Homeಮುಖಪುಟಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

ಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

- Advertisement -
- Advertisement -

ಹಲವು ರಾಜ್ಯಗಳ ಚುನಾವಣೆಯ ಕಾರಣದಿಂದ ಸ್ಥಿರವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ ನಾಲ್ಕನೇ ದಿನಕ್ಕೆ ಏರಿಸಲಾಗಿದ್ದು, 2021 ರ ಮೇ 7 ರ ಶುಕ್ರವಾರದಂದು ದೇಶಾದ್ಯಂತ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ದೇಶದ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 28 ಪೈಸೆ ಏರಿಕೆಯಾದರೆ ಡೀಸೆಲ್ ದರ 31 ಪೈಸೆ ಏರಿಕೆಯಾಗಿದೆ.

ಈ ತಿಂಗಳ ಇತ್ತೀಚಿನ ಹೆಚ್ಚಳವು ಮಾರ್ಚ್ 24 ಮತ್ತು ಏಪ್ರಿಲ್ 15 ರ ನಡುವಿನ ನಾಲ್ಕು ಪರಿಷ್ಕರಣೆಗಳ ಅವಧಿಯಲ್ಲಿ ಬಂದ ಎಲ್ಲಾ ಇಂಧನ ದರಗಳ ಕಡಿತವನ್ನು ಅಳಿಸಿಹಾಕಿದೆ. ಕಳೆದ ನಾಲ್ಕು ದಿನಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87 ಪೈಸೆ ಹೆಚ್ಚಾಗಿದೆ ಮತ್ತು ಡೀಸೆಲ್ ದರ ಒಂದು ರೂಪಾಯಿ ಏರಿಕೆಯಾಗಿದೆ.

ಜನವರಿ-ಫೆಬ್ರವರಿ ಅವಧಿಯಲ್ಲಿ ಇಂಧನ ಬೆಲೆಗಳು ನಾಗಾಲೋಟದಲ್ಲಿ ಇದ್ದವು. ಈ ಮೊದಲು ಫೆಬ್ರವರಿ 27 ರಂದು ತಮ್ಮ ಹಿಂದಿನ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು. ನಂತರ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಮಾರ್ಚ್ 24 ರಿಂದ 24 ದಿನಗಳ ಕಾಲ ಇಂಧನ ದರ ಪರಿಷ್ಕರಣೆ ಮಾಡಲಿಲ್ಲ. (ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿತ್ತು. ಚುನಾವಣೆಯ ನಂತರ ಮತ್ತೆ ತೀವ್ರ ದರ ಏರಿಕೆ ಆಗಲಿದೆ ಎಂದು ನಾನುಗೌರಿ.ಕಾಂ ವರದಿ ಮಾಡಿತ್ತು)

ಮೇ 4 ರಂದು ಏರಿಕೆಯಾಗುವವರೆಗೂ ಬೆಲೆಗಳು 18 ದಿನಗಳವರೆಗೆ ಸ್ಥಿರವಾಗಿದ್ದವು. ಇತ್ತೀಚಿನ ಬೆಲೆ ಪರಿಷ್ಕರಣೆಯ ನಂತರ, ದೆಹಲಿಯಲ್ಲಿ ಪೆಟ್ರೋಲ್ ಈಗ ಲೀಟರ್ 91.27 ರೂ.ಗೆ ಮಾರಾಟವಾಗಿದ್ದರೆ, ಡೀಸೆಲ್ 81.73 ರೂ.ಗೆ ಮಾರಾಟವಾಗುತ್ತಿದೆ. ಹಣಕಾಸು ರಾಜಧಾನಿ ಮುಂಬಯಿಯಲ್ಲಿ, ಪೆಟ್ರೋಲ್ ಬೆಲೆ ಈಗ 97.61 ರೂ., ಡೀಸೆಲ್ ಬೆಲೆ 88.82 ರೂ..
ಫೆಬ್ರವರಿ ತಿಂಗಳಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಎರಡು ಸ್ಥಳಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿತ್ತು.

ಸ್ಥಳೀಯ ತೆರಿಗೆ (ವ್ಯಾಟ್) ಮತ್ತು ಸರಕು ಸಾಗಣೆ ಶುಲ್ಕವನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತದೆ ಮತ್ತು ನಂತರದ ಸ್ಥಾನದಲ್ಲಿ ಮಧ್ಯಪ್ರದೇಶವಿದೆ.

ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇಕಡಾ 60 ಮತ್ತು ಡೀಸೆಲ್‌ನ ಶೇಕಡಾ 54 ಕ್ಕಿಂತ ಹೆಚ್ಚು ಪ್ರಮಾಣದ ತೆರಿಗೆ ವಿಧಿಸುತ್ತಿವೆ. ಕೇಂದ್ರವು ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 32.90 ರೂ. ಮತ್ತು ಡೀಸೆಲ್‌ಗೆ 31.80 ರೂ. ಅಬಕಾರಿ ಸುಂಕ ಹೇರುತ್ತಿದೆ.
ಸಾಮಾನ್ಯವಾಗಿ, ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ.

ಸಾಂಕ್ರಾಮಿಕದ ಬಿಕ್ಕಟ್ಟಿನ ವೇಳೆ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಇನ್ನಷ್ಟು ಹೊರೆ ಹಾಕುತ್ತಿವೆ. ಚುನಾವಣಾ ಸಂದರ್ಭ ದಲ್ಲಿ ಸ್ಥಿರವಾಗಿದ್ದ ಇಂಧನ ದರಗಳು ಈಗ ಮರಳಿ ಏರುಮುಖದಲ್ಲಿವೆ.


ಇದನ್ನೂ ಓದಿ: ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...