Homeಕರ್ನಾಟಕಕರ್ನಾಟಕದಲ್ಲಿಯೂ ಚುನಾವಣೆ; ಈ ಉಪಚುನಾವಣೆಗಳಲ್ಲಿಯೂ ಬಿಜೆಪಿಯದ್ದೇ ಮೇಲುಗೈ?

ಕರ್ನಾಟಕದಲ್ಲಿಯೂ ಚುನಾವಣೆ; ಈ ಉಪಚುನಾವಣೆಗಳಲ್ಲಿಯೂ ಬಿಜೆಪಿಯದ್ದೇ ಮೇಲುಗೈ?

- Advertisement -
- Advertisement -

ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಮಾರ್ಚ್ 27ರಿಂದ ಹಲವು ಸುತ್ತಿನ ಮತದಾನ ನಡೆಯಲಿದೆ. ಇದರ ಜೊತೆ ಜೊತೆಗೆ ಒಂದು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೂ ರಾಜ್ಯದಲ್ಲಿ ಉಪಚುನಾವಣೆ ನಿಗದಿಯಾಗಿದೆ. ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಉಪಚುನಾವಣೆ ನಡೆಯಲಿದೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲೂ ಉಪಚುನಾಣೆ ನಡೆಯಬೇಕಿತ್ತು ಆದರೆ ಕಾರಣಾಂತರಗಳಿದಂದ ಅದು ಮುಂದೂಡಲ್ಪಟ್ಟಿದೆ. ಹಾಗಾಗಿ ಈಗಾಗಲೆ ಮೂರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಾಲ್ಲಿದೆ.

PC : Oneindia

ಕೇಂದ್ರ ಸಚಿವರಾಗಿದ್ದ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದರಿಂದ ಬೆಳಗಾವಿ ಕ್ಷೇತ್ರವು ತೆರವುಗೊಂಡಿದ್ದರೆ, ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ತೆರವುಗೊಂಡಿದೆ. ಆದರೆ ಮಸ್ಕಿ ವಿಧಾನಸಭಾ ಕ್ಷೇತ್ರವು ಇಲ್ಲಿನ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಪಕ್ಷಾಂತರಗೊಂಡಿದ್ದರಿಂದ ಖಾಲಿಯಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ನಡೆದಿದೆ ಎಂದು ಆರೋಪಿಸಲಾಗಿದ್ದ ಆಪರೇಷನ್ ಕಮಲದಿಂದಾಗಿ ಅವರು ಪಕ್ಷಾಂತರಗೊಂಡಿದ್ದರು.

ಬೆಳಗಾವಿ ಕ್ಷೇತ್ರದಿಂದ 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಲೋಕಸಭೆಗೆ ಪ್ರವೇಶಿಸಿದ್ದ ಸುರೇಶ್ ಅಂಗಡಿ, ಆಮೇಲೆ ನಡೆದ ಒಟ್ಟು ಮೂರು ಲೋಕಸಭಾ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆದ್ದು ಬಂದಿದ್ದಾರೆ. 2019 ರಲ್ಲಿ ಸುರೇಶ್ ಅಂಗಡಿ ಅವರು ಕಾಂಗ್ರೆಸ್‌ನ ವಿ.ಎಸ್. ಸಾಧುನವರ ಅವರ ವಿರುದ್ಧ ಸುಮಾರು ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು. ಈ ಚುನಾವಣೆಯಲ್ಲಿ ಸುರೇಶ್ ಅಂಗಡಿಗೆ 63% ಮತಗಳನ್ನು ಲಭಿಸಿದ್ದವು.

