Homeಮುಖಪುಟಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಬಹು ನಿರೀಕ್ಷಿತ ಚುನಾವಣಾ ಬಾಂಡ್ ಮಾಹಿತಿಯನ್ನು ಸುಪ್ರೀಂ ಕೋರ್ಟ್ ನೀಡಿದ ಗಡುವಿಗಿಂತ ಒಂದು ದಿನ ಮೊದಲೇ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ಮಾಹಿತಿಯನ್ನು ಮಾರ್ಚ್ 15ರಂದು ಸಂಜೆ 5ಗಂಟೆಯೊಳಗೆ ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ, ಆಯೋಗ ಮಾರ್ಚ್‌ 14ರಂದು ಸಂಜೆಯೇ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ.

426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಚುನಾವಣಾ ಬಾಂಡ್‌ಗಳ ಅಂಕಿಅಂಶಗಳ ವಿವರ ನೋಡಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಪ್ರಮುಖ 10 ಕಂಪನಿಗಳು :

1.ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸಸ್ ಲಿಮಿಟೆಡ್:
ಸ್ಯಾಂಟಿಯಾಗೊ ಮಾರ್ಟಿನ್ ಒಡೆತನದ ಲಾಟರಿ ಕಂಪನಿಯಾಗಿರುವ ಇದು, ಬರೋಬ್ಬರಿ 1,368 ಕೋಟಿ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕಂಪನಿ ಮತ್ತು ಅದರ ಸ್ಥಾಪಕ ಮಾರ್ಟಿನ್ ಈ ಹಿಂದೆ ಇಡಿ ವಿಚಾರಣೆಗೆ ಒಳಗಾಗಿದ್ದರು ಮತ್ತು ಸಿಬಿಐಯ ದೋಷಾರೋಪ ಪಟ್ಟಿಯಲ್ಲಿ ಕಂಪನಿ ಮತ್ತು ಮಾಲೀಕ ಮಾರ್ಟಿನ್ ಹೆಸರಿದೆ.

ಕಳೆದ ವರ್ಷ ಇಡಿ 450 ಕೋಟಿ ರೂಪಾಯಿ ಮೌಲ್ಯದ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಂಡಿತ್ತು. ಕಳೆದ ವಾರವಷ್ಟೇ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾರ್ಟಿನ್ ಅವರ ಅಳಿಯನ ಮನೆಯಲ್ಲಿ ಇಡಿ ಶೋಧ ನಡೆಸಿತ್ತು.

ಕೊಯಂಬತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಕಂಪನಿ, ಸಿಕ್ಕಿಂ ಮತ್ತು ನಾಗಾಲ್ಯಾಂಡ್‌ನಲ್ಲಿ ಪೇಪರ್ ಲಾಟರಿಯ ಏಕೈಕ ವಿತರಕ ಸಂಸ್ಥೆಯಾಗಿದೆ. ಇದರ ಬಾಂಡ್‌ಗಳನ್ನು ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸ್ ಪಿಆರ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಎಂದು ಚು. ಆಯೋಗದ ಡೇಟಾದಲ್ಲಿ ಪಟ್ಟಿ ಮಾಡಲಾಗಿದೆ.

2. ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ :
ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಪಿಪಿ ರೆಡ್ಡಿ ಎಂಬವರ ಒಡೆತನದ ಕಂಪನಿ ಇದಾಗಿದ್ದು, ಈ ಪಿಪಿ ರೆಡ್ಡಿ ತೆಲಂಗಾಣದ ಮಾಜಿ ಸಿಎಂ ಕೆಸಿಅರ್ ಅವರಿಗೆ ಆಪ್ತ ಎನ್ನಲಾಗಿದೆ. ತೆಲಂಗಾಣಲ್ಲಿ ಬಿಆರ್ ಎಸ್ ಸರ್ಕಾರದ ಅವಧಿಯಲ್ಲಿ 1.47 ಲಕ್ಷ ಕೋಟಿ ಮೊತ್ತದ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಮಾಡಿದ್ದು ಇದೇ ಮೇಘಾ ಇಂಜಿನಿಯರಿಂಗ್ ಕಂಪನಿ ಎನ್ನುವುದು ಇಲ್ಲಿ ಗಮನಾರ್ಹ.

