ್ದರೆ ನಮಗೆ ಉಳಿಗಾಲವಿಲ್ಲವೆಂದು ಹೇಳುತ್ತಿರುವುದು, ಅತ್ತ ಉಡುಪಿ ಭಾಗದ ರಘುಪತಿ ಭಟ್ಟ, ಸುನೀಲ್ ಕುಮಾರ್ ಶೋಭಕ್ಕ ಸೋತುಹೋಗಲೆಂದು ಒಳಗೊಳಗೇ ಹರಕೆ ಹೊರುತ್ತಿದ್ದಾರೆ. ಓಟು ಕೇಳುವ ನೈತಿಕ ಧೈರ್ಯ ಶೋಭಕ್ಕನಿಗೆ ಇಲ್ಲ, ಆಕೆ ಮೋದಿಗಾಗಿ ಮತ ಹಾಕಿ ಎನ್ನುತ್ತಿದ್ದಾರೆ. ಆರೆಸೆಸ್ ತಂಡ ಹಿಂದೂತ್ವ ಉದ್ದೀತನಕ್ಕೆ ಬಿಜೆಪಿಗೆ ಓಟು ಅನಿವಾರ್ಯವೆಂದು ಪ್ರಚಾರ ನಡೆಸಿದೆ. ಯಡ್ಡಿಯನ್ನು ಕುಣಿಸಲು ಶೋಭಕ್ಕನ ಗೆಲ್ಲಿಸಿಕೊಳ್ಳಬೇಕಾದ ದರ್ದು ಚೆಡ್ಡಿ ಚೆತುರರ ಕಾಡುತ್ತಿದೆ. ಕೇಸರಿ ಪಡೆ ಏನೇ ಹೇಳಿದರೂ ಕಟ್ಟರ್ ಭಜರಂಗಿಳು “ನೋಟಾ” ಒತ್ತುವ ಸಾಧ್ಯತೆಯೇ ಜಾಸ್ತಿ ನೋಟಾ ಹೆಚ್ಚಾದಂತೆ ಮೈತ್ರಿ ಅಭ್ಯರ್ಥಿಯ ಸೋಲಿನ ಸಾಧ್ಯತೆ ಕಮ್ಮಿಯಾಗುತ್ತದೆ.

ಮಜಾ ಎಂದರೆ, ಕಾಂಗ್ರೆಸ್‍ನಲ್ಲಿ ಒಳ ಹೊಡೆತಗಳ ಆಟವಿಲ್ಲ ಕಾಪುನಲ್ಲಿ ಮಾಜಿ ಸಚಿವ ಸೊರಕೆ, ಉಡುಪುಯಲ್ಲಿ ಮಾಜಿ ಎಮ್ಮೆಲ್ಲೆ ಸಭಾಪತಿ, ಕಾರ್ಕಳದಲ್ಲಿ ಮೊಯ್ಲಿ ಮುನಿಯಾಲ್ ಬಣ, ಮಲೆನಾಡಲ್ಲಿ ಜೆಡಿಎಸ್-ಕಾಂಗ್ರೆಸ್ ತಂಡ ಮೊದಲಿನ ಹೊಟ್ಟೆಕಿಚ್ಚು ಬಿಟ್ಟು ದುಡಿಯುತ್ತಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾಗಿದ್ದ ವೇಗವೀರರು ಸ್ವಜಾತಿ ಪ್ರಮೋದ್ ಪರ ಏಕಗಂಟಲ್ಲಿ ಓಟು ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಘಟ್ಟದ ಮೇಲಿನ ಒಕ್ಕಲಿಗರ ಮತಕ್ಕಾಗಿ ದೇವೇಗೌಡ-ಕುಮಾರಣ್ಣ ಸ್ಟ್ರೇಟಜಿ ಹೆಣೆಯುತ್ತಿದ್ದಾರೆ. ಶೋಭಕ್ಕನ ಪರವಾಗಿ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟ ಒಬ್ಬರ ಬಿಟ್ಟರೆ ಉಳಿದ ಎಮ್ಮೆಲ್ಲೆಗಳು ಮೊದಲಿನ ನಿಷ್ಠೆ-ನಿಯತ್ತು ತೋರಿಸುತ್ತಿಲ್ಲ. ಹೀಗಾಗಿ ಶೋಭಕ್ಕನಿಗೆ ಬಿಜೆಪಿ ಓಟ್ ಬ್ಯಾಂಕಿನ ಶೇ.25-30 ಮತ ಖೋತಾ ಆಗುವ ಲೆಕ್ಕಾಚಾರ ನಡೆದಿದೆ. ಮೈತ್ರಿ ಕೂಟ ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಪಡೆದ ಅಷ್ಟೂ ಮತ ಪಡೆದರೂ ಸಾಕು, ಗೆಲುವಿನ ಛಾನ್ಸ್‍ನ ಗ್ರಾಫ್ಟ್ ಏರಿಕೆಯಾಗುತ್ತದೆ.

ಶೋಭಕ್ಕನಿಗೆ ಮೋದಿ ಮಂಕು ಬೂದಿ ಬಿಟ್ಟರೆ ಮತ್ತ್ಯಾವ ಪ್ಲಸ್ ಪಾಯಿಂಟ್ ಇಲ್ಲ. ಸುಳ್ಯ ಕಡೆಯ ಆಕೆಗಿಲ್ಲ, ಸ್ವಜಾತಿ ಮತ ಬಾಂಧವರೂ ಇಲ್ಲ! ಕರಾವಳಿಯ ಬಿಲ್ಲವರು ಮತ್ತು ಬಂಟರಿಗೆ ಸಂಘಪರಿವಾರದ ಹಿಂದೂತ್ವದ ಅಸಲೀ ಆಟದ ಹಿಕಮತ್ತು ಶೂದ್ರರಿಗೆಷ್ಟು ಗಂಡಾಂತರಕಾರಿ ಎಂಬುದು ಅರ್ಥವಾಗಿದೆ. ಬಿಲ್ಲವರು ಪಾಪದ ಹುಡುಗರು ಹಿಂದೂತ್ವದ ಹೆಸರಲ್ಲಿ ಜೈಲು ಪಾಲಾಗಿರುವ ಕರುಣಾ ಕತೆ ಆ ಜಾತಿಯ ಹಿರಿಯರ ಕಣ್ಣು ತೆರೆಸಿದರೆ ಮೈತ್ರಿಕೂಟದ ಗೆಲುವು ಇನ್ನಷ್ಟು ನಿಚ್ಚಳವಾಗುತ್ತದೆ. ಫೋಟೋ ಫಿನಿಶ್ ಫಲಿತಾಂಶ ಉಡುಪಿ-ಚಿಕ್ಕಮಗಳೂರು ಈ ಬಾರಿ ಕೊಡುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....