Homeಮುಖಪುಟಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

ಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

- Advertisement -
- Advertisement -

ಹಲವು ರಾಜ್ಯಗಳ ಚುನಾವಣೆಯ ಕಾರಣದಿಂದ ಸ್ಥಿರವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ ನಾಲ್ಕನೇ ದಿನಕ್ಕೆ ಏರಿಸಲಾಗಿದ್ದು, 2021 ರ ಮೇ 7 ರ ಶುಕ್ರವಾರದಂದು ದೇಶಾದ್ಯಂತ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ದೇಶದ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 28 ಪೈಸೆ ಏರಿಕೆಯಾದರೆ ಡೀಸೆಲ್ ದರ 31 ಪೈಸೆ ಏರಿಕೆಯಾಗಿದೆ.

ಈ ತಿಂಗಳ ಇತ್ತೀಚಿನ ಹೆಚ್ಚಳವು ಮಾರ್ಚ್ 24 ಮತ್ತು ಏಪ್ರಿಲ್ 15 ರ ನಡುವಿನ ನಾಲ್ಕು ಪರಿಷ್ಕರಣೆಗಳ ಅವಧಿಯಲ್ಲಿ ಬಂದ ಎಲ್ಲಾ ಇಂಧನ ದರಗಳ ಕಡಿತವನ್ನು ಅಳಿಸಿಹಾಕಿದೆ. ಕಳೆದ ನಾಲ್ಕು ದಿನಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87 ಪೈಸೆ ಹೆಚ್ಚಾಗಿದೆ ಮತ್ತು ಡೀಸೆಲ್ ದರ ಒಂದು ರೂಪಾಯಿ ಏರಿಕೆಯಾಗಿದೆ.

ಜನವರಿ-ಫೆಬ್ರವರಿ ಅವಧಿಯಲ್ಲಿ ಇಂಧನ ಬೆಲೆಗಳು ನಾಗಾಲೋಟದಲ್ಲಿ ಇದ್ದವು. ಈ ಮೊದಲು ಫೆಬ್ರವರಿ 27 ರಂದು ತಮ್ಮ ಹಿಂದಿನ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು. ನಂತರ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಮಾರ್ಚ್ 24 ರಿಂದ 24 ದಿನಗಳ ಕಾಲ ಇಂಧನ ದರ ಪರಿಷ್ಕರಣೆ ಮಾಡಲಿಲ್ಲ. (ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿತ್ತು. ಚುನಾವಣೆಯ ನಂತರ ಮತ್ತೆ ತೀವ್ರ ದರ ಏರಿಕೆ ಆಗಲಿದೆ ಎಂದು ನಾನುಗೌರಿ.ಕಾಂ ವರದಿ ಮಾಡಿತ್ತು)

ಮೇ 4 ರಂದು ಏರಿಕೆಯಾಗುವವರೆಗೂ ಬೆಲೆಗಳು 18 ದಿನಗಳವರೆಗೆ ಸ್ಥಿರವಾಗಿದ್ದವು. ಇತ್ತೀಚಿನ ಬೆಲೆ ಪರಿಷ್ಕರಣೆಯ ನಂತರ, ದೆಹಲಿಯಲ್ಲಿ ಪೆಟ್ರೋಲ್ ಈಗ ಲೀಟರ್ 91.27 ರೂ.ಗೆ ಮಾರಾಟವಾಗಿದ್ದರೆ, ಡೀಸೆಲ್ 81.73 ರೂ.ಗೆ ಮಾರಾಟವಾಗುತ್ತಿದೆ. ಹಣಕಾಸು ರಾಜಧಾನಿ ಮುಂಬಯಿಯಲ್ಲಿ, ಪೆಟ್ರೋಲ್ ಬೆಲೆ ಈಗ 97.61 ರೂ., ಡೀಸೆಲ್ ಬೆಲೆ 88.82 ರೂ..
ಫೆಬ್ರವರಿ ತಿಂಗಳಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಎರಡು ಸ್ಥಳಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿತ್ತು.

ಸ್ಥಳೀಯ ತೆರಿಗೆ (ವ್ಯಾಟ್) ಮತ್ತು ಸರಕು ಸಾಗಣೆ ಶುಲ್ಕವನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತದೆ ಮತ್ತು ನಂತರದ ಸ್ಥಾನದಲ್ಲಿ ಮಧ್ಯಪ್ರದೇಶವಿದೆ.

ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇಕಡಾ 60 ಮತ್ತು ಡೀಸೆಲ್‌ನ ಶೇಕಡಾ 54 ಕ್ಕಿಂತ ಹೆಚ್ಚು ಪ್ರಮಾಣದ ತೆರಿಗೆ ವಿಧಿಸುತ್ತಿವೆ. ಕೇಂದ್ರವು ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 32.90 ರೂ. ಮತ್ತು ಡೀಸೆಲ್‌ಗೆ 31.80 ರೂ. ಅಬಕಾರಿ ಸುಂಕ ಹೇರುತ್ತಿದೆ.
ಸಾಮಾನ್ಯವಾಗಿ, ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ.

ಸಾಂಕ್ರಾಮಿಕದ ಬಿಕ್ಕಟ್ಟಿನ ವೇಳೆ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಇನ್ನಷ್ಟು ಹೊರೆ ಹಾಕುತ್ತಿವೆ. ಚುನಾವಣಾ ಸಂದರ್ಭ ದಲ್ಲಿ ಸ್ಥಿರವಾಗಿದ್ದ ಇಂಧನ ದರಗಳು ಈಗ ಮರಳಿ ಏರುಮುಖದಲ್ಲಿವೆ.


ಇದನ್ನೂ ಓದಿ: ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...