Homeಮುಖಪುಟರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

- Advertisement -
- Advertisement -

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರದ 7, ತಮಿಳುನಾಡಿನ 6, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ತಲಾ 5, ಒಡಿಶಾದ 4, ಅಸ್ಸಾಂನ 3, ಛತ್ತೀಸ್‌ಗಢ, ಹರಿಯಾಣ ಮತ್ತು ತೆಲಂಗಾಣದ ತಲಾ 2 ಮತ್ತು ಹಿಮಾಚಲ ಪ್ರದೇಶದ 1 ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.

ಕೆಲ ರಾಜ್ಯಗಳಲ್ಲಿ ಮತದಾನ ಅಗತ್ಯವಿದ್ದರೂ, ಏಳು ರಾಜ್ಯಗಳ 26 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದೇ ಮತ ಎಣಿಕೆ ನಡೆಯಲಿದೆ.

ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ಮತದಾನ ಅಗತ್ಯವಾಗಿದ್ದು, ಅಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ಸಕ್ರಿಯವಾಗಿ ಸಜ್ಜುಗೊಳಿಸಿವೆ. ಈ ರಾಜ್ಯಗಳು ಒಟ್ಟಾಗಿ 11 ಸ್ಥಾನಗಳನ್ನು ಹೊಂದಿವೆ.

ಈ ಚುನಾವಣೆ ರಾಜಕೀಯ ಚಟುವಟಿಕೆಗಳನ್ನು ಗರಿಗೇರಿಸಿದ್ದು, ಪಕ್ಷಗಳು ವಿಪ್ ಜಾರಿ ಮಾಡುವ ಮೂಲಕ ಅಡ್ಡ ಮತದಾನವನ್ನು ತಡೆಯಲು ಶಾಸಕರನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಬಿಹಾರದಲ್ಲಿ ಎನ್‌ಡಿಎ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದೆ. ಸಿಎಂ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಉಪೇಂದ್ರ ಕುಶ್ವಾಹ ರಾಮ್ ನಾಥ್ ಠಾಕೂರ್ ಶಿವೇಶ್ ಕುಮಾರ್ ಕಣದಲ್ಲಿದ್ದಾರೆ.

ವಿರೋಧ ಪಕ್ಷವಾದ ಆರ್‌ಜೆಡಿ ತೇಜಸ್ವಿ ಯಾದವ್ ಅವರ ಬೆಂಬಲವನ್ನು ನಂಬಿದ್ದು, ಅವರು ಎಐಎಂಐಎಂ ಮತ್ತು ಇತರ ಪಕ್ಷಗಳಿಂದ ಬೆಂಬಲ ಕೋರಿದ್ದಾರೆ.

ಒಡಿಶಾದಲ್ಲಿ ರಾಜ್ಯಸಭಾ ಚುನಾವಣೆ ತೀವ್ರ ರಾಜಕೀಯ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅವರು ಖಾಲಿ ಚೆಕ್‌ನೊಂದಿಗೆ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಇದೇ ಸಮಯದಲ್ಲಿ, ಬಿಜೆಪಿ ತನ್ನ ಶಾಸಕರನ್ನು ರಾಜ್ಯಸಭಾ ಮತದಾನ ಕಾರ್ಯವಿಧಾನದ ತರಬೇತಿ ನೆಪವೊಡ್ಡಿ ಪಾರಾದೀಪ್‌ಗೆ ಸ್ಥಳಾಂತರಿಸಿದೆ.

ಈ ನಡುವೆ, ಮಾಜಿ ಸಿಎಂ ನವೀನ್ ಪಟ್ನಾಯಕ್ ಪಕ್ಷದ ಶಾಸಕರನ್ನು ಭೇಟಿ ಮಾಡಿ ಅಡ್ಡ ಮತದಾನ ಮಾಡದಂತೆ ಮನವಿ ಮಾಡಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ಶಿಮ್ಲಾ ಬಳಿಯ ರೆಸಾರ್ಟ್‌ಗಳಿಂದ ಕಸೌಲಿಗೆ ಬಿಗಿ ಭದ್ರತೆಯ ನಡುವೆ ಸ್ಥಳಾಂತರಿಸಿದೆ. ಸಂಜಯ್ ಭಾಟಿಯಾ, ಕರಮ್ವೀರ್ ಸಿಂಗ್ ಬೌಧ್ ಮತ್ತು ಸತೀಶ್ ನಂದಲ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಮೇಲ್ಮನೆಯಲ್ಲಿ ಸ್ಥಾನ ಪಡೆಯಲು ಪ್ರತಿ ಅಭ್ಯರ್ಥಿಗೆ ಶಾಸಕರ 31 ಮತಗಳು ಬೇಕಾಗುತ್ತವೆ.

ಮಹಾರಾಷ್ಟ್ರದ 7, ತಮಿಳುನಾಡಿನ 6, ತೆಲಂಗಾಣದ 2, ಛತ್ತೀಸ್‌ಗಢದ 2, ಅಸ್ಸಾಂನ 3 ಮತ್ತು ಹಿಮಾಚಲ ಪ್ರದೇಶದ ಒಬ್ಬರು ಅಭ್ಯರ್ಥಿ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧಿಕೃತವಾಗಿ ಮಾತ್ರ ಫಲಿತಾಂಶ ಪ್ರಕಟಗೊಳ್ಳಬೇಕಿದೆ.

ತೆಲಂಗಾಣದ ಅಭಿಷೇಕ್ ಮನು ಸಿಂಘ್ವಿ ಮತ್ತು ತಮಿಳುನಾಡಿನ ಅನ್ಬುಮಣಿ ರಾಮದಾಸ್ ಅವರು ಅವಿರೋಧವಾಗಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳು.

ಇಂದು ಮತದಾನ ನಡೆಯುತ್ತಿರುವ ಆರು ರಾಜ್ಯಗಳಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಎನ್‌ಡಿಎ, 234 ಸದಸ್ಯ ಬಲದ ರಾಜ್ಯಸಭೆಯಲ್ಲಿ 134 ಸ್ಥಾನಗಳನ್ನು ಹೊಂದಿದ್ದು, ತನ್ನ ಬಲವನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಿದೆ.

ಚುನಾವಣೆಯ ನಡೆಯುತ್ತಿರುವ ನಾಲ್ಕು ರಾಜ್ಯಗಳನ್ನು ಆಳುತ್ತಿರುವ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ, ಪ್ರಸ್ತುತ ಮೇಲ್ಮನೆಯಲ್ಲಿ 80 ಸ್ಥಾನಗಳನ್ನು ಹೊಂದಿದೆ.

ಆದ್ದರಿಂದ, ಈ ಚುನಾವಣೆಯ ಫಲಿತಾಂಶ ಮುಂಬರುವ ತಿಂಗಳುಗಳಲ್ಲಿ ರಾಜ್ಯಸಭೆಯಲ್ಲಿ ಅಧಿಕಾರದ ಸಮತೋಲನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...