Homeಮುಖಪುಟರಾಜಕೀಯ ಪಕ್ಷಗಳ ಹಣದ ಮೂಲ ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ ಸರ್ಕಾರ

ರಾಜಕೀಯ ಪಕ್ಷಗಳ ಹಣದ ಮೂಲ ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

”ರಾಜಕೀಯ ಪಕ್ಷಗಳು ಪಡೆಯುವ ಹಣದ ಮೂಲವನ್ನು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ” ಎಂದು ಕೇಂದ್ರ ಸರ್ಕಾರ ಭಾನುವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ “ಅಪಾರದರ್ಶಕ” ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡುವ ವಿಧಾನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಈ ವಾದ ಮಂಡಿಸಿದರು. ಈ ನಿಧಿಗಳ ಮೂಲವನ್ನು ತಿಳಿದುಕೊಳ್ಳುವ ಹಕ್ಕನ್ನು ಸಂವಿಧಾನ ನಾಗರಿಕರಿಗೆ ಮೂಲಭೂತ ಹಕ್ಕಾಗಿ ನೀಡಿಲ್ಲ ಎಂದು ಅವರು ಹೇಳಿದರು. ಚುನಾವಣಾ ಬಾಂಡ್‌ಗಳನ್ನು ನಿಯಂತ್ರಿಸುವ ಸಲುವಾಗಿ ನೀತಿ ರೂಪಿಸುವ ಕಾರ್ಯಕ್ಕೆ ಸುಪ್ರೀಂಕೋರ್ಟ್ ಮುಂದಾಗಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಚುನಾವಣಾ ಬಾಂಡ್‌ಗಳು ವಿತ್ತೀಯ ಸಾಧನವಾಗಿದ್ದು, ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಬ್ಯಾಂಕ್‌ನಿಂದ ಖರೀದಿಸಬಹುದು ಮತ್ತು ರಾಜಕೀಯ ಪಕ್ಷಕ್ಕೆ ನೀಡಬಹುದು, ನಂತರ ಇವುಗಳನ್ನು ಹಣಕ್ಕಾಗಿ ಪಡೆದುಕೊಳ್ಳಲು ಮುಕ್ತವಾಗಿರುತ್ತದೆ. ಈ ಬಡ್ಡಿ ರಹಿತ ಬಾಂಡ್‌ಗಳ ಖರೀದಿಯನ್ನು ಯಾರೂ ಘೋಷಿಸಬೇಕಾಗಿಲ್ಲ ಮತ್ತು ರಾಜಕೀಯ ಪಕ್ಷಗಳು ಹಣದ ಮೂಲವನ್ನು ತೋರಿಸುವ ಅಗತ್ಯವಿಲ್ಲದ ಕಾರಣ ಸಂಪೂರ್ಣ ಪ್ರಕ್ರಿಯೆಯು ಅನಾಮಧೇಯವಾಗಿದೆ. ಕೇಂದ್ರ ಬಿಜೆಪಿ ಸರ್ಕಾರವು ಜನವರಿ 2018ರಲ್ಲಿ ಈ ಯೋಜನೆಯನ್ನು ಪರಿಚಯಿಸಿತು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಮಂಗಳವಾರದಿಂದ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಲಿದೆ.

ಭಾನುವಾರದ ಅಟಾರ್ನಿ ಜನರಲ್ ಅವರು ತಮ್ಮ ಹೇಳಿಕೆಯಲ್ಲಿ, ”ಈ ಯೋಜನೆಯು ಯಾವುದೇ ವ್ಯಕ್ತಿಗಳ ಪ್ರಸ್ತುತ ಇರುವ ಹಕ್ಕನ್ನು ಉಲ್ಲಂಘಿಸುವುದಿಲ್ಲ. ಅಂತೆಯೇ ಸಂವಿಧಾನದ 3ನೇ ವಿಭಾಗದ ಅಡಿಯಲ್ಲಿ ನೀಡಿರುವ ಯಾವುದೇ ಹಕ್ಕುಗಳಿಗೆ ಅಸಂಗತ ಎನಿಸುವುದಿಲ್ಲ. ಆದ್ದರಿಂದ ಯೋಜನೆ ಕಾನೂನುಬಾಹಿರವಲ್ಲ ಅಸಂಗತ ಎನಿಸದ ಯಾವುದೇ ಕಾನೂನನ್ನು ಯಾವುದೇ ಕಾರಣಕ್ಕೆ ರದ್ದುಪಡಿಸುವಂತಿಲ್ಲ” ಎಂದು ಸ್ಪಷ್ಟಪಡಿಸಿದರು.

ಉತ್ತಮ ಅಥವಾ ಭಿನ್ನ ಸಲಹೆಗಳನ್ನು ನೀಡುವ ಉದ್ದೇಶಕ್ಕೆ ಸರ್ಕಾರದ ನೀತಿಗಳನ್ನು ನ್ಯಾಯಾಂಗ ಪರಾಮರ್ಶೆ ಮಾಡುವಂತಿಲ್ಲ ಎಂದು 2003ರಲ್ಲಿ ಪಿಯುಸಿಎಲ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿದರು.

ಈ ಚುನಾವಣಾ ಬಾಂಡ್ ಯೋಜನೆಯು ದೇಣಿಗೆ ನೀಡಿದ ಸಂಸ್ಥೆಗೆ ಗೌಪ್ಯತೆಯ ಪ್ರಯೋಜನವನ್ನು ನೀಡುತ್ತದೆ. ಸ್ವಚ್ಛ ಹಣ ದೇಣಿಗೆಯಾಗಿ ನೀಡುವಂತೆ ಇದು ಉತ್ತೇಜಿಸುತ್ತದೆ ಹಾಗೂ ಇದನ್ನು ಖಾತರಿಪಡಿಸುತ್ತದೆ. ಎಲ್ಲ ತೆರಿಗೆ ಹೊಣೆಗಾರಿಕೆಗಳಿಗೆ ಬದ್ಧವಾಗಿದೆ. ಆದ್ದರಿಂದ ಹಾಲಿ ಇರುವ ಯಾವುದೇ ಹಕ್ಕುಗಳಿಗೆ ವಿರುದ್ಧ ಎನಿಸುವುದಿಲ್ಲ’ ಎಂದರು.

ಚುನಾವಣಾ ಬಾಂಡ್‌ಗಳ ಯೋಜನೆಯು ನಾಗರಿಕರ ಹಕ್ಕುಗಳ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಆದ್ದರಿಂದ ನ್ಯಾಯಾಲಯವು ನೀತಿ ಡೊಮೇನ್‌ನಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಟಾರ್ನಿ ಜನರಲ್ ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಅಮಿತ್‌ ಶಾ ಭೇಟಿ ಬೆನ್ನಲ್ಲೆ ಬಿಜೆಪಿಗೆ ಇಬ್ಬರು ಹಿರಿಯ ನಾಯಕರು ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...