HomeUncategorizedಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಹಲವು ಕಂಪನಿಗಳು ದೇಣಿಗೆ ನೀಡಿದ ಬೆನ್ನಲ್ಲೇ ಲಾಭ ಪಡೆದಿವೆ. ಇನ್ನೂ ಕೆಲವು ಐಟಿ, ಇಡಿ ದಾಳಿಯ ಬಳಿಕ ದೇಣಿಗೆ ನೀಡಿವೆ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿವೆ. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಗೊತ್ತಾಗಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯಲ್ಲಿ ಯಾವ ಕಂಪನಿ, ಎಷ್ಟು ದೇಣಿಗೆ ನೀಡಿದೆ ಎಂಬ ಅಂಕಿ ಅಂಶಗಳಿವೆ. ಆದರೆ, ಯಾರಿಗೆ ನೀಡಿದ್ದಾರೆ ಎಂಬುವುದು ಸ್ಪಷ್ಟವಾಗಿ ಇಲ್ಲ. ಆದರೂ, ದೇಣಿಗೆ ನೀಡಿದ ಬಳಿಕ ಹೆಚ್ಚಿನ ಕಂಪನಿಗಳು ಕೇಂದ್ರದ ಬಿಜೆಪಿ ಸರ್ಕಾರದ ಕಡೆಯಿಂದ ವಿವಿಧ ಲಾಭಗಳನ್ನು ಪಡೆದಿರುವುದು ಕಂಡು ಬಂದಿದೆ.

ಈ ಕುರಿತು ಕಾಂಗ್ರೆಸ್ ನಾಯಕರ ಜೈರಾಮ್ ರಮೇಶ್ ಕೆಲವೊಂದು ವಿವರಣೆಗಳನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವುಗಳು ಹೀಗಿವೆ..

2019 ರಿಂದ 1,300ಕ್ಕೂ ಹೆಚ್ಚು ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಈ ಮೂಲಕ ಬಿಜೆಪಿ 6,000 ಕೋಟಿ ರೂಪಾಯಿ ದೇಣಿಗೆ ಪಡೆದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದ ಕಂಪನಿಗಳು ತಕ್ಷಣವೇ ಸರ್ಕಾರದಿಂದ ಭಾರೀ ಪ್ರಯೋಜನಗಳನ್ನು ಪಡೆದ ಅನೇಕ ಉದಾಹರಣೆಗಳಿವೆ.

  • ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಏಪ್ರಿಲ್ 2023ರಲ್ಲಿ ಕಂಪನಿಯು 140 ಕೋಟಿ ರೂ. ದೇಣಿಗೆ ನೀಡಿತ್ತು. ಇದಾಗಿ ಒಂದು ತಿಂಗಳ ಬಳಿಕ ಕಂಪನಿಯು ಕೇಂದ್ರ ಸರ್ಕಾರದಿಂದ 14,400 ಕೋಟಿ ರೂ. ವೆಚ್ಚದ ಥಾಣೆ-ಬೊರಿವಲಿ ಅವಳಿ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿದೆ.
  • ಅಕ್ಟೋಬರ್ 7, 2022ರಂದು ಜಿಂದಾಲ್ ಸ್ಟೀಲ್ & ಪವರ್ ಕಂಪನಿ 25 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿತ್ತು. ಇದಾಗಿ ಕೇವಲ ಮೂರು ದಿನಗಳ ಬಳಿಕ, ಅಂದರೆ 10 ಅಕ್ಟೋಬರ್ 2022 ರಂದು ಕಂಪನಿಯು ಗರೇ ಪಾಲ್ಮಾ IV/6 ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿದೆ.

ಚುನಾವಣಾ ಬಾಂಡ್ ನೀಡಿದ ಟಾಪ್ 30 ದಾನಿಗಳ ಪೈಕಿ 14 ದಾನಿಗಳ ಮೇಲೆ ಇಡಿ, ಸಿಬಿಐ, ಐಟಿ ದಾಳಿ ನಡೆದಿದೆ. ಇದನ್ನು ಹಪ್ತಾ ವಸೂಲಿ ಎಂದು ಬಣ್ಣಿಸಿರುವ ಜೈರಾಮ್ ರಮೇಶ್, “ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಂಪನಿ ಮತ್ತು ವ್ಯಕ್ತಿಗಳನ್ನು ಬೆದರಿಸಿದ ನಂತರ ಬಿಜೆಪಿಗೆ ದೇಣಿಗೆ ಪಡೆದಿದೆ” ಎಂದು ಆರೋಪಿಸಿದ್ದಾರೆ.

