HomeUncategorizedಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಹಲವು ಕಂಪನಿಗಳು ದೇಣಿಗೆ ನೀಡಿದ ಬೆನ್ನಲ್ಲೇ ಲಾಭ ಪಡೆದಿವೆ. ಇನ್ನೂ ಕೆಲವು ಐಟಿ, ಇಡಿ ದಾಳಿಯ ಬಳಿಕ ದೇಣಿಗೆ ನೀಡಿವೆ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿವೆ. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಗೊತ್ತಾಗಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯಲ್ಲಿ ಯಾವ ಕಂಪನಿ, ಎಷ್ಟು ದೇಣಿಗೆ ನೀಡಿದೆ ಎಂಬ ಅಂಕಿ ಅಂಶಗಳಿವೆ. ಆದರೆ, ಯಾರಿಗೆ ನೀಡಿದ್ದಾರೆ ಎಂಬುವುದು ಸ್ಪಷ್ಟವಾಗಿ ಇಲ್ಲ. ಆದರೂ, ದೇಣಿಗೆ ನೀಡಿದ ಬಳಿಕ ಹೆಚ್ಚಿನ ಕಂಪನಿಗಳು ಕೇಂದ್ರದ ಬಿಜೆಪಿ ಸರ್ಕಾರದ ಕಡೆಯಿಂದ ವಿವಿಧ ಲಾಭಗಳನ್ನು ಪಡೆದಿರುವುದು ಕಂಡು ಬಂದಿದೆ.

ಈ ಕುರಿತು ಕಾಂಗ್ರೆಸ್ ನಾಯಕರ ಜೈರಾಮ್ ರಮೇಶ್ ಕೆಲವೊಂದು ವಿವರಣೆಗಳನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವುಗಳು ಹೀಗಿವೆ..

2019 ರಿಂದ 1,300ಕ್ಕೂ ಹೆಚ್ಚು ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಈ ಮೂಲಕ ಬಿಜೆಪಿ 6,000 ಕೋಟಿ ರೂಪಾಯಿ ದೇಣಿಗೆ ಪಡೆದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದ ಕಂಪನಿಗಳು ತಕ್ಷಣವೇ ಸರ್ಕಾರದಿಂದ ಭಾರೀ ಪ್ರಯೋಜನಗಳನ್ನು ಪಡೆದ ಅನೇಕ ಉದಾಹರಣೆಗಳಿವೆ.

  • ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಏಪ್ರಿಲ್ 2023ರಲ್ಲಿ ಕಂಪನಿಯು 140 ಕೋಟಿ ರೂ. ದೇಣಿಗೆ ನೀಡಿತ್ತು. ಇದಾಗಿ ಒಂದು ತಿಂಗಳ ಬಳಿಕ ಕಂಪನಿಯು ಕೇಂದ್ರ ಸರ್ಕಾರದಿಂದ 14,400 ಕೋಟಿ ರೂ. ವೆಚ್ಚದ ಥಾಣೆ-ಬೊರಿವಲಿ ಅವಳಿ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿದೆ.
  • ಅಕ್ಟೋಬರ್ 7, 2022ರಂದು ಜಿಂದಾಲ್ ಸ್ಟೀಲ್ & ಪವರ್ ಕಂಪನಿ 25 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿತ್ತು. ಇದಾಗಿ ಕೇವಲ ಮೂರು ದಿನಗಳ ಬಳಿಕ, ಅಂದರೆ 10 ಅಕ್ಟೋಬರ್ 2022 ರಂದು ಕಂಪನಿಯು ಗರೇ ಪಾಲ್ಮಾ IV/6 ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿದೆ.

ಚುನಾವಣಾ ಬಾಂಡ್ ನೀಡಿದ ಟಾಪ್ 30 ದಾನಿಗಳ ಪೈಕಿ 14 ದಾನಿಗಳ ಮೇಲೆ ಇಡಿ, ಸಿಬಿಐ, ಐಟಿ ದಾಳಿ ನಡೆದಿದೆ. ಇದನ್ನು ಹಪ್ತಾ ವಸೂಲಿ ಎಂದು ಬಣ್ಣಿಸಿರುವ ಜೈರಾಮ್ ರಮೇಶ್, “ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಂಪನಿ ಮತ್ತು ವ್ಯಕ್ತಿಗಳನ್ನು ಬೆದರಿಸಿದ ನಂತರ ಬಿಜೆಪಿಗೆ ದೇಣಿಗೆ ಪಡೆದಿದೆ” ಎಂದು ಆರೋಪಿಸಿದ್ದಾರೆ.

