Homeಮುಖಪುಟಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

- Advertisement -
- Advertisement -

ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ ನಡೆದ ಎಲ್ಲಾ 47 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವ ಶೀರ್ಷಿಕೆಯ ರೂಪದಲ್ಲಿ ಜಾಹೀರಾತನ್ನು ಪ್ರಕಟಿಸಿದ್ದ ಎಂಟು ಪತ್ರಿಕೆಗಳಿಗೆ ಭಾರತ ಚುನಾವಣಾ ಆಯೋಗ (ಇಸಿಐ) ನೋಟಿಸ್ ನೀಡಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ), ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಇಸಿಐ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾನುವಾರ ರಾತ್ರಿ ಎಫ್‌ಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಸ್ಸಾಂ ಕಾಂಗ್ರೆಸ್‌‌ನ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದ್ದರು. ನಂತರ ದೂರು ಪರಿಶೀಲಿಸಿದ ಇಸಿಐ ಪತ್ರಿಕೆಗಳಿಗೆ ನೋಟಿಸ್ ನೀಡಿದೆ.

ದಿ ಅಸ್ಸಾಂ ಟ್ರಿಬ್ಯೂನ್, ಅಸೋಮಿಯಾ ಪ್ರತಿದಿನ್, ಅಮರ್ ಅಸೋಮ್, ನಿಯೋಮಿಯಾ ಬಾರ್ತಾ, ಅಸೋಮಿಯಾ ಖಬೋರ್, ದೈನಿಕ್ ಅಸ್ಸಾಂ, ದೈನಿಕ್ ಜುಗಶಂಕಾ ಮತ್ತು ದೈನಿಕ್ ಪೂರ್ಣೋದಯ ಸೇರಿ ಪ್ರಮುಖ ಇಂಗ್ಲಿಷ್, ಅಸ್ಸಾಮೀಸ್, ಹಿಂದಿ ಮತ್ತು ಬಂಗಾಳಿ ಪತ್ರಿಕೆಗಳು ಬಿಜೆಪಿ ನೀಡಿದ್ದ ಜಾಹಿರಾತನ್ನು ಪ್ರಕಟಿಸಿದ್ದವು.

ಅಸ್ಸಾಂ ಮುಖ್ಯ ಚುನಾವಣಾ ಅಧಿಕಾರಿ ನಿತಿನ್ ಖಡೆ, ಸೋಮವಾರ ಸಂಜೆ 7 ಗಂಟೆಯೊಳಗೆ ಆಯೋಗಕ್ಕೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ವರದಿಯನ್ನು ಕಳುಹಿಸುವಂತೆ ಪತ್ರಿಕೆಗಳಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ಪಡೆದುಕೊಂಡಿದ್ದ ಪತ್ರಿಕೆಗಳು ಈಗಾಗಲೇ ತಮ್ಮ ವರದಿಗಳನ್ನು ಇಸಿಐಗೆ ರವಾನಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

ಚುನಾವಣೆ ನಡೆದ ಅಸ್ಸಾಂನಲ್ಲಿನ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸಿದೆ ಎಂಬ ‘ಜಾಹೀರಾತನ್ನು, ಸುದ್ದಿಯ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯದ ಬಿಜೆಪಿ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಿಕೆಗಳ ವಿರುದ್ದ ಕಾಂಗ್ರೆಸ್ ದೂರು ದಾಖಲಿಸಿತ್ತು.

“ಬಿಜೆಪಿ ನಾಯಕರು ಮತ್ತು ಸದಸ್ಯರು ಎಂಸಿಸಿ, ಜನರ ಪ್ರಾತಿನಿಧ್ಯ ಕಾಯ್ದೆ, 1951 ಮತ್ತು ಇಸಿಐನ ಸಂಬಂಧಿತ ಸೂಚನೆಗಳು ಮತ್ತು ಮಾಧ್ಯಮ ನೀತಿಗಳ ಉಲ್ಲಂಘನೆಯಾಗಿದೆ. ಬಿಜೆಪಿಗೆ ಸೋಲಾಗುತ್ತದೆ ಎಂದು ತಿಳಿದ ನಂತರ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಹತಾಶ, ಅಕ್ರಮ ಮತ್ತು ಅಸಂವಿಧಾನಿಕ ವಿಧಾನಗಳನ್ನು ಆಶ್ರಯಿಸಿದ್ದಾರೆ” ಎಂದು ನಿರನ್ ಬೋರಾ ಹೇಳಿದ್ದರು.

“ಮತದಾರರ ಮನಸ್ಸನ್ನು ಪೂರ್ವಾಗ್ರಹ ಪೀಡಿತಗೊಳಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಸ್ತುತಪಡಿಸಲಾಗಿದೆ. ಈ ದುರುದ್ದೇಶಪೂರಿತ ಮತ್ತು ತಿರುಚಿರುವ ಜಾಹೀರಾತುಗಳು ಜನರ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ಎ ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ” ಎಂದು ಅವರು ಆರೋಪಿಸಿದ್ದರು.

ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನದ ವೇಳೆ ಒಟ್ಟು 81.09 ಲಕ್ಷ ಮತದಾರರಲ್ಲಿ ಶೇಕಡಾ 79.93 ರಷ್ಟು ಜನರು 47 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 39 ಸ್ಥಾನಗಳಿಗೆ ಚುನಾವಣೆ ಏಪ್ರಿಲ್ 1 ರಂದು ಮತ್ತು 40 ಸ್ಥಾನಗಳಿಗೆ ಮೂರನೇ ಮತ್ತು ಅಂತಿಮ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.


ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...