  • ಹೆಟೆರೊ ಫಾರ್ಮಾ ಮತ್ತು ಯಶೋದಾ ಆಸ್ಪತ್ರೆಯಂತಹ ಕಂಪನಿಗಳು ತನಿಖಾ ಸಂಸ್ಥೆಗಳ ದಾಳಿಗೆ ಒಳಗಾದ ಬಳಿಕ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ.
  • ಆದಾಯ ತೆರಿಗೆ (ಐಟಿ) ಇಲಾಖೆಯು ಡಿಸೆಂಬರ್ 2023ರಲ್ಲಿ ಶಿರಡಿ ಸಾಯಿ ಎಲೆಕ್ಟ್ರಿಕಲ್ಸ್ ಮೇಲೆ ದಾಳಿ ನಡೆಸಿತ್ತು. ಇದೇ ಕಂಪನಿ ಜನವರಿ 2024ರಲ್ಲಿ ಚುನಾವಣಾ ಬಾಂಡ್ ಮೂಲಕ 40 ಕೋಟಿ ರೂ. ದೇಣಿಗೆ ನೀಡಿದೆ.
  • ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ಸ್ ಲಿಮಿಟೆಡ್, ರೂ. 1,200 ಕೋಟಿ ಮೌಲ್ಯದ ಬಾಂಡ್ ಖರೀದಿಸುವ ಮೂಲಕ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
  • ಏಪ್ರಿಲ್ 2, 2022 ರಂದು ಈ ಕಂಪನಿ ಮೇಲೆ ಇಡಿ ದಾಳಿ ನಡೆಸಿತ್ತು. ಇದಾಗಿ 5 ದಿನಗಳ ನಂತರ, ಅಂದರೆ ಏಪ್ರಿಲ್ 7ರಂದು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 100 ಕೋಟಿ ರೂ. ದೇಣಿಗೆ ನೀಡಿದೆ.
  • ಅಕ್ಟೋಬರ್ 2023ರಲ್ಲಿ ಐಟಿ ಇಲಾಖೆಯು ಫ್ಯೂಚರ್ ಕಂಪನಿ ಮೇಲೆ ದಾಳಿ ನಡೆಸಿತ್ತು. ಅದೇ ತಿಂಗಳು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 65 ಕೋಟಿ ರೂ. ದೇಣಿಗೆ ನೀಡಿದೆ.

ಕೇಂದ್ರ ಸರ್ಕಾರದಿಂದ ಕೆಲ ದಾಖಲೆಗಳನ್ನು ಸ್ವೀಕರಿಸಿದ ಬೆನ್ನಲ್ಲೇ ಕಂಪನಿಗಳು ದೇಣಿಗೆ ನೀಡಿವೆ. ಇದನ್ನು ಜೈರಾಮ್ ರಮೇಶ್ ಕಿಕ್ ಬ್ಯಾಕ್ ಎಂದು ಆರೋಪಿಸಿದ್ದಾರೆ.

  • ವೇದಾಂತ ಕಂಪನಿಯು 3 ಮಾರ್ಚ್ 2021ರಂದು ರಾಧಿಕಪೂರ್ ವೆಸ್ಟ್ ಖಾಸಗಿ ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿತ್ತು. ಇದಾಗಿ ಒಂದು ತಿಂಗಳ ನಂತರ ಏಪ್ರಿಲ್ 2021ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 25 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಇಂಜಿನಿಯರಿಂಗ್ ಕಂಪನಿಯು ಆಗಸ್ಟ್ 2020ರಲ್ಲಿ 4,500 ಕೋಟಿ ರೂ. ವೆಚ್ಚದ ಜೊಜಿಲಾ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿತ್ತು. ಅಕ್ಟೋಬರ್ 2020ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 20 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಕಂಪನಿಯು ಡಿಸೆಂಬರ್ 2022ರಲ್ಲಿ ಬಿಕೆಸಿ ಬುಲೆಟ್ ರೈಲು ನಿಲ್ದಾಣದ ಗುತ್ತಿಗೆಯನ್ನು ಪಡೆದಿತ್ತು. ಅದೇ ತಿಂಗಳು ಕಂಪನಿ 56 ಕೋಟಿ ರೂ. ದೇಣಿಗೆ ನೀಡಿದೆ.

ಚುನಾವಣಾ ಬಾಂಡ್‌ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಿದ ಯೋಜನೆಯಾಗಿದೆ. ತಿದ್ದುಪಡಿಯ ವೇಳೆ ಯಾವುದೇ ಕಂಪನಿಯ ಲಾಭದ ಒಂದು ಸಣ್ಣ ಶೇಕಡಾವಾರು ಭಾಗವನ್ನು ಮಾತ್ರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬಹುದೆಂಬ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.

