Homeಕರ್ನಾಟಕಕರ್ನಾಟಕದಲ್ಲಿಯೂ ಚುನಾವಣೆ; ಈ ಉಪಚುನಾವಣೆಗಳಲ್ಲಿಯೂ ಬಿಜೆಪಿಯದ್ದೇ ಮೇಲುಗೈ?

ಕರ್ನಾಟಕದಲ್ಲಿಯೂ ಚುನಾವಣೆ; ಈ ಉಪಚುನಾವಣೆಗಳಲ್ಲಿಯೂ ಬಿಜೆಪಿಯದ್ದೇ ಮೇಲುಗೈ?

- Advertisement -
- Advertisement -

ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಮಾರ್ಚ್ 27ರಿಂದ ಹಲವು ಸುತ್ತಿನ ಮತದಾನ ನಡೆಯಲಿದೆ. ಇದರ ಜೊತೆ ಜೊತೆಗೆ ಒಂದು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೂ ರಾಜ್ಯದಲ್ಲಿ ಉಪಚುನಾವಣೆ ನಿಗದಿಯಾಗಿದೆ. ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಉಪಚುನಾವಣೆ ನಡೆಯಲಿದೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲೂ ಉಪಚುನಾಣೆ ನಡೆಯಬೇಕಿತ್ತು ಆದರೆ ಕಾರಣಾಂತರಗಳಿದಂದ ಅದು ಮುಂದೂಡಲ್ಪಟ್ಟಿದೆ. ಹಾಗಾಗಿ ಈಗಾಗಲೆ ಮೂರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಾಲ್ಲಿದೆ.

PC : Oneindia

ಕೇಂದ್ರ ಸಚಿವರಾಗಿದ್ದ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದರಿಂದ ಬೆಳಗಾವಿ ಕ್ಷೇತ್ರವು ತೆರವುಗೊಂಡಿದ್ದರೆ, ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ತೆರವುಗೊಂಡಿದೆ. ಆದರೆ ಮಸ್ಕಿ ವಿಧಾನಸಭಾ ಕ್ಷೇತ್ರವು ಇಲ್ಲಿನ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಪಕ್ಷಾಂತರಗೊಂಡಿದ್ದರಿಂದ ಖಾಲಿಯಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ನಡೆದಿದೆ ಎಂದು ಆರೋಪಿಸಲಾಗಿದ್ದ ಆಪರೇಷನ್ ಕಮಲದಿಂದಾಗಿ ಅವರು ಪಕ್ಷಾಂತರಗೊಂಡಿದ್ದರು.

ಬೆಳಗಾವಿ ಕ್ಷೇತ್ರದಿಂದ 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಲೋಕಸಭೆಗೆ ಪ್ರವೇಶಿಸಿದ್ದ ಸುರೇಶ್ ಅಂಗಡಿ, ಆಮೇಲೆ ನಡೆದ ಒಟ್ಟು ಮೂರು ಲೋಕಸಭಾ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆದ್ದು ಬಂದಿದ್ದಾರೆ. 2019 ರಲ್ಲಿ ಸುರೇಶ್ ಅಂಗಡಿ ಅವರು ಕಾಂಗ್ರೆಸ್‌ನ ವಿ.ಎಸ್. ಸಾಧುನವರ ಅವರ ವಿರುದ್ಧ ಸುಮಾರು ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು. ಈ ಚುನಾವಣೆಯಲ್ಲಿ ಸುರೇಶ್ ಅಂಗಡಿಗೆ 63% ಮತಗಳನ್ನು ಲಭಿಸಿದ್ದವು.