ಬಿಜೆಪಿಯ ಈ ಭದ್ರಕೋಟೆಯಲ್ಲಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳು ಹದಿನೈದಕ್ಕೂ ಹೆಚ್ಚು ಮಂದಿಯಿದ್ದರು ಎಂದು ಹೇಳಲಾಗಿತ್ತು. ಚುನಾವಣೆ ಘೋಷಣೆಯಾಗಿ ಎರಡು ವಾರಗಳ ನಂತರ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಸುರೇಶ್‌ ಅಂಗಡಿ ಅವರು ಪತ್ನಿ ಮಂಗಳಾ ಅಂಗಡಿ ಅವರ ಹೆಸರನ್ನು ಘೋಷಿಸಿದೆ. ಬಿಜೆಪಿ ಹೈಕಮಾಂಡ್‌ಗೆ ಆರು ಮಂದಿಯ ಹೆಸರುಗಳನ್ನು ರಾಜ್ಯ ಬಿಜೆಪಿ ಕಳುಹಿಸಿಕೊಟ್ಟಿತ್ತು ಎನ್ನಲಾಗಿತ್ತು. ಇವರಲ್ಲಿ ರಮೇಶ್ ಕತ್ತಿ, ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರ ಮಗ ಸೂರ್ಯಕಾಂತ್ ನಾಗಮಾರಪಳ್ಳಿ ಸೇರಿದಂತೆ ಮಂಗಳಾ ಅಂಗಡಿ ಅವರ ಹೆಸರೂ ಇತ್ತು ಎನ್ನಲಾಗಿದೆ. ಕೊನೆಯ ಕ್ಷಣದವರೆಗೂ ಇವರಲ್ಲಿ ಯಾರಿಗೂ ಟಿಕೆಟ್ ಸಿಗುವ ಸಾಧ್ಯತೆ ಇಲ್ಲವೆಂದು ಹೇಳಲಾಗುತ್ತಿತ್ತಾದರೂ, ಕೊನೆಗೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

PC : Prajapragathi

ಕಾಂಗ್ರೆಸ್ ಪಕ್ಷವು ಈ ಬಾರಿ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದ್ದು, ಅದರಂತೆ ಅವರನ್ನೇ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಆದರೆ ಸತೀಶ್ ಜಾರಕಿಹೊಳಿ ಅವರು ಟಿಕೆಟ್‌ ಆಕಾಂಕ್ಷಿ ಆಗಿರಲಿಲ್ಲ. ಅವರ ಆಸಕ್ತಿ ರಾಜ್ಯ ರಾಜಕಾರಣದಲ್ಲಿದ್ದು ಚುನಾವಣೆಗೆ ಹಿಂದೇಟು ಹಾಕುತ್ತಿದ್ದರು ಎನ್ನಲಾಗಿತ್ತು. ಇದೀಗ ಕಾಂಗ್ರೆಸ್‌ನ ಸರ್ವ ಸಮ್ಮತ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಇನ್ನು ಉಳಿದಂತೆ ಜೆಡಿಎಸ್‌ ಕ್ಷೇತ್ರದಲ್ಲಿ ಯಾವುದೆ ಅಭ್ಯರ್ಥಿಯನ್ನು ಹಾಕಿಲ್ಲ.

ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೂಲಕ ಅನಕಂಪದ ಮತಗಳನ್ನು ಸೆಳೆಯುವ ಪ್ರಯತ್ನಕ್ಕೆ ಇಳಿದಿದ್ದು, ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳುವ ಹೋರಾಟಕ್ಕೆ ಇಳಿದಿದೆ. 2018ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ. ನಾರಾಯಣರಾವ್ 17 ಸಾವಿರ ಮತಗಳ ಅಂತರದಲ್ಲಿ ಬಿಜೆಪಿಯ ಮಲ್ಲಿಕಾರ್ಜುನ ಅವರನ್ನು ಸೋಲಿಸಿದ್ದರು.

ಮಲ್ಲಿಕಾರ್ಜುನ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದರು. ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಯ್ಯದ್ ಯಾಸ್ರಾಬ್ ಅಲಿ ಖಾದ್ರಿ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿ ತನ್ನ ಅಭ್ಯರ್ಥಿಯಾಗಿ ಶರಣು ಸಲಗಾರ್ ಅವರಿಗೆ ಬಿ ಪಾರಂ ನೀಡಿದೆ. ವಿಶೇಷವೇನೆಂದರೆ ಇಲ್ಲಿಯು ಸೂರ್ಯಕಾಂತ್ ನಾಗಮಾರಪಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದರು!.

