HomeUncategorizedಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಹಲವು ಕಂಪನಿಗಳು ದೇಣಿಗೆ ನೀಡಿದ ಬೆನ್ನಲ್ಲೇ ಲಾಭ ಪಡೆದಿವೆ. ಇನ್ನೂ ಕೆಲವು ಐಟಿ, ಇಡಿ ದಾಳಿಯ ಬಳಿಕ ದೇಣಿಗೆ ನೀಡಿವೆ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿವೆ. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಗೊತ್ತಾಗಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯಲ್ಲಿ ಯಾವ ಕಂಪನಿ, ಎಷ್ಟು ದೇಣಿಗೆ ನೀಡಿದೆ ಎಂಬ ಅಂಕಿ ಅಂಶಗಳಿವೆ. ಆದರೆ, ಯಾರಿಗೆ ನೀಡಿದ್ದಾರೆ ಎಂಬುವುದು ಸ್ಪಷ್ಟವಾಗಿ ಇಲ್ಲ. ಆದರೂ, ದೇಣಿಗೆ ನೀಡಿದ ಬಳಿಕ ಹೆಚ್ಚಿನ ಕಂಪನಿಗಳು ಕೇಂದ್ರದ ಬಿಜೆಪಿ ಸರ್ಕಾರದ ಕಡೆಯಿಂದ ವಿವಿಧ ಲಾಭಗಳನ್ನು ಪಡೆದಿರುವುದು ಕಂಡು ಬಂದಿದೆ.

ಈ ಕುರಿತು ಕಾಂಗ್ರೆಸ್ ನಾಯಕರ ಜೈರಾಮ್ ರಮೇಶ್ ಕೆಲವೊಂದು ವಿವರಣೆಗಳನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವುಗಳು ಹೀಗಿವೆ..

2019 ರಿಂದ 1,300ಕ್ಕೂ ಹೆಚ್ಚು ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಈ ಮೂಲಕ ಬಿಜೆಪಿ 6,000 ಕೋಟಿ ರೂಪಾಯಿ ದೇಣಿಗೆ ಪಡೆದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದ ಕಂಪನಿಗಳು ತಕ್ಷಣವೇ ಸರ್ಕಾರದಿಂದ ಭಾರೀ ಪ್ರಯೋಜನಗಳನ್ನು ಪಡೆದ ಅನೇಕ ಉದಾಹರಣೆಗಳಿವೆ.

  • ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಏಪ್ರಿಲ್ 2023ರಲ್ಲಿ ಕಂಪನಿಯು 140 ಕೋಟಿ ರೂ. ದೇಣಿಗೆ ನೀಡಿತ್ತು. ಇದಾಗಿ ಒಂದು ತಿಂಗಳ ಬಳಿಕ ಕಂಪನಿಯು ಕೇಂದ್ರ ಸರ್ಕಾರದಿಂದ 14,400 ಕೋಟಿ ರೂ. ವೆಚ್ಚದ ಥಾಣೆ-ಬೊರಿವಲಿ ಅವಳಿ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿದೆ.
  • ಅಕ್ಟೋಬರ್ 7, 2022ರಂದು ಜಿಂದಾಲ್ ಸ್ಟೀಲ್ & ಪವರ್ ಕಂಪನಿ 25 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿತ್ತು. ಇದಾಗಿ ಕೇವಲ ಮೂರು ದಿನಗಳ ಬಳಿಕ, ಅಂದರೆ 10 ಅಕ್ಟೋಬರ್ 2022 ರಂದು ಕಂಪನಿಯು ಗರೇ ಪಾಲ್ಮಾ IV/6 ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿದೆ.

ಚುನಾವಣಾ ಬಾಂಡ್ ನೀಡಿದ ಟಾಪ್ 30 ದಾನಿಗಳ ಪೈಕಿ 14 ದಾನಿಗಳ ಮೇಲೆ ಇಡಿ, ಸಿಬಿಐ, ಐಟಿ ದಾಳಿ ನಡೆದಿದೆ. ಇದನ್ನು ಹಪ್ತಾ ವಸೂಲಿ ಎಂದು ಬಣ್ಣಿಸಿರುವ ಜೈರಾಮ್ ರಮೇಶ್, “ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಂಪನಿ ಮತ್ತು ವ್ಯಕ್ತಿಗಳನ್ನು ಬೆದರಿಸಿದ ನಂತರ ಬಿಜೆಪಿಗೆ ದೇಣಿಗೆ ಪಡೆದಿದೆ” ಎಂದು ಆರೋಪಿಸಿದ್ದಾರೆ.