  • ಹೆಟೆರೊ ಫಾರ್ಮಾ ಮತ್ತು ಯಶೋದಾ ಆಸ್ಪತ್ರೆಯಂತಹ ಕಂಪನಿಗಳು ತನಿಖಾ ಸಂಸ್ಥೆಗಳ ದಾಳಿಗೆ ಒಳಗಾದ ಬಳಿಕ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ.
  • ಆದಾಯ ತೆರಿಗೆ (ಐಟಿ) ಇಲಾಖೆಯು ಡಿಸೆಂಬರ್ 2023ರಲ್ಲಿ ಶಿರಡಿ ಸಾಯಿ ಎಲೆಕ್ಟ್ರಿಕಲ್ಸ್ ಮೇಲೆ ದಾಳಿ ನಡೆಸಿತ್ತು. ಇದೇ ಕಂಪನಿ ಜನವರಿ 2024ರಲ್ಲಿ ಚುನಾವಣಾ ಬಾಂಡ್ ಮೂಲಕ 40 ಕೋಟಿ ರೂ. ದೇಣಿಗೆ ನೀಡಿದೆ.
  • ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ಸ್ ಲಿಮಿಟೆಡ್, ರೂ. 1,200 ಕೋಟಿ ಮೌಲ್ಯದ ಬಾಂಡ್ ಖರೀದಿಸುವ ಮೂಲಕ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
  • ಏಪ್ರಿಲ್ 2, 2022 ರಂದು ಈ ಕಂಪನಿ ಮೇಲೆ ಇಡಿ ದಾಳಿ ನಡೆಸಿತ್ತು. ಇದಾಗಿ 5 ದಿನಗಳ ನಂತರ, ಅಂದರೆ ಏಪ್ರಿಲ್ 7ರಂದು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 100 ಕೋಟಿ ರೂ. ದೇಣಿಗೆ ನೀಡಿದೆ.
  • ಅಕ್ಟೋಬರ್ 2023ರಲ್ಲಿ ಐಟಿ ಇಲಾಖೆಯು ಫ್ಯೂಚರ್ ಕಂಪನಿ ಮೇಲೆ ದಾಳಿ ನಡೆಸಿತ್ತು. ಅದೇ ತಿಂಗಳು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 65 ಕೋಟಿ ರೂ. ದೇಣಿಗೆ ನೀಡಿದೆ.

ಕೇಂದ್ರ ಸರ್ಕಾರದಿಂದ ಕೆಲ ದಾಖಲೆಗಳನ್ನು ಸ್ವೀಕರಿಸಿದ ಬೆನ್ನಲ್ಲೇ ಕಂಪನಿಗಳು ದೇಣಿಗೆ ನೀಡಿವೆ. ಇದನ್ನು ಜೈರಾಮ್ ರಮೇಶ್ ಕಿಕ್ ಬ್ಯಾಕ್ ಎಂದು ಆರೋಪಿಸಿದ್ದಾರೆ.

  • ವೇದಾಂತ ಕಂಪನಿಯು 3 ಮಾರ್ಚ್ 2021ರಂದು ರಾಧಿಕಪೂರ್ ವೆಸ್ಟ್ ಖಾಸಗಿ ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿತ್ತು. ಇದಾಗಿ ಒಂದು ತಿಂಗಳ ನಂತರ ಏಪ್ರಿಲ್ 2021ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 25 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಇಂಜಿನಿಯರಿಂಗ್ ಕಂಪನಿಯು ಆಗಸ್ಟ್ 2020ರಲ್ಲಿ 4,500 ಕೋಟಿ ರೂ. ವೆಚ್ಚದ ಜೊಜಿಲಾ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿತ್ತು. ಅಕ್ಟೋಬರ್ 2020ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 20 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಕಂಪನಿಯು ಡಿಸೆಂಬರ್ 2022ರಲ್ಲಿ ಬಿಕೆಸಿ ಬುಲೆಟ್ ರೈಲು ನಿಲ್ದಾಣದ ಗುತ್ತಿಗೆಯನ್ನು ಪಡೆದಿತ್ತು. ಅದೇ ತಿಂಗಳು ಕಂಪನಿ 56 ಕೋಟಿ ರೂ. ದೇಣಿಗೆ ನೀಡಿದೆ.

ಚುನಾವಣಾ ಬಾಂಡ್‌ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಿದ ಯೋಜನೆಯಾಗಿದೆ. ತಿದ್ದುಪಡಿಯ ವೇಳೆ ಯಾವುದೇ ಕಂಪನಿಯ ಲಾಭದ ಒಂದು ಸಣ್ಣ ಶೇಕಡಾವಾರು ಭಾಗವನ್ನು ಮಾತ್ರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬಹುದೆಂಬ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.