ಇದು ಶೆಲ್ ಕಂಪನಿಗಳಿಗೆ ಕಪ್ಪು ಹಣವನ್ನು ದೇಣಿಗೆ ನೀಡಲು ಅನುವು ಮಾಡಿ ಕೊಟ್ಟಿದೆ. ಇಂತಹ ಹಲವು ಅನುಮಾನಾಸ್ಪದ ಪ್ರಕರಣಗಳಿವೆ. ಉದಾಹರಣೆಗೆ ಕ್ವಿಕ್ ಸಪ್ಲೈ ಚೈನ್ ಲಿಮಿಟೆಡ್ ಎಂಬ ಕಂಪನಿಯು ರೂ. 410 ಕೋಟಿ ದೇಣಿಗೆ ನೀಡಿದೆ. ಈ ಕಂಪನಿಯ ಸಂಪೂರ್ಣ ಷೇರು ಬಂಡವಾಳ ಕೇವಲ 130 ಕೋಟಿ ರೂ. ಮಾತ್ರ.

ಎಸ್‌ಬಿಐ ಒದಗಿಸಿದ ಡೇಟಾವು ಏಪ್ರಿಲ್ 2019ರಿಂದ ಮಾರಾಟ ಮಾಡಿದ ಬಾಂಡ್‌ಗಳದ್ದಾಗಿದೆ. ಆದರೆ ಎಸ್‌ಬಿಐ ಮಾರ್ಚ್ 2018 ರಲ್ಲಿ ಮೊದಲ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಹಾಗಾಗಿ, ಡೇಟಾದಿಂದ 2,500 ಕೋಟಿ ರೂ. ಮೌಲ್ಯದ ಬಾಂಡ್‌ಗಳು ಕಾಣೆಯಾಗಿವೆ. ಮಾರ್ಚ್ 2018 ರಿಂದ ಏಪ್ರಿಲ್ 2019 ರವರೆಗಿನ ಈ ಕಾಣೆಯಾದ ಬಾಂಡ್‌ಗಳ ಡೇಟಾ ಎಲ್ಲಿದೆ? ಉದಾಹರಣೆಗೆ, ಬಾಂಡ್‌ಗಳ ಮೊದಲ ಕಂತಿನಲ್ಲಿ ಬಿಜೆಪಿ ಶೇ. 95 ಹಣವನ್ನು ಪಡೆದುಕೊಂಡಿದೆ. ಬಿಜೆಪಿ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಅಂಕಿ ಅಂಶಗಳ ವಿಶ್ಲೇಷಣೆ ಮುಂದುವರಿದಂತೆ, ಬಿಜೆಪಿಯ ಭ್ರಷ್ಟಾಚಾರದ ಇನ್ನೂ ಅನೇಕ ಪ್ರಕರಣಗಳು ಬಯಲಿಗೆ ಬರಲಿವೆ. ನಾವು ವಿಶಿಷ್ಟ ಬಾಂಡ್‌ಗಳ ಐಡಿ ಸಂಖ್ಯೆ ಅಥವಾ ಸೀರಿಯಲ್ ನಂಬರ್ ಬಹಿರಂಗಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ. ಇದರಿಂದ ಯಾವ ಪಕ್ಷ, ಯಾರಿಂದ ಎಷ್ಟು ದೇಣಿಗೆ ಪಡೆದಿದೆ ಎಂಬುವುದು ಗೊತ್ತಾಗಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ 1,260 ಕಂಪನಿಗಳು ಹಾಗೂ ವ್ಯಕ್ತಿಗಳು 12,769 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿದ್ದು, ಇದರಲ್ಲಿ ಅಗ್ರ 20 ಕಂಪನಿಗಳ ಪಾಲು 5,945 ಕೋಟಿ ರೂಪಾಯಿ. ಅಂದರೆ ಒಟ್ಟು ಮೌಲ್ಯದ ಸುಮಾರು ಶೇಕಡ 50ರಷ್ಟು.

ದೇಣಿಗೆ ನೀಡಿದ ಸುಮಾರು 500 ಕಂಪನಿಗಳ ಪೈಕಿ 28 ಕಂಪನಿಗಳು 2019ರ ಏಪ್ರಿಲ್ 12ರ ಬಳಿಕ ಸ್ಥಾಪನೆಯಾದ ಕಂಪನಿಗಳು. 20 ಅಗ್ರ ಖರೀದಿದಾರ ಕಂಪನಿಗಳ ಪೈಕಿ 13 ಕಂಪನಿಗಳ ಹಣಕಾಸು ಫಲಿತಾಂಶ ಲಭ್ಯವಿದ್ದು, ತಮ್ಮ ನಿವ್ವಳ ಲಾಭದ ಪ್ರಮಾಣಾನುಸಾರ ಈ ಕಂಪನಿಗಳು ಬಾಂಡ್ ಖರೀದಿಸಿವೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...