Homeಕರ್ನಾಟಕಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಫೆಬ್ರವರಿ 20, 2026ರೊಳಗೆ ಅಂತಿಮ ವಾರ್ಡ್‌ವಾರು ಮೀಸಲಾತಿಯನ್ನು ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು, ಮೀಸಲಾತಿ ಅಧಿಸೂಚನೆ ಮಾಡುವ ಕೆಲಸವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇನ್ನು ಮುಂದೆ ಯಾವುದೇ ಸಮಯ ವಿಸ್ತರಣೆಯನ್ನು ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯನ್ನು ಮಾರ್ಚ್ 16, 2026ಕ್ಕೆ ನಿಗದಿಪಡಿಸಲಾಗಿದೆ ಎಂದು ಪೀಠಕ್ಕೆ ಮಾಹಿತಿ ನೀಡಿದ್ದಾರೆ. ಪರೀಕ್ಷೆಗಳ ನಂತರ ಶಾಲೆಗಳು ಮತ್ತು ಕಾಲೇಜುಗಳು ಮತದಾನ ಕೇಂದ್ರಗಳಾಗಿರಲು ಮುಕ್ತವಾಗಿರುವುದರಿಂದ ಮೇ ಅಂತ್ಯದ ವೇಳೆಗೆ ಮಾತ್ರ ಚುನಾವಣೆಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ. ಶಾಲೆಗಳು ಮತ್ತು ಶಿಕ್ಷಕರು ಮತದಾನ ಕರ್ತವ್ಯಕ್ಕೆ ಅಗತ್ಯವಿರುವುದರಿಂದ ಮೇ 26ರಂದು ಬೋರ್ಡ್ ಪರೀಕ್ಷೆಗಳು ಮುಗಿದ ತಕ್ಷಣ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ನಿಗದಿಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನು ಆಲಿಸಿದ ಪೀಠ, ಬೋರ್ಡ್ ಪರೀಕ್ಷೆಗಳು ಮುಗಿದ ತಕ್ಷಣ ಚುನಾವಣೆ ನಡೆಸಬೇಕೆಂದು ನಿರ್ದೇಶಿಸಿದೆ. ಒಟ್ಟಾರೆ, ಜೂನ್ 30, 2026ರ ಮೊದಲು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿದೆ.

ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ದಿನಾಂಕದಿಂದ ಆರು ವಾರಗಳ ಒಳಗೆ ಚುನಾವಣೆ ಘೋಷಿಸುವ ಮೂಲಕ ಪಾಲಿಕೆ ಚುನಾವಣೆಯನ್ನು ಸಾಧ್ಯವಾದಷ್ಟು ಬೇಗ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ ಕರ್ನಾಟಕ ಹೈಕೋರ್ಟ್‌ನ ಡಿಸೆಂಬರ್ 4, 2020 ರ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಡಿಸೆಂಬರ್ 18, 2020ರಂದು, ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು. 2022ರಲ್ಲಿ, ಪಾಲಿಕೆಯ ವಾರ್ಡ್‌ ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮತ್ತು ಎಂಟು ವಾರಗಳ ಅವಧಿಯಲ್ಲಿ ಅದನ್ನು ಅಧಿಸೂಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಡಿಸೆಂಬರ್ 2020ರ ತೀರ್ಪಿನಲ್ಲಿ, ಹೈಕೋರ್ಟ್‌ನ ವಿಭಾಗೀಯ ಪೀಠವು ಪಾಲಿಕೆಯ ವಾರ್ಡ್‌ಗಳನ್ನು ಹೆಚ್ಚಿಸಿದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಮೂರನೇ ತಿದ್ದುಪಡಿ ಕಾಯ್ದೆ 2020ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು. ಆದಾಗ್ಯೂ, “ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮೊದಲು ಸಂವಿಧಾನದ 243ನೇ ವಿಧಿಯ ಪ್ರಕಾರ ನಡೆಯಬೇಕಿದ್ದ ಕಾರ್ಪೋರೇಷನ್‌ಗಳ ಚುನಾವಣೆಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ತೀರ್ಮಾನಿಸಿ ಅದನ್ನು ಓದಬೇಕಾಗುತ್ತದೆ” ಎಂದು ಹೇಳಿತ್ತು.

ಜೂನ್ 23,2020ರಂದು ನಿಗದಿ ಅಧಿಸೂಚನೆಯ ಪ್ರಕಾರ 198 ವಾರ್ಡ್‌ಗಳಿಗೆ ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ಒಂದು ತಿಂಗಳೊಳಗೆ ಪ್ರಕಟಿಸುವಂತೆ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಪಾಲಿಕೆ ಚುನಾವಣೆಯನ್ನು ಸಕಾಲಿಕವಾಗಿ ನಡೆಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಈ ಆದೇಶವನ್ನು ಅಂಗೀಕರಿಸಲಾಗಿತ್ತು. ರಾಜ್ಯ ಚುನಾವಣಾ ಆಯೋಗ ಕೂಡ ಒಂದು ಅರ್ಜಿಯನ್ನು ಸಲ್ಲಿಸಿತ್ತು.

ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಈ ಆದೇಶವನ್ನು ಪ್ರಶ್ನಿಸಿ, ಹೈಕೋರ್ಟ್ ನಿರ್ದೇಶನದಂತೆ ಪಾಲಿಕೆಯ 198 ವಾರ್ಡ್‌ಗಳ ಬದಲಿಗೆ 243 ವಾರ್ಡ್‌ಗಳಿಗೆ ಚುನಾವಣೆ ನಡೆಸಬೇಕು ಎಂದು ವಾದಿಸಿತ್ತು. ಸರ್ಕಾರದ ಪ್ರಕಾರ, ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಮೂರನೇ ತಿದ್ದುಪಡಿ ಕಾಯ್ದೆ, 2020ಚುನಾವಣೆಗಳಿಗೆ ಅನ್ವಯಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...