Homeಕರ್ನಾಟಕಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

ಉಡುಪಿ-ಚಿಕ್ಕಮಗಳೂರು: ಸೋಲಿನ ಭಯದಲ್ಲಿ ಶೋಭಕ್ಕ!

- Advertisement -
- Advertisement -

| ನಹುಷ |
ಉಡುಪಿ-ಚಿಕ್ಕಮಗಳೂರು ಲೋಕಾ ರಣರಂಗದಲ್ಲಿ ಬಿಜೆಪಿಯ ಕೂಗುಮಾರಿ ಬ್ರಾಂಡಿನ ಶೋಭಾ ಕರಂದ್ಲಾಜೆ ಮತ್ತ ಜೆಡಿಎಸ್ ವೇಷದ ಕಾಂಗ್ರೆಸಿಗ ಪ್ರಮೋದ್ ಮಧ್ವರಾಜ್ ನಡುವೆ ಮುಖಾಮುಖಿ ಹಣಾಹಣಿ ನಡೆದಿದೆ. ಜನದ್ರೋಹದಿಂದ ಹೆಸರು ಕೆಡಿಸಿಕೊಂಡಿರುವ ಶೋಭಕ್ಕ ಹೋದಹೋದಲ್ಲಿ ಕಾರಿಂದ ಇಳಿಯಲಿಕ್ಕೂ ಸಾಧ್ಯವಾಗುತ್ತಿಲ್ಲ. ಆಕೆಗೆ ದಿನಗಳೆದಂತೆ ಸಂಕಟ ಹೆಚ್ಚಾಗುತ್ತಲೇ ಇದೆ. ಪ್ರಮೋದ್ ತನ್ನ ರಾಯಲ್ ದೌಲತ್ತಿನ ಹಮ್ಮು ಅಹಂಕಾರ ಬಿಟ್ಟು ಸಂಪ್ರದಾಯಿಕ ಶತ್ರುಗಳಿಗೆಲ್ಲಾ ಶರಣಾಗುತ್ತ ಅಖಾಡದಲ್ಲಿ ಗಟ್ಟಿಗೊಳ್ಳುತ್ತಿದ್ದಾರೆ. ಶೋಭಕ್ಕನ ಮೇಲಿರುವ ತಾತ್ಸಾರವನ್ನು ಹಿಂದೂತ್ವದ ಅಮಲಿಂದ ತಪ್ಪಿಸಿ ತಂದು ಓಟು ಮಾಡಿಕೊಳ್ಳಬೇಕಾದ ಸವಾಲು ಮೈತ್ರಿಕೂಟಕ್ಕೆ ಎದುರಾಗಿದೆ.

ಶೋಭಕ್ಕನ ದುಃಸ್ಥಿತಿ ಕಂಡು ಆರೆಸೆಸ್ ಬೆಚ್ಚಿಬಿದ್ದಿದೆ. ಈಯಮ್ಮನ ಫೀಲ್ಡಿಗೆ ಕಳಿಸಬೇಡಿ ಎಂದು ಬಿಜೆಪಿ ಲೀಡರ್‍ಗಳಿಗೆ ಆರೆಸೆಸ್ ಸೂತ್ರದಾರಿಗಳು ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ನಾವೇ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ, ಆದರೆ ಆಕೆ ತೆರೆಮರೆಯಲ್ಲೇ ಇರಬೇಕು, ಆಕೆ ಕಂಡರೆ ಮತದಾರರಿಗೆ ಆಕ್ರೋಶ ಉಕ್ಕುತ್ತದೆಂದು ಚೆಡ್ಡಿ ಚತುರರು ಅಲವತ್ತು ಕೇಳುತ್ತಿದ್ದಾರೆ. ಹುಸಿ ಹಿಂದೂತ್ವದ ದೆಸೆಯಿಂದ ಕರಾವಳಿಯಲ್ಲಿ ಒಂಚೂರು ಶೋಭಕ್ಕನಿಗೆ ಬೆಂಬಲ ಇದೆಯಾದರೂ ಮಲೆನಾಡಿನ ಭಾಗದಲ್ಲಿ ಆಕೆಗೆ ಮಾನ-ಮರ್ಯಾದೆಯೇ ಇಲ್ಲ ಬಿಜೆಪಿಉ ಸೆಕೆಂಡ್ ಕಿಂಗ್ ಅಮಿತ್ ಶಾ ತೆಂಗಿಗೆ ರೇಟು ಏರಿಸಿದಂತೆ ಅಡಿಕೆಗೂ ಬಂಪರ್ ಬೆಲೆಬರುವಂತೆ ಮಾಡುತ್ತೇನೆಂದು ಮೋಸ ಮಾಡಿದ್ದು ಚಿಕ್ಕಮಗಳೂರು ಕಡೆಯ ತೋಟಗಾರರನ್ನು ಕೆರಳಿಸಿದೆ. ಅಡಿಕೆ-ಕರಿಮೆಣಸು ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ಬಿಜೆಪಿ ಅಂದರೆ ಬುಸುಗುಡುತ್ತಿದ್ದಾರೆ.

