Homeಅಂಕಣಗಳುಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯ ಸ್ಪೀಕರ್ ಅವರಿಂದ ಶಿಕ್ಷೆಗೊಳಗಾದ 15 ಶಾಸಕರು ಉಪಚುನಾವಣೆಗೆ ನಿಲ್ಲಬಹುದೆಂದು ತೀರ್ಪು ನೀಡಿದೆ. ಸ್ಪೀಕರ್ ಅವರು ನೀಡಿದ್ದ ತೀರ್ಪನ್ನು ನ್ಯಾಯಾಧೀಶರು ಅಂಗೀಕರಿಸಿದರಾದರೂ ಶಿಕ್ಷೆಯ ಅವಧಿಯನ್ನು ತೀರ್ಮಾನಿಸುವ ಹಕ್ಕು ಅವರಿಗಿಲ್ಲ ಎಂದು ಹೇಳಿದೆ. ಒಟ್ಟಿನಲ್ಲಿ ಹೇಳುವುದಾದರೆ ಈ ಶಾಸಕರು ಶಿಕ್ಷಾರ್ಹರು ಆದರೆ Technical ground ಮೇಲೆ ಉಪಚುನಾವಣೆಗೆ ನಿಲ್ಲಲು ಅರ್ಹರು ಎಂದು ಹೇಳಿದ ಹಾಗಾಯಿತು. ಅನೇಕ ಸಾರಿ ಕಾನೂನಿಗನುಸಾರ ಸರಿ ಎನಿಸಿದ್ದು ನೈತಿಕವಾಗಿ ತಪ್ಪಾಗಿರುತ್ತದೆ. ಈಗ ಆಗಿರುವುದೂ ಅದೇ. ನ್ಯಾಯಾಧೀಶರು ತೀರ್ಪು ನೀಡುವ ಸಮಯದಲ್ಲಿ `ನೈತಿಕತೆ ಇಲ್ಲದವರನ್ನು ರಾಜಕೀಯ ಪಕ್ಷಗಳು ಪ್ರೋತ್ಸಾಹಿಸುತ್ತಿವೆ, ಅದರ ಫಲವನ್ನು ಅನುಭವಿಸುತ್ತವೆ’ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಈ 15 ಶಾಸಕರು ಸಮಯಸಾಧಕರು. ಮಂತ್ರಿ ಪದವಿ ಸಿಗಲಿಲ್ಲವೆಂದು ಗುಂಪುಗಾರಿಕೆ ಮಾಡುವವರು. ಪಿತೂರಿ ಮಾಡುವವರು. ಇವರನ್ನು ಬಳಸಿಕೊಂಡು ಸಮ್ಮಿಶ್ರ ಸರಕಾರವನ್ನು ಕೆಡವಿ ತಾವು ಅಧಿಕಾರಕ್ಕೆ ಬರುವ ಹುನ್ನಾರ ಭಾರತೀಯ ಜನತಾ ಪಕ್ಷದ್ದಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪನವರು ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ಹೇಳಿದರೆನ್ನಲಾದ ಮಾತುಗಳೇ ಇದಕ್ಕೆ ಸಾಕ್ಷಿ. ಕಾಂಗ್ರೆಸ್ ಮತ್ತು ಜೆಡಿಎಸ್‍ನ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದವರನ್ನು ಬಿಜೆಪಿ ಶಾಸಕರಾದ ಡಾ. ಅಶ್ವತ್‍ನಾರಾಯಣ್ ಅವರ ಉಸ್ತುವಾರಿಯಲ್ಲಿ ಮುಂಬೈನ ಒಂದು ಹೊಟೇಲ್‍ಗೆ ಕರೆದುಕೊಂಡು ಹೋಗಿ ರೆಸಾರ್ಟ್ ರಾಜಕೀಯ ಮಾಡಿಸಿದ್ದು, ಅವರನ್ನು ಪಕ್ಷಾಂತರ ಮಾಡುವಂತೆ ಪ್ರೇರಣೆ ನೀಡಿದ್ದು ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾರವರು, ಹಾಗಾಗಿ ನಾವು ಅನರ್ಹ ಶಾಸಕರ ತ್ಯಾಗವನ್ನು ಸ್ಮರಿಸಬೇಕು ಎಂಬುದು ಅವರ ಮಾತಿನ ತಾತ್ಪರ್ಯ.

