Homeಮುಖಪುಟಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

ಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯು 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಅಭ್ಯರ್ಥಿಗಳೆನಿಸಿಕೊಂಡಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಇಂದಿನ ಚುನಾವಣೆಯಲ್ಲಿ ಸ್ಪರ್ಧಿಸಿವೆ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ ಚುನಾವಣೆ

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಎರಡು ರಾಜ್ಯಗಳೊಂದಿಗೆ ತ್ರಿಪುರ ಸೇರಿ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಜಾತಿ, ಧರ್ಮದ ಕುರಿತ ಸಂಶೋಧನೆ ಸೂಕ್ಷ್ಮವಾದುದು: ಇಂಗ್ಲೆಂಡ್ ಮಾನವಶಾಸ್ತ್ರಜ್ಞರ ಗಡೀಪಾರು ಸಮರ್ಥಿಸಿಕೊಂಡ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...