  • ಹೆಟೆರೊ ಫಾರ್ಮಾ ಮತ್ತು ಯಶೋದಾ ಆಸ್ಪತ್ರೆಯಂತಹ ಕಂಪನಿಗಳು ತನಿಖಾ ಸಂಸ್ಥೆಗಳ ದಾಳಿಗೆ ಒಳಗಾದ ಬಳಿಕ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ.
  • ಆದಾಯ ತೆರಿಗೆ (ಐಟಿ) ಇಲಾಖೆಯು ಡಿಸೆಂಬರ್ 2023ರಲ್ಲಿ ಶಿರಡಿ ಸಾಯಿ ಎಲೆಕ್ಟ್ರಿಕಲ್ಸ್ ಮೇಲೆ ದಾಳಿ ನಡೆಸಿತ್ತು. ಇದೇ ಕಂಪನಿ ಜನವರಿ 2024ರಲ್ಲಿ ಚುನಾವಣಾ ಬಾಂಡ್ ಮೂಲಕ 40 ಕೋಟಿ ರೂ. ದೇಣಿಗೆ ನೀಡಿದೆ.
  • ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ಸ್ ಲಿಮಿಟೆಡ್, ರೂ. 1,200 ಕೋಟಿ ಮೌಲ್ಯದ ಬಾಂಡ್ ಖರೀದಿಸುವ ಮೂಲಕ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
  • ಏಪ್ರಿಲ್ 2, 2022 ರಂದು ಈ ಕಂಪನಿ ಮೇಲೆ ಇಡಿ ದಾಳಿ ನಡೆಸಿತ್ತು. ಇದಾಗಿ 5 ದಿನಗಳ ನಂತರ, ಅಂದರೆ ಏಪ್ರಿಲ್ 7ರಂದು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 100 ಕೋಟಿ ರೂ. ದೇಣಿಗೆ ನೀಡಿದೆ.
  • ಅಕ್ಟೋಬರ್ 2023ರಲ್ಲಿ ಐಟಿ ಇಲಾಖೆಯು ಫ್ಯೂಚರ್ ಕಂಪನಿ ಮೇಲೆ ದಾಳಿ ನಡೆಸಿತ್ತು. ಅದೇ ತಿಂಗಳು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 65 ಕೋಟಿ ರೂ. ದೇಣಿಗೆ ನೀಡಿದೆ.

ಕೇಂದ್ರ ಸರ್ಕಾರದಿಂದ ಕೆಲ ದಾಖಲೆಗಳನ್ನು ಸ್ವೀಕರಿಸಿದ ಬೆನ್ನಲ್ಲೇ ಕಂಪನಿಗಳು ದೇಣಿಗೆ ನೀಡಿವೆ. ಇದನ್ನು ಜೈರಾಮ್ ರಮೇಶ್ ಕಿಕ್ ಬ್ಯಾಕ್ ಎಂದು ಆರೋಪಿಸಿದ್ದಾರೆ.

  • ವೇದಾಂತ ಕಂಪನಿಯು 3 ಮಾರ್ಚ್ 2021ರಂದು ರಾಧಿಕಪೂರ್ ವೆಸ್ಟ್ ಖಾಸಗಿ ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿತ್ತು. ಇದಾಗಿ ಒಂದು ತಿಂಗಳ ನಂತರ ಏಪ್ರಿಲ್ 2021ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 25 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಇಂಜಿನಿಯರಿಂಗ್ ಕಂಪನಿಯು ಆಗಸ್ಟ್ 2020ರಲ್ಲಿ 4,500 ಕೋಟಿ ರೂ. ವೆಚ್ಚದ ಜೊಜಿಲಾ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿತ್ತು. ಅಕ್ಟೋಬರ್ 2020ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 20 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಕಂಪನಿಯು ಡಿಸೆಂಬರ್ 2022ರಲ್ಲಿ ಬಿಕೆಸಿ ಬುಲೆಟ್ ರೈಲು ನಿಲ್ದಾಣದ ಗುತ್ತಿಗೆಯನ್ನು ಪಡೆದಿತ್ತು. ಅದೇ ತಿಂಗಳು ಕಂಪನಿ 56 ಕೋಟಿ ರೂ. ದೇಣಿಗೆ ನೀಡಿದೆ.

ಚುನಾವಣಾ ಬಾಂಡ್‌ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಿದ ಯೋಜನೆಯಾಗಿದೆ. ತಿದ್ದುಪಡಿಯ ವೇಳೆ ಯಾವುದೇ ಕಂಪನಿಯ ಲಾಭದ ಒಂದು ಸಣ್ಣ ಶೇಕಡಾವಾರು ಭಾಗವನ್ನು ಮಾತ್ರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬಹುದೆಂಬ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.