2018ರ ವಿಧಾನಸಭಾ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದ ಪ್ರತಾಪ್ ಗೌಡ ಪಾಟಿಲ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಆಪರೇಷನ್ ಕಮಲದ ಮೂಲಕ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಸಹಾಯ ಮಾಡಿದ್ದರು. ಅದರಂತೆ ಆಪರೇಷನ್ ಕಮಲ ನಡೆದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದೆ.

PC : Pragativahini

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿ ಎರಡು ವರ್ಷ ಕಳೆದರೂ ಮಸ್ಕಿಯಲ್ಲಿ ಉಪಚುನಾವಣೆ ನಡೆದಿರಲಿಲ್ಲ. ಏಕೆಂದರೆ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟಿಲ್ ಅವರ ವಿರದ್ದ, ಅವರ ಪ್ರತಿಸ್ಪರ್ಧಿಯಾಗಿದ್ದ ಬಸನಗೌಡ ತುರುವಿಹಾಳ (ಅಂದು ಬಿಜೆಪಿ ಪಕ್ಷದಲ್ಲಿದ್ದರು) ಅವರು ಹೈಕೋರ್ಟ್‌ನಲ್ಲಿ ಚುನವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಆದ್ದರಿಂದ ಆಪರೇಷನ್ ಕಮಲದಿಂದ ತೆರವುಗೊಂಡಿದ್ದ ಉಳಿದೆಲ್ಲಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದರೂ ಮಸ್ಕಿಯಲ್ಲಿ ಚುನವಣೆ ನಡೆದಿರಲಿಲ್ಲ. ಇದೀಗ ಬಸನಗೌಡ ತುರುವಿಹಾಳ ಅವರು ತಮ್ಮ ಅರ್ಜಿಯನ್ನು ವಾಪಸ್ಸು ಪಡೆದಿದ್ದಾರೆ. 2018ರಲ್ಲಿ ಬಸನಗೌಡ ತುರುವಿಹಾಳ ಅವರ ವಿರುದ್ಧ ಪ್ರತಾಪ್ ಗೌಡ ಕೇವಲ 213 ಮತಗಳ ಅಂತರದಿಂದ ಗೆದ್ದಿದ್ದರು.

ಆಪರೇಷನ್ ಕಮಲಕ್ಕೊಳಗಾಗಿ ಬಿಜೆಪಿ ಸೇರಿಕೊಂಡಿದ್ದ ಪ್ರತಾಪಗೌಡ ಅವರನ್ನು ನಿರೀಕ್ಷೆಯಂತೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ವಿಶೇಷವೇನೆಂದರೆ 2018ರಲ್ಲಿ ಅವರ ವಿರುದ್ಧ ಬಿಜೆಪಿಯಿಂದ ನಿಂತು ಸೋಲುಂಡಿದ್ದ ಬಸನಗೌಡ ತುರುವಿಹಾಳ ಅವರು ಇದೀಗ ಕಾಂಗ್ರೆಸ್ ಸೇರಿದ್ದು, ಪಕ್ಷವು ಅವರಿಗೆ ಟಿಕೆಟ್ ನೀಡಿದೆ. ಒಟ್ಟಿನಲ್ಲಿ ಅಭ್ಯರ್ಥಿಗಳು ಅವರೆ ಆಗಿದ್ದು, ಪಕ್ಷಗಳಷ್ಟೇ ಬದಲಾಗಿದೆ. ಈ ಬದಲಾವಣೆಗೆ ಮತದಾರರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುವುದನ್ನು ಕಾದು ನೊಡಬೇಕಾಗಿದೆ.

ಈ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. 2018ರ ಚುನಾವಣೆಯಲ್ಲಿ ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ 8.33% ಮತಗಳನ್ನಷ್ಟೇ ಜೆಡಿಎಸ್ ಪಡೆದಿತ್ತು.

ಮೂರು ಕ್ಷೇತ್ರಳಿಗೆ ಮಾರ್ಚ್ 30 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಎಪ್ರಿಲ್ 17 ಕ್ಕೆ ಚುನಾವಣೆ ನಡೆಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಿಲಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...