Homeಮುಖಪುಟ4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

- Advertisement -
- Advertisement -

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿದೆ. ಆದರೆ ಎಸ್‌ಬಿಐ ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿಲ್ಲ ಎನ್ನವುದು ಆ ಬಳಿಕ ಬಹಿರಂಗವಾಗಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2018ರಿಂದ 16,518 ಕೋಟಿ ಮೌಲ್ಯದ 28,030 ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ, ಆದರೆ ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ಇದ್ದು, ಅದರ ಮೌಲ್ಯ 12,516 ಕೋಟಿ ರೂ.ಆಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ನೀಡಲಾಗಿಲ್ಲ.

4,002 ಕೋಟಿ ಮೌಲ್ಯದ 9,159 ಬಾಂಡ್‌ಗಳ ಮಾಹಿತಿಯನ್ನು ಏಕೆ ಬಹಿರಂಗಪಡಿಸಿಲ್ಲ?

ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಲೆಕ್ಕಾಚಾರದಲ್ಲಿ “ಮೇಲ್ವಿಚಾರಣೆ” ಮಾಡಿಡುತ್ತಿದೆ ಎಂದು ಹೇಳಿದೆ. ಉತ್ತರದ ಇನ್ನೊಂದು ಭಾಗವು ಇನ್ನೂ ಸಾರ್ವಜನಿಕಗೊಳಿಸದ “ಸೀಲ್‌ ಮಾಡಿದ ಕವರ್” ನಲ್ಲಿದೆ.

ಫೆಬ್ರವರಿ 15ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿತ್ತು. ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿತ್ತು.

ಮಾರ್ಚ್ 1, 2018ರಿಂದ, ಬ್ಯಾಂಕ್ 30 ಹಂತಗಳಲ್ಲಿ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಆದರೆ ಮಾರ್ಚ್ 4 ರಂದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲು ಅವಧಿ ವಿಸ್ತರಣೆಯನ್ನು ಕೋರಿ ನ್ಯಾಯಾಲಯದ ಮುಂದೆ ಸಲ್ಲಿಸಿದ ಮನವಿಯಲ್ಲಿ,  ಏಪ್ರಿಲ್ 2019ರಿಂದ 22 ಹಂತಗಳಲ್ಲಿ ಮಾರಾಟವಾದ ಬಾಂಡ್‌ಗಳನ್ನು ಮಾತ್ರ ಲೆಕ್ಕ ಹೇಳಿದೆ. ಅದರಲ್ಲಿ ಏಪ್ರಿಲ್ 12, 2019 ರಿಂದ ಫೆಬ್ರವರಿ 15, 2024ರ ನಡುವೆ ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಇಪ್ಪತ್ತೆರಡು ಸಾವಿರದ ಇನ್ನೂರ ಹದಿನೇಳು (22,217) ಚುನಾವಣಾ ಬಾಂಡ್‌ಗಳನ್ನು ಬಳಸಲಾಗಿದೆ ಎಂದು ಬ್ಯಾಂಕ್‌ ಹೇಳಿದೆ.

ಮಾರ್ಚ್ 12ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಏಪ್ರಿಲ್ 12, 2019 ಮತ್ತು ಫೆಬ್ರವರಿ 15, 2024 ರ ನಡುವೆ ವಾಸ್ತವವಾಗಿ ಕೇವಲ 18,871 ಬಾಂಡ್‌ಗಳನ್ನು ಮಾರಾಟ ಮಾಡಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಉಳಿದ 3,346 ಬಾಂಡ್‌ಗಳನ್ನು ಏಪ್ರಿಲ್ 1, 2019 ರಿಂದ ಏಪ್ರಿಲ್ 11, 2019ರ ನಡುವೆ  ಮಾರಾಟ ಮಾಡಲಾಗಿದೆ.

3,346 ಬಾಂಡ್‌ಗಳ ಬಗ್ಗೆ ಮಾಹಿತಿ ಏಕೆ ಬಿಡುಗಡೆ ಮಾಡಲಿಲ್ಲ?

ಅಫಿಡವಿಟ್‌ನಲ್ಲಿ, ಸುಪ್ರೀಂಕೋರ್ಟ್‌ನ ಫೆಬ್ರವರಿ 2024ರ ತೀರ್ಪನ್ನು ಉಲ್ಲೇಖಿಸಲಾಗಿದೆ. ಅದರಲ್ಲಿ  ನ್ಯಾಯಾಲಯ 12 ಏಪ್ರಿಲ್ 2019ರ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ECIಗೆ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಲು ಕೇಳಿದೆ.

2019ರ ಏಪ್ರಿಲ್ 12ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್, ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರಿದ್ದ ತ್ರಿಸದಸ್ಯ ಪೀಠವು ಮಧ್ಯಂತರ ಆದೇಶವನ್ನು ನೀಡಿದೆ.  ಚುನಾವಣಾ ಬಾಂಡ್‌ಗಳಿಗೆ  ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಮೇ 15ರ ಒಳಗೆ ಸಲ್ಲಿಸಲು  ಬ್ಯಾಂಕ್‌ಗೆ ತಿಳಿಸಲಾಗಿತ್ತು.

ಆದರೆ ಈಗಿನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಈಗಾಗಲೇ ಮುಚ್ಚಿದ ಕವರ್‌ನಲ್ಲಿ ಸಲ್ಲಿಸಿರುವ ಡೇಟಾವನ್ನು ಹೊರತುಪಡಿಸಿ ಇತರ ಡೇಟಾವನ್ನು ಬಿಡುಗಡೆ ಮಾಡುವಂತೆ ಎಸ್‌ಬಿಐಗೆ ನಿರ್ದೇಶಿಸಿದೆ. ಆದರೆ ಎಸ್‌ಬಿಐ ಇದನ್ನು ಏಪ್ರಿಲ್ 12, 2019ರಿಂದ ಫೆಬ್ರವರಿ 15, 2024ರ ನಡುವೆ ನೀಡಲಾದ ಬಾಂಡ್‌ಗಳ ಮಾಹಿತಿ ನೀಡುವ ಕುರಿತ ನಿರ್ದೇಶನ ಎಂದು ವ್ಯಾಖ್ಯಾನಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನೀಡಿದ ಡೇಟಾದ ಒಂದು ಭಾಗವು ಸಾರ್ವಜನಿಕಗೊಳಿಸಲಾಗಿದೆ, ಆದರೆ ಉಳಿದವು ಬಹಿರಂಗಗೊಳಿಸಲಾಗಿಲ್ಲ. ಚುನಾವಣಾ ಬಾಂಡ್‌ಗಳ ಸಂಪೂರ್ಣ ಡೇಟಾವನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂಕೋರ್ಟ್ ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂಕೋರ್ಟ್, ಎಸ್‌ಬಿಐ ನೀಡಿರುವ ಅಂಕಿ ಅಂಶಗಳು ಅಪೂರ್ಣ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಎಸ್‌ಬಿಐ ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...