ಇದು ಶೆಲ್ ಕಂಪನಿಗಳಿಗೆ ಕಪ್ಪು ಹಣವನ್ನು ದೇಣಿಗೆ ನೀಡಲು ಅನುವು ಮಾಡಿ ಕೊಟ್ಟಿದೆ. ಇಂತಹ ಹಲವು ಅನುಮಾನಾಸ್ಪದ ಪ್ರಕರಣಗಳಿವೆ. ಉದಾಹರಣೆಗೆ ಕ್ವಿಕ್ ಸಪ್ಲೈ ಚೈನ್ ಲಿಮಿಟೆಡ್ ಎಂಬ ಕಂಪನಿಯು ರೂ. 410 ಕೋಟಿ ದೇಣಿಗೆ ನೀಡಿದೆ. ಈ ಕಂಪನಿಯ ಸಂಪೂರ್ಣ ಷೇರು ಬಂಡವಾಳ ಕೇವಲ 130 ಕೋಟಿ ರೂ. ಮಾತ್ರ.

ಎಸ್‌ಬಿಐ ಒದಗಿಸಿದ ಡೇಟಾವು ಏಪ್ರಿಲ್ 2019ರಿಂದ ಮಾರಾಟ ಮಾಡಿದ ಬಾಂಡ್‌ಗಳದ್ದಾಗಿದೆ. ಆದರೆ ಎಸ್‌ಬಿಐ ಮಾರ್ಚ್ 2018 ರಲ್ಲಿ ಮೊದಲ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಹಾಗಾಗಿ, ಡೇಟಾದಿಂದ 2,500 ಕೋಟಿ ರೂ. ಮೌಲ್ಯದ ಬಾಂಡ್‌ಗಳು ಕಾಣೆಯಾಗಿವೆ. ಮಾರ್ಚ್ 2018 ರಿಂದ ಏಪ್ರಿಲ್ 2019 ರವರೆಗಿನ ಈ ಕಾಣೆಯಾದ ಬಾಂಡ್‌ಗಳ ಡೇಟಾ ಎಲ್ಲಿದೆ? ಉದಾಹರಣೆಗೆ, ಬಾಂಡ್‌ಗಳ ಮೊದಲ ಕಂತಿನಲ್ಲಿ ಬಿಜೆಪಿ ಶೇ. 95 ಹಣವನ್ನು ಪಡೆದುಕೊಂಡಿದೆ. ಬಿಜೆಪಿ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಅಂಕಿ ಅಂಶಗಳ ವಿಶ್ಲೇಷಣೆ ಮುಂದುವರಿದಂತೆ, ಬಿಜೆಪಿಯ ಭ್ರಷ್ಟಾಚಾರದ ಇನ್ನೂ ಅನೇಕ ಪ್ರಕರಣಗಳು ಬಯಲಿಗೆ ಬರಲಿವೆ. ನಾವು ವಿಶಿಷ್ಟ ಬಾಂಡ್‌ಗಳ ಐಡಿ ಸಂಖ್ಯೆ ಅಥವಾ ಸೀರಿಯಲ್ ನಂಬರ್ ಬಹಿರಂಗಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ. ಇದರಿಂದ ಯಾವ ಪಕ್ಷ, ಯಾರಿಂದ ಎಷ್ಟು ದೇಣಿಗೆ ಪಡೆದಿದೆ ಎಂಬುವುದು ಗೊತ್ತಾಗಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ 1,260 ಕಂಪನಿಗಳು ಹಾಗೂ ವ್ಯಕ್ತಿಗಳು 12,769 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿದ್ದು, ಇದರಲ್ಲಿ ಅಗ್ರ 20 ಕಂಪನಿಗಳ ಪಾಲು 5,945 ಕೋಟಿ ರೂಪಾಯಿ. ಅಂದರೆ ಒಟ್ಟು ಮೌಲ್ಯದ ಸುಮಾರು ಶೇಕಡ 50ರಷ್ಟು.

ದೇಣಿಗೆ ನೀಡಿದ ಸುಮಾರು 500 ಕಂಪನಿಗಳ ಪೈಕಿ 28 ಕಂಪನಿಗಳು 2019ರ ಏಪ್ರಿಲ್ 12ರ ಬಳಿಕ ಸ್ಥಾಪನೆಯಾದ ಕಂಪನಿಗಳು. 20 ಅಗ್ರ ಖರೀದಿದಾರ ಕಂಪನಿಗಳ ಪೈಕಿ 13 ಕಂಪನಿಗಳ ಹಣಕಾಸು ಫಲಿತಾಂಶ ಲಭ್ಯವಿದ್ದು, ತಮ್ಮ ನಿವ್ವಳ ಲಾಭದ ಪ್ರಮಾಣಾನುಸಾರ ಈ ಕಂಪನಿಗಳು ಬಾಂಡ್ ಖರೀದಿಸಿವೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...