ಯಡಿಯೂರಪ್ಪನವರ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಗಿತ್ತು. ಈ ಅಶಿಸ್ತಿನ ಶಾಸಕರು ಶಾಸನಸಭೆಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಶಾಸಕರ ಸಂಖ್ಯಾಬಲ ಹೆಚ್ಚಾಯಿತು. ಈ ಕಾರಣದಿಂದ ಸಮ್ಮಿಶ್ರ ಸರ್ಕಾರ ಪತನವಾಗುವುದು ಅನಿವಾರ್ಯವಾಯ್ತು. ಬಿಜೆಪಿ ಅಧಿಕಾರಕ್ಕೆ ಬಂತು.

ಈ 15 ಶಾಸಕರು ತಮ್ಮ ಅನರ್ಹತೆ ತೆಗೆದುಹಾಕಬೇಕೆಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮೊರೆ ಹೋದರು. ಅವರಿಗೆಲ್ಲ ಈಗ ಉಪಚುನಾವಣೆಗೆ ನಿಲ್ಲಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ಅವರೆಲ್ಲ ಪಿತೂರಿ ನಡೆಸಿದಾಗಲೇ ತೀರ್ಮಾನವಾಗಿದ್ದಂತೆ ಈಗ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 13 ಮಂದಿಗೆ ಬಿಜೆಪಿ ಉಪಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗಿದೆ.

ಈ 13 ಮಂದಿಯ ಭವಿಷ್ಯವನ್ನು ನಿರ್ಧರಿಸುವ ಜವಾಬ್ದಾರಿ ಈಗ ಮತದಾರರ ಕೋರ್ಟಿಗೆ ವರ್ಗಾವಣೆಯಾಗಿದೆ.
ಅನೇಕ ಚುನಾವಣೆಗಳನ್ನು ಅರಿತಿರುವ ನನಗೆ ಹೀಗೆನಿಸುತ್ತಿದೆ: ಮತದಾರರನ್ನು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಮಾಡಿಕೊಳ್ಳುತ್ತವೆ. ಹಣ ಹೆಂಡಕೊಟ್ಟು ಅವರ ಮತವನ್ನು ಕೊಳ್ಳುತ್ತವೆ. 5, 10ರೂ.ಗಳಿಂದ ಆರಂಭವಾದ ಮತದಾರರ ಕೊಳ್ಳುವಿಕೆ ಈಗ ಒಂದು ಮತಕ್ಕೆ 500, 1000ಕ್ಕೆ ಏರಿದೆ. ಇಷ್ಟೆಲ್ಲ ಚುನಾವಣಾ ಭ್ರಷ್ಟಾಚಾರ ಇದ್ದಾಗ್ಯೂ ಕೆಲವೊಮ್ಮೆ ಅನಿರೀಕ್ಷಿತ ಫಲಿತಾಂಶ ಹೊರಬರುವುದನ್ನು ನಾನು ಕಂಡಿದ್ದೇನೆ. ಮತದಾರರೆಲ್ಲ ಮಾತನಾಡಿಕೊಂಡಂತೆ ಕಾಣುವ ಈ ಫಲಿತಾಂಶ ನೋಡಿದಾಗ ಮತದಾರರೆಲ್ಲರೂ ಸಾರಾಸಗಟಾಗಿ ಭ್ರಷ್ಟರು ಎಂದು ಹೇಳಲು ಬರುವುದಿಲ್ಲ.

