Homeಮುಖಪುಟಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಬಹು ನಿರೀಕ್ಷಿತ ಚುನಾವಣಾ ಬಾಂಡ್ ಮಾಹಿತಿಯನ್ನು ಸುಪ್ರೀಂ ಕೋರ್ಟ್ ನೀಡಿದ ಗಡುವಿಗಿಂತ ಒಂದು ದಿನ ಮೊದಲೇ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ಮಾಹಿತಿಯನ್ನು ಮಾರ್ಚ್ 15ರಂದು ಸಂಜೆ 5ಗಂಟೆಯೊಳಗೆ ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ, ಆಯೋಗ ಮಾರ್ಚ್‌ 14ರಂದು ಸಂಜೆಯೇ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ.

426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಚುನಾವಣಾ ಬಾಂಡ್‌ಗಳ ಅಂಕಿಅಂಶಗಳ ವಿವರ ನೋಡಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಪ್ರಮುಖ 10 ಕಂಪನಿಗಳು :

1.ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸಸ್ ಲಿಮಿಟೆಡ್:
ಸ್ಯಾಂಟಿಯಾಗೊ ಮಾರ್ಟಿನ್ ಒಡೆತನದ ಲಾಟರಿ ಕಂಪನಿಯಾಗಿರುವ ಇದು, ಬರೋಬ್ಬರಿ 1,368 ಕೋಟಿ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕಂಪನಿ ಮತ್ತು ಅದರ ಸ್ಥಾಪಕ ಮಾರ್ಟಿನ್ ಈ ಹಿಂದೆ ಇಡಿ ವಿಚಾರಣೆಗೆ ಒಳಗಾಗಿದ್ದರು ಮತ್ತು ಸಿಬಿಐಯ ದೋಷಾರೋಪ ಪಟ್ಟಿಯಲ್ಲಿ ಕಂಪನಿ ಮತ್ತು ಮಾಲೀಕ ಮಾರ್ಟಿನ್ ಹೆಸರಿದೆ.

ಕಳೆದ ವರ್ಷ ಇಡಿ 450 ಕೋಟಿ ರೂಪಾಯಿ ಮೌಲ್ಯದ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಂಡಿತ್ತು. ಕಳೆದ ವಾರವಷ್ಟೇ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾರ್ಟಿನ್ ಅವರ ಅಳಿಯನ ಮನೆಯಲ್ಲಿ ಇಡಿ ಶೋಧ ನಡೆಸಿತ್ತು.

ಕೊಯಂಬತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಕಂಪನಿ, ಸಿಕ್ಕಿಂ ಮತ್ತು ನಾಗಾಲ್ಯಾಂಡ್‌ನಲ್ಲಿ ಪೇಪರ್ ಲಾಟರಿಯ ಏಕೈಕ ವಿತರಕ ಸಂಸ್ಥೆಯಾಗಿದೆ. ಇದರ ಬಾಂಡ್‌ಗಳನ್ನು ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸ್ ಪಿಆರ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಎಂದು ಚು. ಆಯೋಗದ ಡೇಟಾದಲ್ಲಿ ಪಟ್ಟಿ ಮಾಡಲಾಗಿದೆ.

2. ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ :
ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಪಿಪಿ ರೆಡ್ಡಿ ಎಂಬವರ ಒಡೆತನದ ಕಂಪನಿ ಇದಾಗಿದ್ದು, ಈ ಪಿಪಿ ರೆಡ್ಡಿ ತೆಲಂಗಾಣದ ಮಾಜಿ ಸಿಎಂ ಕೆಸಿಅರ್ ಅವರಿಗೆ ಆಪ್ತ ಎನ್ನಲಾಗಿದೆ. ತೆಲಂಗಾಣಲ್ಲಿ ಬಿಆರ್ ಎಸ್ ಸರ್ಕಾರದ ಅವಧಿಯಲ್ಲಿ 1.47 ಲಕ್ಷ ಕೋಟಿ ಮೊತ್ತದ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಮಾಡಿದ್ದು ಇದೇ ಮೇಘಾ ಇಂಜಿನಿಯರಿಂಗ್ ಕಂಪನಿ ಎನ್ನುವುದು ಇಲ್ಲಿ ಗಮನಾರ್ಹ.