ಬಿಜೆಪಿಯ ಈ ಭದ್ರಕೋಟೆಯಲ್ಲಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳು ಹದಿನೈದಕ್ಕೂ ಹೆಚ್ಚು ಮಂದಿಯಿದ್ದರು ಎಂದು ಹೇಳಲಾಗಿತ್ತು. ಚುನಾವಣೆ ಘೋಷಣೆಯಾಗಿ ಎರಡು ವಾರಗಳ ನಂತರ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಸುರೇಶ್‌ ಅಂಗಡಿ ಅವರು ಪತ್ನಿ ಮಂಗಳಾ ಅಂಗಡಿ ಅವರ ಹೆಸರನ್ನು ಘೋಷಿಸಿದೆ. ಬಿಜೆಪಿ ಹೈಕಮಾಂಡ್‌ಗೆ ಆರು ಮಂದಿಯ ಹೆಸರುಗಳನ್ನು ರಾಜ್ಯ ಬಿಜೆಪಿ ಕಳುಹಿಸಿಕೊಟ್ಟಿತ್ತು ಎನ್ನಲಾಗಿತ್ತು. ಇವರಲ್ಲಿ ರಮೇಶ್ ಕತ್ತಿ, ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರ ಮಗ ಸೂರ್ಯಕಾಂತ್ ನಾಗಮಾರಪಳ್ಳಿ ಸೇರಿದಂತೆ ಮಂಗಳಾ ಅಂಗಡಿ ಅವರ ಹೆಸರೂ ಇತ್ತು ಎನ್ನಲಾಗಿದೆ. ಕೊನೆಯ ಕ್ಷಣದವರೆಗೂ ಇವರಲ್ಲಿ ಯಾರಿಗೂ ಟಿಕೆಟ್ ಸಿಗುವ ಸಾಧ್ಯತೆ ಇಲ್ಲವೆಂದು ಹೇಳಲಾಗುತ್ತಿತ್ತಾದರೂ, ಕೊನೆಗೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

PC : Prajapragathi

ಕಾಂಗ್ರೆಸ್ ಪಕ್ಷವು ಈ ಬಾರಿ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದ್ದು, ಅದರಂತೆ ಅವರನ್ನೇ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಆದರೆ ಸತೀಶ್ ಜಾರಕಿಹೊಳಿ ಅವರು ಟಿಕೆಟ್‌ ಆಕಾಂಕ್ಷಿ ಆಗಿರಲಿಲ್ಲ. ಅವರ ಆಸಕ್ತಿ ರಾಜ್ಯ ರಾಜಕಾರಣದಲ್ಲಿದ್ದು ಚುನಾವಣೆಗೆ ಹಿಂದೇಟು ಹಾಕುತ್ತಿದ್ದರು ಎನ್ನಲಾಗಿತ್ತು. ಇದೀಗ ಕಾಂಗ್ರೆಸ್‌ನ ಸರ್ವ ಸಮ್ಮತ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಇನ್ನು ಉಳಿದಂತೆ ಜೆಡಿಎಸ್‌ ಕ್ಷೇತ್ರದಲ್ಲಿ ಯಾವುದೆ ಅಭ್ಯರ್ಥಿಯನ್ನು ಹಾಕಿಲ್ಲ.

ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೂಲಕ ಅನಕಂಪದ ಮತಗಳನ್ನು ಸೆಳೆಯುವ ಪ್ರಯತ್ನಕ್ಕೆ ಇಳಿದಿದ್ದು, ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳುವ ಹೋರಾಟಕ್ಕೆ ಇಳಿದಿದೆ. 2018ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ. ನಾರಾಯಣರಾವ್ 17 ಸಾವಿರ ಮತಗಳ ಅಂತರದಲ್ಲಿ ಬಿಜೆಪಿಯ ಮಲ್ಲಿಕಾರ್ಜುನ ಅವರನ್ನು ಸೋಲಿಸಿದ್ದರು.

ಮಲ್ಲಿಕಾರ್ಜುನ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದರು. ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಯ್ಯದ್ ಯಾಸ್ರಾಬ್ ಅಲಿ ಖಾದ್ರಿ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿ ತನ್ನ ಅಭ್ಯರ್ಥಿಯಾಗಿ ಶರಣು ಸಲಗಾರ್ ಅವರಿಗೆ ಬಿ ಪಾರಂ ನೀಡಿದೆ. ವಿಶೇಷವೇನೆಂದರೆ ಇಲ್ಲಿಯು ಸೂರ್ಯಕಾಂತ್ ನಾಗಮಾರಪಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದರು!.

