Homeಮುಖಪುಟಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

- Advertisement -
- Advertisement -

ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ (ಫೆ.26) ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಮಾರ್ಚ್ 27 ರಿಂದ ಮತದಾನ ಆರಂಭವಾಗಲಿದ್ದು, ಮೇ 2ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು.

ಕೊರೊನಾ  ಸಾಂಕ್ರಾಮಿಕ ಹಿನ್ನೆಲೆ ಈ ಬಾರಿ ಮತದಾನ ಅವಧಿಯನ್ನು 1 ಗಂಟೆ ಹೆಚ್ಚಿಸಲಾಗುವುದು, ಕೊರೊನಾದಿಂದಾಗಿ ಮತಗಟ್ಟೆಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತ- 30 ಕ್ಷೇತ್ರಗಳು- ಮಾರ್ಚ್ 27ರಂದು ಮತದಾನ,

2ನೇ ಹಂತ- 30 ಕ್ಷೇತ್ರಗಳು- ಏಪ್ರಿಲ್ 1ರಂದು ಮತದಾನ

3ನೇ ಹಂತ-  31 ಕ್ಷೇತ್ರಗಳು- ಏಪ್ರಿಲ್ 6ರಂದು ಮತದಾನ.

4ನೇ ಹಂತ – 44 ಕ್ಷೇತ್ರಗಳು- ಏಪ್ರಿಲ್ 10ರಂದು ಮತದಾನ

5ನೇ ಹಂತ- 45 ಕ್ಷೇತ್ರಗಳು-  ಏಪ್ರಿಲ್ 17ರಂದು ಮತದಾನ

6ನೇ ಹಂತ-  43 ಕ್ಷೇತ್ರಗಳು-  ಏಪ್ರಿಲ್ 22ರಂದು ಮತದಾನ

7ನೇ ಹಂತ- 36 ಕ್ಷೇತ್ರಗಳು – ಏಪ್ರಿಲ್ 26ರಂದು ಮತದಾನ

8ನೇ ಹಂತ- 35 ಕ್ಷೇತ್ರಗಳು- ಏಪ್ರಿಲ್ 29ರಂದು ಮತದಾನ

ಮೇ 2ಕ್ಕೆ ಮತ ಏಣಿಕೆ ನಡೆಯಲಿದೆ.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಅಸ್ಸಾಂ: ಅಸ್ಸಾಂ ರಾಜ್ಯದಲ್ಲಿ ಮೂರು ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 27 ರಂದು ಮೊದಲ ಹಂತದ ಚುನಾವಣೆ ಆರಂಭವಾಗಿದೆ. 2ನೇ ಹಂತ ಏಪ್ರಿಲ್ 1, 3ನೇ ಹಂತ ಏಪ್ರಿಲ್ 6ಕ್ಕೆ ನಡೆಯಲಿದೆ.

ಕೇರಳ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಎಪ್ರಿಲ್ 6ರಂದು ಮತದಾನ ನಡೆಯಲಿದ್ದು, ಮೇ 2ಕ್ಕೆ ಮತ ಏಣಿಕೆ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ 294, ತಮಿಳುನಾಡಿನಲ್ಲಿ 234, ಕೇರಳದಲ್ಲಿ 140, ಅಸ್ಸಾಂನಲ್ಲಿ 126 ಮತ್ತು ಕೇಂದ್ರ ಪ್ರದೇಶದ ಪುದುಚೇರಿಯಲ್ಲಿ 30 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಈ ಚುನಾವಣೆಯಲ್ಲಿ 18 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಪಶ್ವಿಮ ಬಂಗಾಳದಲ್ಲಿ ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಚುನಾವಣೆಗೆ ಗೆಲ್ಲಲು ಭಾರೀ ಸಿದ್ದತೆ ನಡೆಸುತ್ತಿರುವ ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ನಡೆಯಲಿದೆ.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡು ಬಿಜೆಪಿ ಕಣಕ್ಕಿಳಿದರೆ, ಡಿಎಂಕೆಯೊಂದಿಗೆ ಕಾಂಗ್ರೆಸ್‌ ಅಖಾಡಕ್ಕಿಳಿಯಲಿದೆ. ಅಲ್ಲದೆ, ಸ್ಟಾರ್‌ ನಟ ಕಮಲ್‌ ಹಾಸನ್‌ ಅವರ ಪಕ್ಷವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿರುವ ಶಶಿಕಲಾ ಕೂಡ ಚುನಾವಣಾ ಕಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ.

ಕೇರಳದಲ್ಲಿ ಎಡಪಕ್ಷಗಳ ಎಲ್​ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಮಧ್ಯೆ ಹಣಾಹಣಿ ನಡೆಯಲಿದೆ. ಈ ಮಧ್ಯೆ ತಮಿಳುನಾಡಿನಲ್ಲಿ ಖಾತೆ ತೆರೆಯಲು ಬಿಜೆಪಿಯೂ ಕಣಕ್ಕೆ ಇಳಿದಿದೆ.

ರಾಜಕೀಯ ಹೈಡ್ರಾಮಕ್ಕೆ ವೇದಿಕೆಯಾಗಿದ್ದ ಪುದುಚೇರಿಯಲ್ಲಿ ಕಾಂಗ್ರೆಸ್‌ ಸರ್ಕಾರ ಪತನಗೊಂಡು, ರಾಷ್ಟ್ರಪತಿ ಆಡಳಿತ ಜಾರಿಯಾಗಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚೇನು ಪ್ರಭಾವ ಬೀರದ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂಬ ವಿಶ್ವಾಸದಲ್ಲಿದೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಚುನಾವಣಾ ಕಣದಲ್ಲಿ ನಿರ್ಣಯಕ ಪಾತ್ರ ನಿರ್ವಹಿಸುವ ಎನ್ ಟಿ ಕೆ ಬಗ್ಗೆ ತಾವು ಏನೂ ಹೇಳದೇ ಬಿಟ್ಟಿರಲು ಕಾರಣವೇನು…?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...