Homeಮುಖಪುಟರಾಜಕೀಯ ಪಕ್ಷಗಳ ಹಣದ ಮೂಲ ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ ಸರ್ಕಾರ

ರಾಜಕೀಯ ಪಕ್ಷಗಳ ಹಣದ ಮೂಲ ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

”ರಾಜಕೀಯ ಪಕ್ಷಗಳು ಪಡೆಯುವ ಹಣದ ಮೂಲವನ್ನು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ” ಎಂದು ಕೇಂದ್ರ ಸರ್ಕಾರ ಭಾನುವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ “ಅಪಾರದರ್ಶಕ” ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡುವ ವಿಧಾನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಈ ವಾದ ಮಂಡಿಸಿದರು. ಈ ನಿಧಿಗಳ ಮೂಲವನ್ನು ತಿಳಿದುಕೊಳ್ಳುವ ಹಕ್ಕನ್ನು ಸಂವಿಧಾನ ನಾಗರಿಕರಿಗೆ ಮೂಲಭೂತ ಹಕ್ಕಾಗಿ ನೀಡಿಲ್ಲ ಎಂದು ಅವರು ಹೇಳಿದರು. ಚುನಾವಣಾ ಬಾಂಡ್‌ಗಳನ್ನು ನಿಯಂತ್ರಿಸುವ ಸಲುವಾಗಿ ನೀತಿ ರೂಪಿಸುವ ಕಾರ್ಯಕ್ಕೆ ಸುಪ್ರೀಂಕೋರ್ಟ್ ಮುಂದಾಗಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಚುನಾವಣಾ ಬಾಂಡ್‌ಗಳು ವಿತ್ತೀಯ ಸಾಧನವಾಗಿದ್ದು, ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಬ್ಯಾಂಕ್‌ನಿಂದ ಖರೀದಿಸಬಹುದು ಮತ್ತು ರಾಜಕೀಯ ಪಕ್ಷಕ್ಕೆ ನೀಡಬಹುದು, ನಂತರ ಇವುಗಳನ್ನು ಹಣಕ್ಕಾಗಿ ಪಡೆದುಕೊಳ್ಳಲು ಮುಕ್ತವಾಗಿರುತ್ತದೆ. ಈ ಬಡ್ಡಿ ರಹಿತ ಬಾಂಡ್‌ಗಳ ಖರೀದಿಯನ್ನು ಯಾರೂ ಘೋಷಿಸಬೇಕಾಗಿಲ್ಲ ಮತ್ತು ರಾಜಕೀಯ ಪಕ್ಷಗಳು ಹಣದ ಮೂಲವನ್ನು ತೋರಿಸುವ ಅಗತ್ಯವಿಲ್ಲದ ಕಾರಣ ಸಂಪೂರ್ಣ ಪ್ರಕ್ರಿಯೆಯು ಅನಾಮಧೇಯವಾಗಿದೆ. ಕೇಂದ್ರ ಬಿಜೆಪಿ ಸರ್ಕಾರವು ಜನವರಿ 2018ರಲ್ಲಿ ಈ ಯೋಜನೆಯನ್ನು ಪರಿಚಯಿಸಿತು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಮಂಗಳವಾರದಿಂದ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಲಿದೆ.

ಭಾನುವಾರದ ಅಟಾರ್ನಿ ಜನರಲ್ ಅವರು ತಮ್ಮ ಹೇಳಿಕೆಯಲ್ಲಿ, ”ಈ ಯೋಜನೆಯು ಯಾವುದೇ ವ್ಯಕ್ತಿಗಳ ಪ್ರಸ್ತುತ ಇರುವ ಹಕ್ಕನ್ನು ಉಲ್ಲಂಘಿಸುವುದಿಲ್ಲ. ಅಂತೆಯೇ ಸಂವಿಧಾನದ 3ನೇ ವಿಭಾಗದ ಅಡಿಯಲ್ಲಿ ನೀಡಿರುವ ಯಾವುದೇ ಹಕ್ಕುಗಳಿಗೆ ಅಸಂಗತ ಎನಿಸುವುದಿಲ್ಲ. ಆದ್ದರಿಂದ ಯೋಜನೆ ಕಾನೂನುಬಾಹಿರವಲ್ಲ ಅಸಂಗತ ಎನಿಸದ ಯಾವುದೇ ಕಾನೂನನ್ನು ಯಾವುದೇ ಕಾರಣಕ್ಕೆ ರದ್ದುಪಡಿಸುವಂತಿಲ್ಲ” ಎಂದು ಸ್ಪಷ್ಟಪಡಿಸಿದರು.

ಉತ್ತಮ ಅಥವಾ ಭಿನ್ನ ಸಲಹೆಗಳನ್ನು ನೀಡುವ ಉದ್ದೇಶಕ್ಕೆ ಸರ್ಕಾರದ ನೀತಿಗಳನ್ನು ನ್ಯಾಯಾಂಗ ಪರಾಮರ್ಶೆ ಮಾಡುವಂತಿಲ್ಲ ಎಂದು 2003ರಲ್ಲಿ ಪಿಯುಸಿಎಲ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿದರು.

ಈ ಚುನಾವಣಾ ಬಾಂಡ್ ಯೋಜನೆಯು ದೇಣಿಗೆ ನೀಡಿದ ಸಂಸ್ಥೆಗೆ ಗೌಪ್ಯತೆಯ ಪ್ರಯೋಜನವನ್ನು ನೀಡುತ್ತದೆ. ಸ್ವಚ್ಛ ಹಣ ದೇಣಿಗೆಯಾಗಿ ನೀಡುವಂತೆ ಇದು ಉತ್ತೇಜಿಸುತ್ತದೆ ಹಾಗೂ ಇದನ್ನು ಖಾತರಿಪಡಿಸುತ್ತದೆ. ಎಲ್ಲ ತೆರಿಗೆ ಹೊಣೆಗಾರಿಕೆಗಳಿಗೆ ಬದ್ಧವಾಗಿದೆ. ಆದ್ದರಿಂದ ಹಾಲಿ ಇರುವ ಯಾವುದೇ ಹಕ್ಕುಗಳಿಗೆ ವಿರುದ್ಧ ಎನಿಸುವುದಿಲ್ಲ’ ಎಂದರು.

ಚುನಾವಣಾ ಬಾಂಡ್‌ಗಳ ಯೋಜನೆಯು ನಾಗರಿಕರ ಹಕ್ಕುಗಳ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಆದ್ದರಿಂದ ನ್ಯಾಯಾಲಯವು ನೀತಿ ಡೊಮೇನ್‌ನಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಟಾರ್ನಿ ಜನರಲ್ ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಅಮಿತ್‌ ಶಾ ಭೇಟಿ ಬೆನ್ನಲ್ಲೆ ಬಿಜೆಪಿಗೆ ಇಬ್ಬರು ಹಿರಿಯ ನಾಯಕರು ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...