2018ರ ವಿಧಾನಸಭಾ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದ ಪ್ರತಾಪ್ ಗೌಡ ಪಾಟಿಲ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಆಪರೇಷನ್ ಕಮಲದ ಮೂಲಕ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಸಹಾಯ ಮಾಡಿದ್ದರು. ಅದರಂತೆ ಆಪರೇಷನ್ ಕಮಲ ನಡೆದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದೆ.

PC : Pragativahini

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿ ಎರಡು ವರ್ಷ ಕಳೆದರೂ ಮಸ್ಕಿಯಲ್ಲಿ ಉಪಚುನಾವಣೆ ನಡೆದಿರಲಿಲ್ಲ. ಏಕೆಂದರೆ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟಿಲ್ ಅವರ ವಿರದ್ದ, ಅವರ ಪ್ರತಿಸ್ಪರ್ಧಿಯಾಗಿದ್ದ ಬಸನಗೌಡ ತುರುವಿಹಾಳ (ಅಂದು ಬಿಜೆಪಿ ಪಕ್ಷದಲ್ಲಿದ್ದರು) ಅವರು ಹೈಕೋರ್ಟ್‌ನಲ್ಲಿ ಚುನವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಆದ್ದರಿಂದ ಆಪರೇಷನ್ ಕಮಲದಿಂದ ತೆರವುಗೊಂಡಿದ್ದ ಉಳಿದೆಲ್ಲಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದರೂ ಮಸ್ಕಿಯಲ್ಲಿ ಚುನವಣೆ ನಡೆದಿರಲಿಲ್ಲ. ಇದೀಗ ಬಸನಗೌಡ ತುರುವಿಹಾಳ ಅವರು ತಮ್ಮ ಅರ್ಜಿಯನ್ನು ವಾಪಸ್ಸು ಪಡೆದಿದ್ದಾರೆ. 2018ರಲ್ಲಿ ಬಸನಗೌಡ ತುರುವಿಹಾಳ ಅವರ ವಿರುದ್ಧ ಪ್ರತಾಪ್ ಗೌಡ ಕೇವಲ 213 ಮತಗಳ ಅಂತರದಿಂದ ಗೆದ್ದಿದ್ದರು.

ಆಪರೇಷನ್ ಕಮಲಕ್ಕೊಳಗಾಗಿ ಬಿಜೆಪಿ ಸೇರಿಕೊಂಡಿದ್ದ ಪ್ರತಾಪಗೌಡ ಅವರನ್ನು ನಿರೀಕ್ಷೆಯಂತೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ವಿಶೇಷವೇನೆಂದರೆ 2018ರಲ್ಲಿ ಅವರ ವಿರುದ್ಧ ಬಿಜೆಪಿಯಿಂದ ನಿಂತು ಸೋಲುಂಡಿದ್ದ ಬಸನಗೌಡ ತುರುವಿಹಾಳ ಅವರು ಇದೀಗ ಕಾಂಗ್ರೆಸ್ ಸೇರಿದ್ದು, ಪಕ್ಷವು ಅವರಿಗೆ ಟಿಕೆಟ್ ನೀಡಿದೆ. ಒಟ್ಟಿನಲ್ಲಿ ಅಭ್ಯರ್ಥಿಗಳು ಅವರೆ ಆಗಿದ್ದು, ಪಕ್ಷಗಳಷ್ಟೇ ಬದಲಾಗಿದೆ. ಈ ಬದಲಾವಣೆಗೆ ಮತದಾರರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುವುದನ್ನು ಕಾದು ನೊಡಬೇಕಾಗಿದೆ.

ಈ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. 2018ರ ಚುನಾವಣೆಯಲ್ಲಿ ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ 8.33% ಮತಗಳನ್ನಷ್ಟೇ ಜೆಡಿಎಸ್ ಪಡೆದಿತ್ತು.

ಮೂರು ಕ್ಷೇತ್ರಳಿಗೆ ಮಾರ್ಚ್ 30 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಎಪ್ರಿಲ್ 17 ಕ್ಕೆ ಚುನಾವಣೆ ನಡೆಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಿಲಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...