Homeಮುಖಪುಟಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಬಹು ನಿರೀಕ್ಷಿತ ಚುನಾವಣಾ ಬಾಂಡ್ ಮಾಹಿತಿಯನ್ನು ಸುಪ್ರೀಂ ಕೋರ್ಟ್ ನೀಡಿದ ಗಡುವಿಗಿಂತ ಒಂದು ದಿನ ಮೊದಲೇ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ಮಾಹಿತಿಯನ್ನು ಮಾರ್ಚ್ 15ರಂದು ಸಂಜೆ 5ಗಂಟೆಯೊಳಗೆ ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ, ಆಯೋಗ ಮಾರ್ಚ್‌ 14ರಂದು ಸಂಜೆಯೇ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ.

426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಚುನಾವಣಾ ಬಾಂಡ್‌ಗಳ ಅಂಕಿಅಂಶಗಳ ವಿವರ ನೋಡಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಪ್ರಮುಖ 10 ಕಂಪನಿಗಳು :

1.ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸಸ್ ಲಿಮಿಟೆಡ್:
ಸ್ಯಾಂಟಿಯಾಗೊ ಮಾರ್ಟಿನ್ ಒಡೆತನದ ಲಾಟರಿ ಕಂಪನಿಯಾಗಿರುವ ಇದು, ಬರೋಬ್ಬರಿ 1,368 ಕೋಟಿ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕಂಪನಿ ಮತ್ತು ಅದರ ಸ್ಥಾಪಕ ಮಾರ್ಟಿನ್ ಈ ಹಿಂದೆ ಇಡಿ ವಿಚಾರಣೆಗೆ ಒಳಗಾಗಿದ್ದರು ಮತ್ತು ಸಿಬಿಐಯ ದೋಷಾರೋಪ ಪಟ್ಟಿಯಲ್ಲಿ ಕಂಪನಿ ಮತ್ತು ಮಾಲೀಕ ಮಾರ್ಟಿನ್ ಹೆಸರಿದೆ.

ಕಳೆದ ವರ್ಷ ಇಡಿ 450 ಕೋಟಿ ರೂಪಾಯಿ ಮೌಲ್ಯದ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಂಡಿತ್ತು. ಕಳೆದ ವಾರವಷ್ಟೇ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾರ್ಟಿನ್ ಅವರ ಅಳಿಯನ ಮನೆಯಲ್ಲಿ ಇಡಿ ಶೋಧ ನಡೆಸಿತ್ತು.

ಕೊಯಂಬತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಕಂಪನಿ, ಸಿಕ್ಕಿಂ ಮತ್ತು ನಾಗಾಲ್ಯಾಂಡ್‌ನಲ್ಲಿ ಪೇಪರ್ ಲಾಟರಿಯ ಏಕೈಕ ವಿತರಕ ಸಂಸ್ಥೆಯಾಗಿದೆ. ಇದರ ಬಾಂಡ್‌ಗಳನ್ನು ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸ್ ಪಿಆರ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಎಂದು ಚು. ಆಯೋಗದ ಡೇಟಾದಲ್ಲಿ ಪಟ್ಟಿ ಮಾಡಲಾಗಿದೆ.

2. ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ :
ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಪಿಪಿ ರೆಡ್ಡಿ ಎಂಬವರ ಒಡೆತನದ ಕಂಪನಿ ಇದಾಗಿದ್ದು, ಈ ಪಿಪಿ ರೆಡ್ಡಿ ತೆಲಂಗಾಣದ ಮಾಜಿ ಸಿಎಂ ಕೆಸಿಅರ್ ಅವರಿಗೆ ಆಪ್ತ ಎನ್ನಲಾಗಿದೆ. ತೆಲಂಗಾಣಲ್ಲಿ ಬಿಆರ್ ಎಸ್ ಸರ್ಕಾರದ ಅವಧಿಯಲ್ಲಿ 1.47 ಲಕ್ಷ ಕೋಟಿ ಮೊತ್ತದ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಮಾಡಿದ್ದು ಇದೇ ಮೇಘಾ ಇಂಜಿನಿಯರಿಂಗ್ ಕಂಪನಿ ಎನ್ನುವುದು ಇಲ್ಲಿ ಗಮನಾರ್ಹ.