ಉದಾಹರಣೆಗೆ ಮತದಾತ ಒಂದೇ ಪಕ್ಷಕ್ಕೆ ಪದೇಪದೇ ಮತಹಾಕಿ ನೋಡುತ್ತಾನೆ. ಆ ಪಕ್ಷ ತನ್ನ ನಿರೀಕ್ಷೆಯಂತೆ ನಡೆದುಕೊಳ್ಳುತ್ತಿಲ್ಲ ಆ ಪಕ್ಷದ ಶಾಸಕರು ಅನೀತಿವಂತರು, ಭ್ರಷ್ಟರು, ಸ್ವಾರ್ಥಿಗಳು ಎಂದು ಕಂಡುಬಂದಾಗ ಮತದಾರರೆಲ್ಲ ಮಾತನಾಡಿಕೊಂಡಂತೆ ಆ ಪಕ್ಷಕ್ಕೆ ಸೋಲುಣಿಸುತ್ತಾರೆ. ಮತದಾರರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದವರಲ್ಲೇ ಯಾರೋ ಒಬ್ಬರಿಗೆ ಮಾತ್ರ ಮತ ನೀಡುವ ಅನಿವಾರ್ಯತೆ ಇರುವುದರಿಂದ ಮತದಾರ ಇನ್ನೊಂದು ಭ್ರಷ್ಟ ಪಕ್ಷದ ಅಭ್ಯರ್ಥಿಗೆ ಮತಹಾಕಿ ಗೆಲ್ಲಿಸುತ್ತಾರೆ. ಕಾಂಗ್ರೆಸ್ 50 ವರ್ಷಕ್ಕೆ ಮೇಲ್ಪಟ್ಟು ಸಕ್ರಿಯ ಚುನಾವಣೆಯಲ್ಲಿ ಗೆದ್ದುಬರುತ್ತಿತ್ತು. ಸ್ವಾತಂತ್ರ್ಯ ಬಂದ ಹೊಸದರಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ನಿಜ ಜನಸೇವಕರು ಹೆಚ್ಚಾಗಿದ್ದರು. ಅವರು ಚಾರಿತ್ರ್ಯವಂತರಾಗಿದ್ದರು, ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುವಂತವರಾಗಿದ್ದರು. ಹಣವಿಲ್ಲದಿದ್ದರೂ ಗುಣವಂತರಾಗಿದ್ದರು. ಎಂತಹ ಲಕ್ಷಾಧಿಪತಿ ಇವರ ವಿರುದ್ಧವಾಗಿ ನಿಂತರೂ ಮತದಾತರು ಈ ಸ್ವಾತಂತ್ರ್ಯ ಹೋರಾಟಗಾರನಿಗೇ ತಮ್ಮ ಮತಹಾಕಿ ಗೆಲ್ಲಿಸತ್ತಿದ್ದರು. ಕಾಲಕ್ರಮದಲ್ಲಿ ಹೊಸ ತಲೆಮಾರಿನ ಜನ ಚುನಾವಣೆಗಳಲ್ಲಿ ಸ್ಪರ್ಧಿಸಲು ತೊಡಗಿದರು. ಅವರಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸ ಗೊತ್ತಿಲ್ಲ, ತ್ಯಾಗ-ಬಲಿದಾನಗಳ ಪರಿಚಯವಿಲ್ಲ. ಅಪ್ಪನ ಆಸ್ತಿ ದೊರಕಿದೆ ಅದನ್ನು ಉಡಾಯಿಸುವುದು ನನ್ನ ಹಕ್ಕು ಎಂದು ಭಾವಿಸಿಕೊಂಡವರು. ಇವರ ಜೊತೆಗೆ ಅಧಿಕಾರದ ಅಮಲು ಅವರನ್ನು ಮತ್ತಷ್ಟು ಕೆಡಿಸಿತು. ಈ ಸ್ವಾರ್ಥಿಗಳು ಅಧಿಕಾರದ ಲಾಲಸೆಯಿಂದ ಪಕ್ಷಾಂತರ ಮಾಡುವ ಹವ್ಯಾಸ ಬೆಳೆಸಿಕೊಂಡರು. ಈಗ ಎಲ್ಲ ರಾಜಕೀಯ ಪಕ್ಷಗಳಲ್ಲೂ ಈ ಸ್ವಾರ್ಥಿಗಳದೇ ಪಾರುಪತ್ಯ. ಪ್ರಾಮಾಣಿಕರೂ, ನಿಸ್ವಾರ್ಥಿಗಳೂ, ಸಮಾಜಮುಖಿಗಳೂ ಆದ ಸದಸ್ಯರ ಸಂಖ್ಯೆ ಇಳಿಯುತ್ತಾ ಬಂದಿದೆ.

ಈಗ ಕೋಟ್ಯಧಿಪತಿಗಳು ನಮ್ಮ ಪ್ರತಿನಿಧಿಗಳು. ಹಣದ ಮೂಲಕ ಗೆಲ್ಲುವ ಕಲೆಯನ್ನು ಕರಗತ ಮಾಡಿಕೊಂಡಿರುವ, ಜಾತಿಯ ಬಲ ಉಳ್ಳ ಇವರು ಮಾತ್ರ ಚುನಾವಣೆಗಳಲ್ಲಿ ಈಗ ಗೆಲ್ಲುವವರು.

