Homeಮುಖಪುಟಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

- Advertisement -
- Advertisement -

ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ ನಡೆದ ಎಲ್ಲಾ 47 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವ ಶೀರ್ಷಿಕೆಯ ರೂಪದಲ್ಲಿ ಜಾಹೀರಾತನ್ನು ಪ್ರಕಟಿಸಿದ್ದ ಎಂಟು ಪತ್ರಿಕೆಗಳಿಗೆ ಭಾರತ ಚುನಾವಣಾ ಆಯೋಗ (ಇಸಿಐ) ನೋಟಿಸ್ ನೀಡಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ), ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಇಸಿಐ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾನುವಾರ ರಾತ್ರಿ ಎಫ್‌ಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಸ್ಸಾಂ ಕಾಂಗ್ರೆಸ್‌‌ನ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದ್ದರು. ನಂತರ ದೂರು ಪರಿಶೀಲಿಸಿದ ಇಸಿಐ ಪತ್ರಿಕೆಗಳಿಗೆ ನೋಟಿಸ್ ನೀಡಿದೆ.

ದಿ ಅಸ್ಸಾಂ ಟ್ರಿಬ್ಯೂನ್, ಅಸೋಮಿಯಾ ಪ್ರತಿದಿನ್, ಅಮರ್ ಅಸೋಮ್, ನಿಯೋಮಿಯಾ ಬಾರ್ತಾ, ಅಸೋಮಿಯಾ ಖಬೋರ್, ದೈನಿಕ್ ಅಸ್ಸಾಂ, ದೈನಿಕ್ ಜುಗಶಂಕಾ ಮತ್ತು ದೈನಿಕ್ ಪೂರ್ಣೋದಯ ಸೇರಿ ಪ್ರಮುಖ ಇಂಗ್ಲಿಷ್, ಅಸ್ಸಾಮೀಸ್, ಹಿಂದಿ ಮತ್ತು ಬಂಗಾಳಿ ಪತ್ರಿಕೆಗಳು ಬಿಜೆಪಿ ನೀಡಿದ್ದ ಜಾಹಿರಾತನ್ನು ಪ್ರಕಟಿಸಿದ್ದವು.

ಅಸ್ಸಾಂ ಮುಖ್ಯ ಚುನಾವಣಾ ಅಧಿಕಾರಿ ನಿತಿನ್ ಖಡೆ, ಸೋಮವಾರ ಸಂಜೆ 7 ಗಂಟೆಯೊಳಗೆ ಆಯೋಗಕ್ಕೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ವರದಿಯನ್ನು ಕಳುಹಿಸುವಂತೆ ಪತ್ರಿಕೆಗಳಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ಪಡೆದುಕೊಂಡಿದ್ದ ಪತ್ರಿಕೆಗಳು ಈಗಾಗಲೇ ತಮ್ಮ ವರದಿಗಳನ್ನು ಇಸಿಐಗೆ ರವಾನಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

ಚುನಾವಣೆ ನಡೆದ ಅಸ್ಸಾಂನಲ್ಲಿನ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸಿದೆ ಎಂಬ ‘ಜಾಹೀರಾತನ್ನು, ಸುದ್ದಿಯ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯದ ಬಿಜೆಪಿ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಿಕೆಗಳ ವಿರುದ್ದ ಕಾಂಗ್ರೆಸ್ ದೂರು ದಾಖಲಿಸಿತ್ತು.

“ಬಿಜೆಪಿ ನಾಯಕರು ಮತ್ತು ಸದಸ್ಯರು ಎಂಸಿಸಿ, ಜನರ ಪ್ರಾತಿನಿಧ್ಯ ಕಾಯ್ದೆ, 1951 ಮತ್ತು ಇಸಿಐನ ಸಂಬಂಧಿತ ಸೂಚನೆಗಳು ಮತ್ತು ಮಾಧ್ಯಮ ನೀತಿಗಳ ಉಲ್ಲಂಘನೆಯಾಗಿದೆ. ಬಿಜೆಪಿಗೆ ಸೋಲಾಗುತ್ತದೆ ಎಂದು ತಿಳಿದ ನಂತರ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಹತಾಶ, ಅಕ್ರಮ ಮತ್ತು ಅಸಂವಿಧಾನಿಕ ವಿಧಾನಗಳನ್ನು ಆಶ್ರಯಿಸಿದ್ದಾರೆ” ಎಂದು ನಿರನ್ ಬೋರಾ ಹೇಳಿದ್ದರು.

“ಮತದಾರರ ಮನಸ್ಸನ್ನು ಪೂರ್ವಾಗ್ರಹ ಪೀಡಿತಗೊಳಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಸ್ತುತಪಡಿಸಲಾಗಿದೆ. ಈ ದುರುದ್ದೇಶಪೂರಿತ ಮತ್ತು ತಿರುಚಿರುವ ಜಾಹೀರಾತುಗಳು ಜನರ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ಎ ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ” ಎಂದು ಅವರು ಆರೋಪಿಸಿದ್ದರು.

ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನದ ವೇಳೆ ಒಟ್ಟು 81.09 ಲಕ್ಷ ಮತದಾರರಲ್ಲಿ ಶೇಕಡಾ 79.93 ರಷ್ಟು ಜನರು 47 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 39 ಸ್ಥಾನಗಳಿಗೆ ಚುನಾವಣೆ ಏಪ್ರಿಲ್ 1 ರಂದು ಮತ್ತು 40 ಸ್ಥಾನಗಳಿಗೆ ಮೂರನೇ ಮತ್ತು ಅಂತಿಮ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.


ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...