Homeಮುಖಪುಟಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

- Advertisement -
- Advertisement -

ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ ನಡೆದ ಎಲ್ಲಾ 47 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವ ಶೀರ್ಷಿಕೆಯ ರೂಪದಲ್ಲಿ ಜಾಹೀರಾತನ್ನು ಪ್ರಕಟಿಸಿದ್ದ ಎಂಟು ಪತ್ರಿಕೆಗಳಿಗೆ ಭಾರತ ಚುನಾವಣಾ ಆಯೋಗ (ಇಸಿಐ) ನೋಟಿಸ್ ನೀಡಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ), ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಇಸಿಐ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾನುವಾರ ರಾತ್ರಿ ಎಫ್‌ಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಸ್ಸಾಂ ಕಾಂಗ್ರೆಸ್‌‌ನ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದ್ದರು. ನಂತರ ದೂರು ಪರಿಶೀಲಿಸಿದ ಇಸಿಐ ಪತ್ರಿಕೆಗಳಿಗೆ ನೋಟಿಸ್ ನೀಡಿದೆ.

ದಿ ಅಸ್ಸಾಂ ಟ್ರಿಬ್ಯೂನ್, ಅಸೋಮಿಯಾ ಪ್ರತಿದಿನ್, ಅಮರ್ ಅಸೋಮ್, ನಿಯೋಮಿಯಾ ಬಾರ್ತಾ, ಅಸೋಮಿಯಾ ಖಬೋರ್, ದೈನಿಕ್ ಅಸ್ಸಾಂ, ದೈನಿಕ್ ಜುಗಶಂಕಾ ಮತ್ತು ದೈನಿಕ್ ಪೂರ್ಣೋದಯ ಸೇರಿ ಪ್ರಮುಖ ಇಂಗ್ಲಿಷ್, ಅಸ್ಸಾಮೀಸ್, ಹಿಂದಿ ಮತ್ತು ಬಂಗಾಳಿ ಪತ್ರಿಕೆಗಳು ಬಿಜೆಪಿ ನೀಡಿದ್ದ ಜಾಹಿರಾತನ್ನು ಪ್ರಕಟಿಸಿದ್ದವು.

ಅಸ್ಸಾಂ ಮುಖ್ಯ ಚುನಾವಣಾ ಅಧಿಕಾರಿ ನಿತಿನ್ ಖಡೆ, ಸೋಮವಾರ ಸಂಜೆ 7 ಗಂಟೆಯೊಳಗೆ ಆಯೋಗಕ್ಕೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ವರದಿಯನ್ನು ಕಳುಹಿಸುವಂತೆ ಪತ್ರಿಕೆಗಳಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ಪಡೆದುಕೊಂಡಿದ್ದ ಪತ್ರಿಕೆಗಳು ಈಗಾಗಲೇ ತಮ್ಮ ವರದಿಗಳನ್ನು ಇಸಿಐಗೆ ರವಾನಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

ಚುನಾವಣೆ ನಡೆದ ಅಸ್ಸಾಂನಲ್ಲಿನ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸಿದೆ ಎಂಬ ‘ಜಾಹೀರಾತನ್ನು, ಸುದ್ದಿಯ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯದ ಬಿಜೆಪಿ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಿಕೆಗಳ ವಿರುದ್ದ ಕಾಂಗ್ರೆಸ್ ದೂರು ದಾಖಲಿಸಿತ್ತು.

“ಬಿಜೆಪಿ ನಾಯಕರು ಮತ್ತು ಸದಸ್ಯರು ಎಂಸಿಸಿ, ಜನರ ಪ್ರಾತಿನಿಧ್ಯ ಕಾಯ್ದೆ, 1951 ಮತ್ತು ಇಸಿಐನ ಸಂಬಂಧಿತ ಸೂಚನೆಗಳು ಮತ್ತು ಮಾಧ್ಯಮ ನೀತಿಗಳ ಉಲ್ಲಂಘನೆಯಾಗಿದೆ. ಬಿಜೆಪಿಗೆ ಸೋಲಾಗುತ್ತದೆ ಎಂದು ತಿಳಿದ ನಂತರ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಹತಾಶ, ಅಕ್ರಮ ಮತ್ತು ಅಸಂವಿಧಾನಿಕ ವಿಧಾನಗಳನ್ನು ಆಶ್ರಯಿಸಿದ್ದಾರೆ” ಎಂದು ನಿರನ್ ಬೋರಾ ಹೇಳಿದ್ದರು.

“ಮತದಾರರ ಮನಸ್ಸನ್ನು ಪೂರ್ವಾಗ್ರಹ ಪೀಡಿತಗೊಳಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಸ್ತುತಪಡಿಸಲಾಗಿದೆ. ಈ ದುರುದ್ದೇಶಪೂರಿತ ಮತ್ತು ತಿರುಚಿರುವ ಜಾಹೀರಾತುಗಳು ಜನರ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ಎ ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ” ಎಂದು ಅವರು ಆರೋಪಿಸಿದ್ದರು.

ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನದ ವೇಳೆ ಒಟ್ಟು 81.09 ಲಕ್ಷ ಮತದಾರರಲ್ಲಿ ಶೇಕಡಾ 79.93 ರಷ್ಟು ಜನರು 47 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 39 ಸ್ಥಾನಗಳಿಗೆ ಚುನಾವಣೆ ಏಪ್ರಿಲ್ 1 ರಂದು ಮತ್ತು 40 ಸ್ಥಾನಗಳಿಗೆ ಮೂರನೇ ಮತ್ತು ಅಂತಿಮ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.


ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...