3.ಕ್ವಿಕ್ ಸಪ್ಲೈ ಚೈನ್ ಪ್ರೈ.ಲಿಮಿಟೆಡ್:
ಈ ಕಂಪನಿ 410 ಕೋಟಿ ರೂ ದೇಣಿಗೆಯನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ‌. ಈ ಕಂಪನಿಯ ನಿರ್ದೇಶಕರಲ್ಲಿ ಒಬ್ಬರು ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್‌ನ ನಿರ್ದೇಶಕರೂ ಹೌದು. ಕೆಲ ವರದಿಗಳ ಪ್ರಕಾರ, ರಿಲಯನ್ಸ್ ಕಂಪನಿ ಕ್ವಿಕ್ ಸಪ್ಲೈ ಹೆಸರಿನಲ್ಲಿ ದೇಣಿಗೆ ನೀಡಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿಯಿಲ್ಲ.

4. ವೇದಾಂತ ಲಿಮಿಟೆಡ್:
ರೂ. 399 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿರುವ ಈ ಕಂಪನಿ ವಿರುದ್ದ ಸಾಲದ ಆರೋಪ ಮತ್ತು ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಆರೋಪಗಳಿವೆ. ಗಣಿಗಾರಿಕೆ ದೈತ್ಯ ವೇದಾಂತ ಲಿಮಿಟೆಡ್ ಉದ್ಯಮಿ ಅನಿಲ್ ಅಗರ್ವಾಲ್ ಸ್ಥಾಪಿಸಿದ ಕಂಪನಿಯಾಗಿದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ.

5. ಹಲ್ದಿಯಾ ಎನರ್ಜಿ ಲಿಮಿಟೆಡ್ :
ಈ ಕಂಪನಿ ರೂ. 375 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. 1994 ರಲ್ಲಿ ಸ್ಥಾಪಿಯವಾದ ಈ ಕಂಪನಿ ಆರ್‌ಪಿ-ಸಂಜೀವ್ ಗೋಯೆಂಕಾ ಗ್ರೂಪ್‌ನ ಭಾಗವಾದ ಸಿಇಎಸ್‌ಸಿ ಲಿಮಿಟೆಡ್‌ನ ಒಡೆತನದಲ್ಲಿದೆ. ಇದು ಕೋಲ್ಕತ್ತಾ ನಗರ ಮತ್ತು ಅದರ ಉಪನಗರಗಳ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಉಷ್ಣ ವಿದ್ಯುತ್ ಸ್ಥಾವರವನ್ನು ನಿರ್ವಹಿಸುತ್ತದೆ.

6. ಎಸ್ಸೆಲ್ ಮೈನಿಂಗ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್:
ಈ ಕಂಪನಿ 224.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಈ ಕಂಪನಿ ದೇಶದ ಅತಿದೊಡ್ಡ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿಗಳಲ್ಲಿ ಒಂದಾಗಿದೆ ಮತ್ತು ನೋಬೆಲ್ ಫೆರೋ ಮಿಶ್ರಲೋಹಗಳ ಉತ್ಪಾದಕರಲ್ಲಿ ಒಂದಾಗಿದೆ.

2022 ರಲ್ಲಿ, ಕಂಪನಿಯು ಸಾಂಚಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಬಕ್ಸ್ವಾಹಾ ಅರಣ್ಯದಲ್ಲಿ ತನ್ನ ಗಣಿಗಾರಿಕೆ ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಿದಾಗ ಹಿಂಸಾಚಾರದ ಬೆದರಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಮಧ್ಯಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿತ್ತು. 2014 ರಲ್ಲಿ, ಒಡಿಶಾದಲ್ಲಿ ಗಣಿಗಾರಿಕೆ ನಿಯಮ ಉಲ್ಲಂಘನೆಯ ಆರೋಪದ ತನಿಖೆಗೆ ನಿಯೋಜಿಸಲಾದ ತಜ್ಞರ ಸಮಿತಿಯು, ಎಸ್ಸೆಲ್ ಮೈನಿಂಗ್ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ನಡೆಸಿದೆ ಎಂದು ಹೇಳಿತ್ತು.

7. ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್‌ಮಿಷನ್ ಕಂಪನಿ ಲಿಮಿಟೆಡ್:
ಈ ಕಂಪನಿ ಮೇಲೆ ಮೇಘಾ ಗ್ರೂಪ್ ಷೇರುದಾರರ ನಿಯಂತ್ರಣ ಇದೆ. ಇದು ರೂ 220 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಮೇಘಾ ಇಂಜಿನಿಯರಿಂಗ್ ಮತ್ತು ಇದು ಜಂಟಿಯಾಗಿ 1,186 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

8. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್:
ಇದು 2019 ರಿಂದ 195 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಕೋಲ್ಕತ್ತಾ ಮೂಲದ ಈ ಕಂಪನಿ ಆಹಾರ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ನಡೆಸುತ್ತಿದೆ.

9.ಎಂಕೆಜಿ ಎಂಟರ್‌ಪ್ರೈಸಸ್ ಲಿಮಿಟೆಡ್:
ಕೋಲ್ಕತ್ತಾದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಈ ಕಂಪನಿ ಉಕ್ಕಿನ ವ್ಯವಹಾರ ನಡೆಸುತ್ತದೆ. ಇದು 180 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀಸಿದೆ. ಇದರ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಮಹೇಂದ್ರ ಕುಮಾರ್ ಜಲನ್ ಕೆಲವು ಕೆವೆಂಟರ್ ಕಂಪನಿಗಳ ನಿರ್ದೇಶಕರೂ ಆಗಿದ್ದಾರೆ. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ ಜೊತೆ ಇದು ಉತ್ತಮ ಸಂಬಂಧ ಹೊಂದಿದೆ.

10. ಮದನ್‌ಲಾಲ್ ಲಿಮಿಟೆಡ್: 
ಈ ಕಂಪನಿ 185.5 ಕೋಟಿ ರೂ.ಗಳ ಬಾಂಡ್‌ಗಳನ್ನು ಖರೀದಿಸಿದೆ. ಕಂಪನಿಯು ಎಂಕೆಜೆ ಗ್ರೂಪ್ ಮತ್ತು ಕೆವೆಂಟರ್ ಗ್ರೂಪ್ ಕಂಪನಿಗಳ ಭಾಗವಾಗಿದೆ. ಈ ಕಂಪನಿಯು ಸೆಕ್ಯುರಿಟೀಸ್ ಮತ್ತು ರಿಯಲ್ ಎಸ್ಟೇಟ್ ವಲಯದ ಖರೀದಿ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದೆ.

ಸುಪ್ರೀಂ ಆದೇಶದಲ್ಲಿ ಮಾರ್ಪಾಡು ಕೋರಿ ಚು.ಆಯೋಗ ಅರ್ಜಿ:

ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ನೀಡಿರುವ ಆದೇಶದಲ್ಲಿ ಮಾರ್ಪಾಡು ಕೋರಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಇಂದು (ಮಾರ್ಚ್ 15, ಶುಕ್ರವಾರ) ನಡೆಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗದೆ. ಈ ದಾಖಲೆಗಳ ಪ್ರತಿಗಳನ್ನು ತಾನು ಕಾದಿಟ್ಟುಕೊಂಡಿಲ್ಲ. ಹೀಗಾಗಿ, ಪ್ರಕರಣದ ಕುರಿತ ದಾಖಲೆಗಳನ್ನು ತನಗೆ ಮರಳಿಸಿದರೆ ಕೋರ್ಟ್ ನಿರ್ದೇಶನ ಪಾಲನೆ ಮಾಡಲು ಸಾಧ್ಯವಾಗಲಿದೆ ಎಂದು ಚುನಾವಣಾ ಆಯೋಗ ಕೋರಿದೆ.

ಇದನ್ನೂ ಓದಿ: ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...