3.ಕ್ವಿಕ್ ಸಪ್ಲೈ ಚೈನ್ ಪ್ರೈ.ಲಿಮಿಟೆಡ್:
ಈ ಕಂಪನಿ 410 ಕೋಟಿ ರೂ ದೇಣಿಗೆಯನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ‌. ಈ ಕಂಪನಿಯ ನಿರ್ದೇಶಕರಲ್ಲಿ ಒಬ್ಬರು ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್‌ನ ನಿರ್ದೇಶಕರೂ ಹೌದು. ಕೆಲ ವರದಿಗಳ ಪ್ರಕಾರ, ರಿಲಯನ್ಸ್ ಕಂಪನಿ ಕ್ವಿಕ್ ಸಪ್ಲೈ ಹೆಸರಿನಲ್ಲಿ ದೇಣಿಗೆ ನೀಡಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿಯಿಲ್ಲ.

4. ವೇದಾಂತ ಲಿಮಿಟೆಡ್:
ರೂ. 399 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿರುವ ಈ ಕಂಪನಿ ವಿರುದ್ದ ಸಾಲದ ಆರೋಪ ಮತ್ತು ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಆರೋಪಗಳಿವೆ. ಗಣಿಗಾರಿಕೆ ದೈತ್ಯ ವೇದಾಂತ ಲಿಮಿಟೆಡ್ ಉದ್ಯಮಿ ಅನಿಲ್ ಅಗರ್ವಾಲ್ ಸ್ಥಾಪಿಸಿದ ಕಂಪನಿಯಾಗಿದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ.

5. ಹಲ್ದಿಯಾ ಎನರ್ಜಿ ಲಿಮಿಟೆಡ್ :
ಈ ಕಂಪನಿ ರೂ. 375 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. 1994 ರಲ್ಲಿ ಸ್ಥಾಪಿಯವಾದ ಈ ಕಂಪನಿ ಆರ್‌ಪಿ-ಸಂಜೀವ್ ಗೋಯೆಂಕಾ ಗ್ರೂಪ್‌ನ ಭಾಗವಾದ ಸಿಇಎಸ್‌ಸಿ ಲಿಮಿಟೆಡ್‌ನ ಒಡೆತನದಲ್ಲಿದೆ. ಇದು ಕೋಲ್ಕತ್ತಾ ನಗರ ಮತ್ತು ಅದರ ಉಪನಗರಗಳ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಉಷ್ಣ ವಿದ್ಯುತ್ ಸ್ಥಾವರವನ್ನು ನಿರ್ವಹಿಸುತ್ತದೆ.

6. ಎಸ್ಸೆಲ್ ಮೈನಿಂಗ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್:
ಈ ಕಂಪನಿ 224.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಈ ಕಂಪನಿ ದೇಶದ ಅತಿದೊಡ್ಡ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿಗಳಲ್ಲಿ ಒಂದಾಗಿದೆ ಮತ್ತು ನೋಬೆಲ್ ಫೆರೋ ಮಿಶ್ರಲೋಹಗಳ ಉತ್ಪಾದಕರಲ್ಲಿ ಒಂದಾಗಿದೆ.

2022 ರಲ್ಲಿ, ಕಂಪನಿಯು ಸಾಂಚಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಬಕ್ಸ್ವಾಹಾ ಅರಣ್ಯದಲ್ಲಿ ತನ್ನ ಗಣಿಗಾರಿಕೆ ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಿದಾಗ ಹಿಂಸಾಚಾರದ ಬೆದರಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಮಧ್ಯಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿತ್ತು. 2014 ರಲ್ಲಿ, ಒಡಿಶಾದಲ್ಲಿ ಗಣಿಗಾರಿಕೆ ನಿಯಮ ಉಲ್ಲಂಘನೆಯ ಆರೋಪದ ತನಿಖೆಗೆ ನಿಯೋಜಿಸಲಾದ ತಜ್ಞರ ಸಮಿತಿಯು, ಎಸ್ಸೆಲ್ ಮೈನಿಂಗ್ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ನಡೆಸಿದೆ ಎಂದು ಹೇಳಿತ್ತು.

7. ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್‌ಮಿಷನ್ ಕಂಪನಿ ಲಿಮಿಟೆಡ್:
ಈ ಕಂಪನಿ ಮೇಲೆ ಮೇಘಾ ಗ್ರೂಪ್ ಷೇರುದಾರರ ನಿಯಂತ್ರಣ ಇದೆ. ಇದು ರೂ 220 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಮೇಘಾ ಇಂಜಿನಿಯರಿಂಗ್ ಮತ್ತು ಇದು ಜಂಟಿಯಾಗಿ 1,186 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

8. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್:
ಇದು 2019 ರಿಂದ 195 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಕೋಲ್ಕತ್ತಾ ಮೂಲದ ಈ ಕಂಪನಿ ಆಹಾರ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ನಡೆಸುತ್ತಿದೆ.

9.ಎಂಕೆಜಿ ಎಂಟರ್‌ಪ್ರೈಸಸ್ ಲಿಮಿಟೆಡ್:
ಕೋಲ್ಕತ್ತಾದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಈ ಕಂಪನಿ ಉಕ್ಕಿನ ವ್ಯವಹಾರ ನಡೆಸುತ್ತದೆ. ಇದು 180 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀಸಿದೆ. ಇದರ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಮಹೇಂದ್ರ ಕುಮಾರ್ ಜಲನ್ ಕೆಲವು ಕೆವೆಂಟರ್ ಕಂಪನಿಗಳ ನಿರ್ದೇಶಕರೂ ಆಗಿದ್ದಾರೆ. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ ಜೊತೆ ಇದು ಉತ್ತಮ ಸಂಬಂಧ ಹೊಂದಿದೆ.

10. ಮದನ್‌ಲಾಲ್ ಲಿಮಿಟೆಡ್: 
ಈ ಕಂಪನಿ 185.5 ಕೋಟಿ ರೂ.ಗಳ ಬಾಂಡ್‌ಗಳನ್ನು ಖರೀದಿಸಿದೆ. ಕಂಪನಿಯು ಎಂಕೆಜೆ ಗ್ರೂಪ್ ಮತ್ತು ಕೆವೆಂಟರ್ ಗ್ರೂಪ್ ಕಂಪನಿಗಳ ಭಾಗವಾಗಿದೆ. ಈ ಕಂಪನಿಯು ಸೆಕ್ಯುರಿಟೀಸ್ ಮತ್ತು ರಿಯಲ್ ಎಸ್ಟೇಟ್ ವಲಯದ ಖರೀದಿ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದೆ.

ಸುಪ್ರೀಂ ಆದೇಶದಲ್ಲಿ ಮಾರ್ಪಾಡು ಕೋರಿ ಚು.ಆಯೋಗ ಅರ್ಜಿ:

ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ನೀಡಿರುವ ಆದೇಶದಲ್ಲಿ ಮಾರ್ಪಾಡು ಕೋರಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಇಂದು (ಮಾರ್ಚ್ 15, ಶುಕ್ರವಾರ) ನಡೆಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗದೆ. ಈ ದಾಖಲೆಗಳ ಪ್ರತಿಗಳನ್ನು ತಾನು ಕಾದಿಟ್ಟುಕೊಂಡಿಲ್ಲ. ಹೀಗಾಗಿ, ಪ್ರಕರಣದ ಕುರಿತ ದಾಖಲೆಗಳನ್ನು ತನಗೆ ಮರಳಿಸಿದರೆ ಕೋರ್ಟ್ ನಿರ್ದೇಶನ ಪಾಲನೆ ಮಾಡಲು ಸಾಧ್ಯವಾಗಲಿದೆ ಎಂದು ಚುನಾವಣಾ ಆಯೋಗ ಕೋರಿದೆ.

ಇದನ್ನೂ ಓದಿ: ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...