3.ಕ್ವಿಕ್ ಸಪ್ಲೈ ಚೈನ್ ಪ್ರೈ.ಲಿಮಿಟೆಡ್:
ಈ ಕಂಪನಿ 410 ಕೋಟಿ ರೂ ದೇಣಿಗೆಯನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ‌. ಈ ಕಂಪನಿಯ ನಿರ್ದೇಶಕರಲ್ಲಿ ಒಬ್ಬರು ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್‌ನ ನಿರ್ದೇಶಕರೂ ಹೌದು. ಕೆಲ ವರದಿಗಳ ಪ್ರಕಾರ, ರಿಲಯನ್ಸ್ ಕಂಪನಿ ಕ್ವಿಕ್ ಸಪ್ಲೈ ಹೆಸರಿನಲ್ಲಿ ದೇಣಿಗೆ ನೀಡಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿಯಿಲ್ಲ.

4. ವೇದಾಂತ ಲಿಮಿಟೆಡ್:
ರೂ. 399 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿರುವ ಈ ಕಂಪನಿ ವಿರುದ್ದ ಸಾಲದ ಆರೋಪ ಮತ್ತು ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಆರೋಪಗಳಿವೆ. ಗಣಿಗಾರಿಕೆ ದೈತ್ಯ ವೇದಾಂತ ಲಿಮಿಟೆಡ್ ಉದ್ಯಮಿ ಅನಿಲ್ ಅಗರ್ವಾಲ್ ಸ್ಥಾಪಿಸಿದ ಕಂಪನಿಯಾಗಿದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ.

5. ಹಲ್ದಿಯಾ ಎನರ್ಜಿ ಲಿಮಿಟೆಡ್ :
ಈ ಕಂಪನಿ ರೂ. 375 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. 1994 ರಲ್ಲಿ ಸ್ಥಾಪಿಯವಾದ ಈ ಕಂಪನಿ ಆರ್‌ಪಿ-ಸಂಜೀವ್ ಗೋಯೆಂಕಾ ಗ್ರೂಪ್‌ನ ಭಾಗವಾದ ಸಿಇಎಸ್‌ಸಿ ಲಿಮಿಟೆಡ್‌ನ ಒಡೆತನದಲ್ಲಿದೆ. ಇದು ಕೋಲ್ಕತ್ತಾ ನಗರ ಮತ್ತು ಅದರ ಉಪನಗರಗಳ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಉಷ್ಣ ವಿದ್ಯುತ್ ಸ್ಥಾವರವನ್ನು ನಿರ್ವಹಿಸುತ್ತದೆ.

6. ಎಸ್ಸೆಲ್ ಮೈನಿಂಗ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್:
ಈ ಕಂಪನಿ 224.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಈ ಕಂಪನಿ ದೇಶದ ಅತಿದೊಡ್ಡ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿಗಳಲ್ಲಿ ಒಂದಾಗಿದೆ ಮತ್ತು ನೋಬೆಲ್ ಫೆರೋ ಮಿಶ್ರಲೋಹಗಳ ಉತ್ಪಾದಕರಲ್ಲಿ ಒಂದಾಗಿದೆ.

2022 ರಲ್ಲಿ, ಕಂಪನಿಯು ಸಾಂಚಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಬಕ್ಸ್ವಾಹಾ ಅರಣ್ಯದಲ್ಲಿ ತನ್ನ ಗಣಿಗಾರಿಕೆ ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಿದಾಗ ಹಿಂಸಾಚಾರದ ಬೆದರಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಮಧ್ಯಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿತ್ತು. 2014 ರಲ್ಲಿ, ಒಡಿಶಾದಲ್ಲಿ ಗಣಿಗಾರಿಕೆ ನಿಯಮ ಉಲ್ಲಂಘನೆಯ ಆರೋಪದ ತನಿಖೆಗೆ ನಿಯೋಜಿಸಲಾದ ತಜ್ಞರ ಸಮಿತಿಯು, ಎಸ್ಸೆಲ್ ಮೈನಿಂಗ್ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ನಡೆಸಿದೆ ಎಂದು ಹೇಳಿತ್ತು.

7. ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್‌ಮಿಷನ್ ಕಂಪನಿ ಲಿಮಿಟೆಡ್:
ಈ ಕಂಪನಿ ಮೇಲೆ ಮೇಘಾ ಗ್ರೂಪ್ ಷೇರುದಾರರ ನಿಯಂತ್ರಣ ಇದೆ. ಇದು ರೂ 220 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಮೇಘಾ ಇಂಜಿನಿಯರಿಂಗ್ ಮತ್ತು ಇದು ಜಂಟಿಯಾಗಿ 1,186 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

8. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್:
ಇದು 2019 ರಿಂದ 195 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಕೋಲ್ಕತ್ತಾ ಮೂಲದ ಈ ಕಂಪನಿ ಆಹಾರ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ನಡೆಸುತ್ತಿದೆ.

9.ಎಂಕೆಜಿ ಎಂಟರ್‌ಪ್ರೈಸಸ್ ಲಿಮಿಟೆಡ್:
ಕೋಲ್ಕತ್ತಾದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಈ ಕಂಪನಿ ಉಕ್ಕಿನ ವ್ಯವಹಾರ ನಡೆಸುತ್ತದೆ. ಇದು 180 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀಸಿದೆ. ಇದರ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಮಹೇಂದ್ರ ಕುಮಾರ್ ಜಲನ್ ಕೆಲವು ಕೆವೆಂಟರ್ ಕಂಪನಿಗಳ ನಿರ್ದೇಶಕರೂ ಆಗಿದ್ದಾರೆ. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ ಜೊತೆ ಇದು ಉತ್ತಮ ಸಂಬಂಧ ಹೊಂದಿದೆ.

10. ಮದನ್‌ಲಾಲ್ ಲಿಮಿಟೆಡ್: 
ಈ ಕಂಪನಿ 185.5 ಕೋಟಿ ರೂ.ಗಳ ಬಾಂಡ್‌ಗಳನ್ನು ಖರೀದಿಸಿದೆ. ಕಂಪನಿಯು ಎಂಕೆಜೆ ಗ್ರೂಪ್ ಮತ್ತು ಕೆವೆಂಟರ್ ಗ್ರೂಪ್ ಕಂಪನಿಗಳ ಭಾಗವಾಗಿದೆ. ಈ ಕಂಪನಿಯು ಸೆಕ್ಯುರಿಟೀಸ್ ಮತ್ತು ರಿಯಲ್ ಎಸ್ಟೇಟ್ ವಲಯದ ಖರೀದಿ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದೆ.

ಸುಪ್ರೀಂ ಆದೇಶದಲ್ಲಿ ಮಾರ್ಪಾಡು ಕೋರಿ ಚು.ಆಯೋಗ ಅರ್ಜಿ:

ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ನೀಡಿರುವ ಆದೇಶದಲ್ಲಿ ಮಾರ್ಪಾಡು ಕೋರಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಇಂದು (ಮಾರ್ಚ್ 15, ಶುಕ್ರವಾರ) ನಡೆಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗದೆ. ಈ ದಾಖಲೆಗಳ ಪ್ರತಿಗಳನ್ನು ತಾನು ಕಾದಿಟ್ಟುಕೊಂಡಿಲ್ಲ. ಹೀಗಾಗಿ, ಪ್ರಕರಣದ ಕುರಿತ ದಾಖಲೆಗಳನ್ನು ತನಗೆ ಮರಳಿಸಿದರೆ ಕೋರ್ಟ್ ನಿರ್ದೇಶನ ಪಾಲನೆ ಮಾಡಲು ಸಾಧ್ಯವಾಗಲಿದೆ ಎಂದು ಚುನಾವಣಾ ಆಯೋಗ ಕೋರಿದೆ.

ಇದನ್ನೂ ಓದಿ: ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...