Homeಮುಖಪುಟ4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

- Advertisement -
- Advertisement -

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿದೆ. ಆದರೆ ಎಸ್‌ಬಿಐ ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿಲ್ಲ ಎನ್ನವುದು ಆ ಬಳಿಕ ಬಹಿರಂಗವಾಗಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2018ರಿಂದ 16,518 ಕೋಟಿ ಮೌಲ್ಯದ 28,030 ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ, ಆದರೆ ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ಇದ್ದು, ಅದರ ಮೌಲ್ಯ 12,516 ಕೋಟಿ ರೂ.ಆಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ನೀಡಲಾಗಿಲ್ಲ.

4,002 ಕೋಟಿ ಮೌಲ್ಯದ 9,159 ಬಾಂಡ್‌ಗಳ ಮಾಹಿತಿಯನ್ನು ಏಕೆ ಬಹಿರಂಗಪಡಿಸಿಲ್ಲ?

ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಲೆಕ್ಕಾಚಾರದಲ್ಲಿ “ಮೇಲ್ವಿಚಾರಣೆ” ಮಾಡಿಡುತ್ತಿದೆ ಎಂದು ಹೇಳಿದೆ. ಉತ್ತರದ ಇನ್ನೊಂದು ಭಾಗವು ಇನ್ನೂ ಸಾರ್ವಜನಿಕಗೊಳಿಸದ “ಸೀಲ್‌ ಮಾಡಿದ ಕವರ್” ನಲ್ಲಿದೆ.

ಫೆಬ್ರವರಿ 15ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿತ್ತು. ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿತ್ತು.

ಮಾರ್ಚ್ 1, 2018ರಿಂದ, ಬ್ಯಾಂಕ್ 30 ಹಂತಗಳಲ್ಲಿ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಆದರೆ ಮಾರ್ಚ್ 4 ರಂದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲು ಅವಧಿ ವಿಸ್ತರಣೆಯನ್ನು ಕೋರಿ ನ್ಯಾಯಾಲಯದ ಮುಂದೆ ಸಲ್ಲಿಸಿದ ಮನವಿಯಲ್ಲಿ,  ಏಪ್ರಿಲ್ 2019ರಿಂದ 22 ಹಂತಗಳಲ್ಲಿ ಮಾರಾಟವಾದ ಬಾಂಡ್‌ಗಳನ್ನು ಮಾತ್ರ ಲೆಕ್ಕ ಹೇಳಿದೆ. ಅದರಲ್ಲಿ ಏಪ್ರಿಲ್ 12, 2019 ರಿಂದ ಫೆಬ್ರವರಿ 15, 2024ರ ನಡುವೆ ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಇಪ್ಪತ್ತೆರಡು ಸಾವಿರದ ಇನ್ನೂರ ಹದಿನೇಳು (22,217) ಚುನಾವಣಾ ಬಾಂಡ್‌ಗಳನ್ನು ಬಳಸಲಾಗಿದೆ ಎಂದು ಬ್ಯಾಂಕ್‌ ಹೇಳಿದೆ.

ಮಾರ್ಚ್ 12ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಏಪ್ರಿಲ್ 12, 2019 ಮತ್ತು ಫೆಬ್ರವರಿ 15, 2024 ರ ನಡುವೆ ವಾಸ್ತವವಾಗಿ ಕೇವಲ 18,871 ಬಾಂಡ್‌ಗಳನ್ನು ಮಾರಾಟ ಮಾಡಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಉಳಿದ 3,346 ಬಾಂಡ್‌ಗಳನ್ನು ಏಪ್ರಿಲ್ 1, 2019 ರಿಂದ ಏಪ್ರಿಲ್ 11, 2019ರ ನಡುವೆ  ಮಾರಾಟ ಮಾಡಲಾಗಿದೆ.

3,346 ಬಾಂಡ್‌ಗಳ ಬಗ್ಗೆ ಮಾಹಿತಿ ಏಕೆ ಬಿಡುಗಡೆ ಮಾಡಲಿಲ್ಲ?

ಅಫಿಡವಿಟ್‌ನಲ್ಲಿ, ಸುಪ್ರೀಂಕೋರ್ಟ್‌ನ ಫೆಬ್ರವರಿ 2024ರ ತೀರ್ಪನ್ನು ಉಲ್ಲೇಖಿಸಲಾಗಿದೆ. ಅದರಲ್ಲಿ  ನ್ಯಾಯಾಲಯ 12 ಏಪ್ರಿಲ್ 2019ರ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ECIಗೆ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಲು ಕೇಳಿದೆ.

2019ರ ಏಪ್ರಿಲ್ 12ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್, ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರಿದ್ದ ತ್ರಿಸದಸ್ಯ ಪೀಠವು ಮಧ್ಯಂತರ ಆದೇಶವನ್ನು ನೀಡಿದೆ.  ಚುನಾವಣಾ ಬಾಂಡ್‌ಗಳಿಗೆ  ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಮೇ 15ರ ಒಳಗೆ ಸಲ್ಲಿಸಲು  ಬ್ಯಾಂಕ್‌ಗೆ ತಿಳಿಸಲಾಗಿತ್ತು.

ಆದರೆ ಈಗಿನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಈಗಾಗಲೇ ಮುಚ್ಚಿದ ಕವರ್‌ನಲ್ಲಿ ಸಲ್ಲಿಸಿರುವ ಡೇಟಾವನ್ನು ಹೊರತುಪಡಿಸಿ ಇತರ ಡೇಟಾವನ್ನು ಬಿಡುಗಡೆ ಮಾಡುವಂತೆ ಎಸ್‌ಬಿಐಗೆ ನಿರ್ದೇಶಿಸಿದೆ. ಆದರೆ ಎಸ್‌ಬಿಐ ಇದನ್ನು ಏಪ್ರಿಲ್ 12, 2019ರಿಂದ ಫೆಬ್ರವರಿ 15, 2024ರ ನಡುವೆ ನೀಡಲಾದ ಬಾಂಡ್‌ಗಳ ಮಾಹಿತಿ ನೀಡುವ ಕುರಿತ ನಿರ್ದೇಶನ ಎಂದು ವ್ಯಾಖ್ಯಾನಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನೀಡಿದ ಡೇಟಾದ ಒಂದು ಭಾಗವು ಸಾರ್ವಜನಿಕಗೊಳಿಸಲಾಗಿದೆ, ಆದರೆ ಉಳಿದವು ಬಹಿರಂಗಗೊಳಿಸಲಾಗಿಲ್ಲ. ಚುನಾವಣಾ ಬಾಂಡ್‌ಗಳ ಸಂಪೂರ್ಣ ಡೇಟಾವನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂಕೋರ್ಟ್ ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂಕೋರ್ಟ್, ಎಸ್‌ಬಿಐ ನೀಡಿರುವ ಅಂಕಿ ಅಂಶಗಳು ಅಪೂರ್ಣ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಎಸ್‌ಬಿಐ ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...