Homeಮುಖಪುಟಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

ಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

- Advertisement -
- Advertisement -

ಹಲವು ರಾಜ್ಯಗಳ ಚುನಾವಣೆಯ ಕಾರಣದಿಂದ ಸ್ಥಿರವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ ನಾಲ್ಕನೇ ದಿನಕ್ಕೆ ಏರಿಸಲಾಗಿದ್ದು, 2021 ರ ಮೇ 7 ರ ಶುಕ್ರವಾರದಂದು ದೇಶಾದ್ಯಂತ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ದೇಶದ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 28 ಪೈಸೆ ಏರಿಕೆಯಾದರೆ ಡೀಸೆಲ್ ದರ 31 ಪೈಸೆ ಏರಿಕೆಯಾಗಿದೆ.

ಈ ತಿಂಗಳ ಇತ್ತೀಚಿನ ಹೆಚ್ಚಳವು ಮಾರ್ಚ್ 24 ಮತ್ತು ಏಪ್ರಿಲ್ 15 ರ ನಡುವಿನ ನಾಲ್ಕು ಪರಿಷ್ಕರಣೆಗಳ ಅವಧಿಯಲ್ಲಿ ಬಂದ ಎಲ್ಲಾ ಇಂಧನ ದರಗಳ ಕಡಿತವನ್ನು ಅಳಿಸಿಹಾಕಿದೆ. ಕಳೆದ ನಾಲ್ಕು ದಿನಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87 ಪೈಸೆ ಹೆಚ್ಚಾಗಿದೆ ಮತ್ತು ಡೀಸೆಲ್ ದರ ಒಂದು ರೂಪಾಯಿ ಏರಿಕೆಯಾಗಿದೆ.

ಜನವರಿ-ಫೆಬ್ರವರಿ ಅವಧಿಯಲ್ಲಿ ಇಂಧನ ಬೆಲೆಗಳು ನಾಗಾಲೋಟದಲ್ಲಿ ಇದ್ದವು. ಈ ಮೊದಲು ಫೆಬ್ರವರಿ 27 ರಂದು ತಮ್ಮ ಹಿಂದಿನ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು. ನಂತರ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಮಾರ್ಚ್ 24 ರಿಂದ 24 ದಿನಗಳ ಕಾಲ ಇಂಧನ ದರ ಪರಿಷ್ಕರಣೆ ಮಾಡಲಿಲ್ಲ. (ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿತ್ತು. ಚುನಾವಣೆಯ ನಂತರ ಮತ್ತೆ ತೀವ್ರ ದರ ಏರಿಕೆ ಆಗಲಿದೆ ಎಂದು ನಾನುಗೌರಿ.ಕಾಂ ವರದಿ ಮಾಡಿತ್ತು)

ಮೇ 4 ರಂದು ಏರಿಕೆಯಾಗುವವರೆಗೂ ಬೆಲೆಗಳು 18 ದಿನಗಳವರೆಗೆ ಸ್ಥಿರವಾಗಿದ್ದವು. ಇತ್ತೀಚಿನ ಬೆಲೆ ಪರಿಷ್ಕರಣೆಯ ನಂತರ, ದೆಹಲಿಯಲ್ಲಿ ಪೆಟ್ರೋಲ್ ಈಗ ಲೀಟರ್ 91.27 ರೂ.ಗೆ ಮಾರಾಟವಾಗಿದ್ದರೆ, ಡೀಸೆಲ್ 81.73 ರೂ.ಗೆ ಮಾರಾಟವಾಗುತ್ತಿದೆ. ಹಣಕಾಸು ರಾಜಧಾನಿ ಮುಂಬಯಿಯಲ್ಲಿ, ಪೆಟ್ರೋಲ್ ಬೆಲೆ ಈಗ 97.61 ರೂ., ಡೀಸೆಲ್ ಬೆಲೆ 88.82 ರೂ..
ಫೆಬ್ರವರಿ ತಿಂಗಳಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಎರಡು ಸ್ಥಳಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿತ್ತು.

ಸ್ಥಳೀಯ ತೆರಿಗೆ (ವ್ಯಾಟ್) ಮತ್ತು ಸರಕು ಸಾಗಣೆ ಶುಲ್ಕವನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತದೆ ಮತ್ತು ನಂತರದ ಸ್ಥಾನದಲ್ಲಿ ಮಧ್ಯಪ್ರದೇಶವಿದೆ.

ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇಕಡಾ 60 ಮತ್ತು ಡೀಸೆಲ್‌ನ ಶೇಕಡಾ 54 ಕ್ಕಿಂತ ಹೆಚ್ಚು ಪ್ರಮಾಣದ ತೆರಿಗೆ ವಿಧಿಸುತ್ತಿವೆ. ಕೇಂದ್ರವು ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 32.90 ರೂ. ಮತ್ತು ಡೀಸೆಲ್‌ಗೆ 31.80 ರೂ. ಅಬಕಾರಿ ಸುಂಕ ಹೇರುತ್ತಿದೆ.
ಸಾಮಾನ್ಯವಾಗಿ, ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ.

ಸಾಂಕ್ರಾಮಿಕದ ಬಿಕ್ಕಟ್ಟಿನ ವೇಳೆ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಇನ್ನಷ್ಟು ಹೊರೆ ಹಾಕುತ್ತಿವೆ. ಚುನಾವಣಾ ಸಂದರ್ಭ ದಲ್ಲಿ ಸ್ಥಿರವಾಗಿದ್ದ ಇಂಧನ ದರಗಳು ಈಗ ಮರಳಿ ಏರುಮುಖದಲ್ಲಿವೆ.


ಇದನ್ನೂ ಓದಿ: ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...