ಈಗ ಈ ಉಪಚುನಾವಣೆಗೆ ನಿಂತಿರುವ ಬಿಜೆಪಿಯ 13 ಉಮೇದುದಾರರೂ ಈ ಕಲ್ಯಾಣ ಗುಣಗಳನ್ನು ಹೊಂದಿದವರು! ನಾಲ್ಕಾರು ತಿಂಗಳಿಂದ ಈ ನೀತಿಗೆಟ್ಟ ಶಾಸಕರ ಹುಚ್ಚಾಟವನ್ನು ಮತದಾತರು ನೋಡುತ್ತಿದ್ದಾರೆ. ಇವರು ಪ್ರಜಾಪ್ರತಿನಿಧಿಗಳಾಗಲು ಯೋಗ್ಯರಲ್ಲ ಎಂಬುದನ್ನು ಗಮನಿಸುತ್ತಾ ಬಂದಿದ್ದಾರೆ. ಈ 13 ಕ್ಷೇತ್ರಗಳ ಮತದಾರ ಅವರಿಗೆಲ್ಲ ಪಾಠ ಕಲಿಸುವರೆಂಬ ನಂಬಿಕೆ ನನ್ನದು.
ಮುಖ್ಯಮಂತ್ರಿ ಯಡಿಯೂರಪ್ಪನವರು ನೇರವಾಗಿ ಒಬ್ಬ ಶಾಸಕರನ್ನು ಕೊಳ್ಳುವ ಪ್ರಯತ್ನ ಮಾಡಿದ ಸಿಡಿಯೊಂದಿದೆ. ಅವರ ವಿರುದ್ಧ ಒಂದು ಕಟ್ಳೆಯನ್ನು ಹೂಡಲಾಗಿದೆ.

ಈ 13 ಮಂದಿ ಭ್ರಷ್ಟ ಸ್ವಾರ್ಥಿ ಶಾಸಕರನ್ನು ಬಿಜೆಪಿಗೆ ಎಳೆಯಲು ಅವರನ್ನು ಮುಂಬಯಿನ ಹೊಟೇಲ್ ಒಂದರಲ್ಲಿ ವಾಸ್ತವ್ಯ ಮಾಡಿಸಿದ ಅಮಿತ್ ಷಾ ಅವರ ಗೇಮ್ ಕುರಿತು ಯಡಿಯೂರಪ್ಪನವರು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದರೆನ್ನಲಾದ ಧ್ವನಿಮುದ್ರಣವನ್ನು ಲಗತ್ತಿಸಿ ನ್ಯಾಯಾಲಯದಲ್ಲಿ ದೂರನ್ನಿತ್ತಿರುವ ವರದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಮಂತ್ರಿಮಂಡಲದಲ್ಲಿ ಗೃಹಮಂತ್ರಿಯಾಗಿರುವವರು. ಈಗ ಅವರ ಮೇಲೆ 17 ಪ್ರಜಾಪ್ರತಿನಿಧಿಗಳನ್ನು ಭ್ರಷ್ಟರಾಗಿಸಿದ ಆರೋಪ ಕೇಳಿಬಂದಿದೆ. ಮೋದಿಯವರು ಅವರ ಮೇಲೆ ಕ್ರಮಕೈಗೊಳ್ಳುತ್ತಾರಾ? ಅಷ್ಟೊಂದು ಪಾರದರ್ಶಕತೆ, ಪ್ರಾಮಾಣಿಕತೆ ಬಿಜೆಪಿ ಮತ್ತು ಅದನ್ನು ನಿಯಂತ್ರಿಸುತ್ತಿರುವ ಆರೆಸೆಸ್‍ಗಿದೆಯಾ? ಎಲ್ಲವೂ ಈ ಉಪಚುನಾವಣೆಯಲ್ಲಿ ಮತದಾರ ಕೊಡುವ ತೀರ್ಪನ್ನು ಅವಲಂಬಿಸಿದೆ. ಈಗ ನಾವು ಜಾಗೃತಗೊಳ್ಳದಿದ್ದರೆ ಭವಿಷ್ಯದಲ್ಲಿ ಇದಕ್ಕಿಂತಲೂ ಕೆಟ್ಟ ರಾಜಕೀಯ ಪ್ರಹಸನಗಳಿಗೆ ನಾವೇ ಕಾರಣೀಭೂತರಾಗುತ್ತೇವೆ. ಅಷ್ಟೇ ಅಲ್ಲ ಅಂತಹ ಪ್ರಹಸನಗಳ ಹೊರೆ ನಮ್ಮ ಮಕ್ಕಳ ಹೆಗಲೇರಲಿದೆ. ನಮಗಾಗಿ ಅಲ್ಲದಿದ್ದರೂ ನಮ್ಮ ಮುಂದಿನ ಪೀಳಿಗೆಯವರಿಗಾದರೂ ಒಂದಷ್ಟು ನೈತಿಕ ರಾಜಕಾರಣವನ್ನು ಉಳಿಸುವ ಗುರುತರವಾದ ಜವಾಬ್ಧಾರಿ ನಮ್ಮೆದುರಿಗಿದೆ. ಮತದಾರನ ತೀರ್ಪಿಗಾಗಿ ನಾನು ಆಶಾವಾದಿಯಾಗಿ ಕಾಯುತ್ತಿದ್ದೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...