ಚಿಕ್ಕಮಗಳೂರು ಶಾಸಕ ಸಿಟಿ.ರವಿ “ಈಕೆ ಮತ್ತೆ ಗೆದ್ದರೆ ನಮಗೆ ಉಳಿಗಾಲವಿಲ್ಲವೆಂದು ಹೇಳುತ್ತಿರುವುದು, ಅತ್ತ ಉಡುಪಿ ಭಾಗದ ರಘುಪತಿ ಭಟ್ಟ, ಸುನೀಲ್ ಕುಮಾರ್ ಶೋಭಕ್ಕ ಸೋತುಹೋಗಲೆಂದು ಒಳಗೊಳಗೇ ಹರಕೆ ಹೊರುತ್ತಿದ್ದಾರೆ. ಓಟು ಕೇಳುವ ನೈತಿಕ ಧೈರ್ಯ ಶೋಭಕ್ಕನಿಗೆ ಇಲ್ಲ, ಆಕೆ ಮೋದಿಗಾಗಿ ಮತ ಹಾಕಿ ಎನ್ನುತ್ತಿದ್ದಾರೆ. ಆರೆಸೆಸ್ ತಂಡ ಹಿಂದೂತ್ವ ಉದ್ದೀತನಕ್ಕೆ ಬಿಜೆಪಿಗೆ ಓಟು ಅನಿವಾರ್ಯವೆಂದು ಪ್ರಚಾರ ನಡೆಸಿದೆ. ಯಡ್ಡಿಯನ್ನು ಕುಣಿಸಲು ಶೋಭಕ್ಕನ ಗೆಲ್ಲಿಸಿಕೊಳ್ಳಬೇಕಾದ ದರ್ದು ಚೆಡ್ಡಿ ಚೆತುರರ ಕಾಡುತ್ತಿದೆ. ಕೇಸರಿ ಪಡೆ ಏನೇ ಹೇಳಿದರೂ ಕಟ್ಟರ್ ಭಜರಂಗಿಳು “ನೋಟಾ” ಒತ್ತುವ ಸಾಧ್ಯತೆಯೇ ಜಾಸ್ತಿ ನೋಟಾ ಹೆಚ್ಚಾದಂತೆ ಮೈತ್ರಿ ಅಭ್ಯರ್ಥಿಯ ಸೋಲಿನ ಸಾಧ್ಯತೆ ಕಮ್ಮಿಯಾಗುತ್ತದೆ.