ಇದು ಶೆಲ್ ಕಂಪನಿಗಳಿಗೆ ಕಪ್ಪು ಹಣವನ್ನು ದೇಣಿಗೆ ನೀಡಲು ಅನುವು ಮಾಡಿ ಕೊಟ್ಟಿದೆ. ಇಂತಹ ಹಲವು ಅನುಮಾನಾಸ್ಪದ ಪ್ರಕರಣಗಳಿವೆ. ಉದಾಹರಣೆಗೆ ಕ್ವಿಕ್ ಸಪ್ಲೈ ಚೈನ್ ಲಿಮಿಟೆಡ್ ಎಂಬ ಕಂಪನಿಯು ರೂ. 410 ಕೋಟಿ ದೇಣಿಗೆ ನೀಡಿದೆ. ಈ ಕಂಪನಿಯ ಸಂಪೂರ್ಣ ಷೇರು ಬಂಡವಾಳ ಕೇವಲ 130 ಕೋಟಿ ರೂ. ಮಾತ್ರ.

ಎಸ್‌ಬಿಐ ಒದಗಿಸಿದ ಡೇಟಾವು ಏಪ್ರಿಲ್ 2019ರಿಂದ ಮಾರಾಟ ಮಾಡಿದ ಬಾಂಡ್‌ಗಳದ್ದಾಗಿದೆ. ಆದರೆ ಎಸ್‌ಬಿಐ ಮಾರ್ಚ್ 2018 ರಲ್ಲಿ ಮೊದಲ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಹಾಗಾಗಿ, ಡೇಟಾದಿಂದ 2,500 ಕೋಟಿ ರೂ. ಮೌಲ್ಯದ ಬಾಂಡ್‌ಗಳು ಕಾಣೆಯಾಗಿವೆ. ಮಾರ್ಚ್ 2018 ರಿಂದ ಏಪ್ರಿಲ್ 2019 ರವರೆಗಿನ ಈ ಕಾಣೆಯಾದ ಬಾಂಡ್‌ಗಳ ಡೇಟಾ ಎಲ್ಲಿದೆ? ಉದಾಹರಣೆಗೆ, ಬಾಂಡ್‌ಗಳ ಮೊದಲ ಕಂತಿನಲ್ಲಿ ಬಿಜೆಪಿ ಶೇ. 95 ಹಣವನ್ನು ಪಡೆದುಕೊಂಡಿದೆ. ಬಿಜೆಪಿ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಅಂಕಿ ಅಂಶಗಳ ವಿಶ್ಲೇಷಣೆ ಮುಂದುವರಿದಂತೆ, ಬಿಜೆಪಿಯ ಭ್ರಷ್ಟಾಚಾರದ ಇನ್ನೂ ಅನೇಕ ಪ್ರಕರಣಗಳು ಬಯಲಿಗೆ ಬರಲಿವೆ. ನಾವು ವಿಶಿಷ್ಟ ಬಾಂಡ್‌ಗಳ ಐಡಿ ಸಂಖ್ಯೆ ಅಥವಾ ಸೀರಿಯಲ್ ನಂಬರ್ ಬಹಿರಂಗಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ. ಇದರಿಂದ ಯಾವ ಪಕ್ಷ, ಯಾರಿಂದ ಎಷ್ಟು ದೇಣಿಗೆ ಪಡೆದಿದೆ ಎಂಬುವುದು ಗೊತ್ತಾಗಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ 1,260 ಕಂಪನಿಗಳು ಹಾಗೂ ವ್ಯಕ್ತಿಗಳು 12,769 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿದ್ದು, ಇದರಲ್ಲಿ ಅಗ್ರ 20 ಕಂಪನಿಗಳ ಪಾಲು 5,945 ಕೋಟಿ ರೂಪಾಯಿ. ಅಂದರೆ ಒಟ್ಟು ಮೌಲ್ಯದ ಸುಮಾರು ಶೇಕಡ 50ರಷ್ಟು.

ದೇಣಿಗೆ ನೀಡಿದ ಸುಮಾರು 500 ಕಂಪನಿಗಳ ಪೈಕಿ 28 ಕಂಪನಿಗಳು 2019ರ ಏಪ್ರಿಲ್ 12ರ ಬಳಿಕ ಸ್ಥಾಪನೆಯಾದ ಕಂಪನಿಗಳು. 20 ಅಗ್ರ ಖರೀದಿದಾರ ಕಂಪನಿಗಳ ಪೈಕಿ 13 ಕಂಪನಿಗಳ ಹಣಕಾಸು ಫಲಿತಾಂಶ ಲಭ್ಯವಿದ್ದು, ತಮ್ಮ ನಿವ್ವಳ ಲಾಭದ ಪ್ರಮಾಣಾನುಸಾರ ಈ ಕಂಪನಿಗಳು ಬಾಂಡ್ ಖರೀದಿಸಿವೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...