ಮಜಾ ಎಂದರೆ, ಕಾಂಗ್ರೆಸ್‍ನಲ್ಲಿ ಒಳ ಹೊಡೆತಗಳ ಆಟವಿಲ್ಲ ಕಾಪುನಲ್ಲಿ ಮಾಜಿ ಸಚಿವ ಸೊರಕೆ, ಉಡುಪುಯಲ್ಲಿ ಮಾಜಿ ಎಮ್ಮೆಲ್ಲೆ ಸಭಾಪತಿ, ಕಾರ್ಕಳದಲ್ಲಿ ಮೊಯ್ಲಿ ಮುನಿಯಾಲ್ ಬಣ, ಮಲೆನಾಡಲ್ಲಿ ಜೆಡಿಎಸ್-ಕಾಂಗ್ರೆಸ್ ತಂಡ ಮೊದಲಿನ ಹೊಟ್ಟೆಕಿಚ್ಚು ಬಿಟ್ಟು ದುಡಿಯುತ್ತಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾಗಿದ್ದ ವೇಗವೀರರು ಸ್ವಜಾತಿ ಪ್ರಮೋದ್ ಪರ ಏಕಗಂಟಲ್ಲಿ ಓಟು ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಘಟ್ಟದ ಮೇಲಿನ ಒಕ್ಕಲಿಗರ ಮತಕ್ಕಾಗಿ ದೇವೇಗೌಡ-ಕುಮಾರಣ್ಣ ಸ್ಟ್ರೇಟಜಿ ಹೆಣೆಯುತ್ತಿದ್ದಾರೆ. ಶೋಭಕ್ಕನ ಪರವಾಗಿ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟ ಒಬ್ಬರ ಬಿಟ್ಟರೆ ಉಳಿದ ಎಮ್ಮೆಲ್ಲೆಗಳು ಮೊದಲಿನ ನಿಷ್ಠೆ-ನಿಯತ್ತು ತೋರಿಸುತ್ತಿಲ್ಲ. ಹೀಗಾಗಿ ಶೋಭಕ್ಕನಿಗೆ ಬಿಜೆಪಿ ಓಟ್ ಬ್ಯಾಂಕಿನ ಶೇ.25-30 ಮತ ಖೋತಾ ಆಗುವ ಲೆಕ್ಕಾಚಾರ ನಡೆದಿದೆ. ಮೈತ್ರಿ ಕೂಟ ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಪಡೆದ ಅಷ್ಟೂ ಮತ ಪಡೆದರೂ ಸಾಕು, ಗೆಲುವಿನ ಛಾನ್ಸ್‍ನ ಗ್ರಾಫ್ಟ್ ಏರಿಕೆಯಾಗುತ್ತದೆ.

ಶೋಭಕ್ಕನಿಗೆ ಮೋದಿ ಮಂಕು ಬೂದಿ ಬಿಟ್ಟರೆ ಮತ್ತ್ಯಾವ ಪ್ಲಸ್ ಪಾಯಿಂಟ್ ಇಲ್ಲ. ಸುಳ್ಯ ಕಡೆಯ ಆಕೆಗಿಲ್ಲ, ಸ್ವಜಾತಿ ಮತ ಬಾಂಧವರೂ ಇಲ್ಲ! ಕರಾವಳಿಯ ಬಿಲ್ಲವರು ಮತ್ತು ಬಂಟರಿಗೆ ಸಂಘಪರಿವಾರದ ಹಿಂದೂತ್ವದ ಅಸಲೀ ಆಟದ ಹಿಕಮತ್ತು ಶೂದ್ರರಿಗೆಷ್ಟು ಗಂಡಾಂತರಕಾರಿ ಎಂಬುದು ಅರ್ಥವಾಗಿದೆ. ಬಿಲ್ಲವರು ಪಾಪದ ಹುಡುಗರು ಹಿಂದೂತ್ವದ ಹೆಸರಲ್ಲಿ ಜೈಲು ಪಾಲಾಗಿರುವ ಕರುಣಾ ಕತೆ ಆ ಜಾತಿಯ ಹಿರಿಯರ ಕಣ್ಣು ತೆರೆಸಿದರೆ ಮೈತ್ರಿಕೂಟದ ಗೆಲುವು ಇನ್ನಷ್ಟು ನಿಚ್ಚಳವಾಗುತ್ತದೆ. ಫೋಟೋ ಫಿನಿಶ್ ಫಲಿತಾಂಶ ಉಡುಪಿ-ಚಿಕ್ಕಮಗಳೂರು ಈ ಬಾರಿ ಕೊಡುವುದಂತೂ ಖರೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...