Homeಮುಖಪುಟಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಬಹು ನಿರೀಕ್ಷಿತ ಚುನಾವಣಾ ಬಾಂಡ್ ಮಾಹಿತಿಯನ್ನು ಸುಪ್ರೀಂ ಕೋರ್ಟ್ ನೀಡಿದ ಗಡುವಿಗಿಂತ ಒಂದು ದಿನ ಮೊದಲೇ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ಮಾಹಿತಿಯನ್ನು ಮಾರ್ಚ್ 15ರಂದು ಸಂಜೆ 5ಗಂಟೆಯೊಳಗೆ ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ, ಆಯೋಗ ಮಾರ್ಚ್‌ 14ರಂದು ಸಂಜೆಯೇ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ.

426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಚುನಾವಣಾ ಬಾಂಡ್‌ಗಳ ಅಂಕಿಅಂಶಗಳ ವಿವರ ನೋಡಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಪ್ರಮುಖ 10 ಕಂಪನಿಗಳು :

1.ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸಸ್ ಲಿಮಿಟೆಡ್:
ಸ್ಯಾಂಟಿಯಾಗೊ ಮಾರ್ಟಿನ್ ಒಡೆತನದ ಲಾಟರಿ ಕಂಪನಿಯಾಗಿರುವ ಇದು, ಬರೋಬ್ಬರಿ 1,368 ಕೋಟಿ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕಂಪನಿ ಮತ್ತು ಅದರ ಸ್ಥಾಪಕ ಮಾರ್ಟಿನ್ ಈ ಹಿಂದೆ ಇಡಿ ವಿಚಾರಣೆಗೆ ಒಳಗಾಗಿದ್ದರು ಮತ್ತು ಸಿಬಿಐಯ ದೋಷಾರೋಪ ಪಟ್ಟಿಯಲ್ಲಿ ಕಂಪನಿ ಮತ್ತು ಮಾಲೀಕ ಮಾರ್ಟಿನ್ ಹೆಸರಿದೆ.

ಕಳೆದ ವರ್ಷ ಇಡಿ 450 ಕೋಟಿ ರೂಪಾಯಿ ಮೌಲ್ಯದ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಂಡಿತ್ತು. ಕಳೆದ ವಾರವಷ್ಟೇ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾರ್ಟಿನ್ ಅವರ ಅಳಿಯನ ಮನೆಯಲ್ಲಿ ಇಡಿ ಶೋಧ ನಡೆಸಿತ್ತು.

ಕೊಯಂಬತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಕಂಪನಿ, ಸಿಕ್ಕಿಂ ಮತ್ತು ನಾಗಾಲ್ಯಾಂಡ್‌ನಲ್ಲಿ ಪೇಪರ್ ಲಾಟರಿಯ ಏಕೈಕ ವಿತರಕ ಸಂಸ್ಥೆಯಾಗಿದೆ. ಇದರ ಬಾಂಡ್‌ಗಳನ್ನು ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸ್ ಪಿಆರ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಫ್ಯೂಚರ್ ಗೇಮಿಂಗ್ ಅಂಡ್‌ ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಎಂದು ಚು. ಆಯೋಗದ ಡೇಟಾದಲ್ಲಿ ಪಟ್ಟಿ ಮಾಡಲಾಗಿದೆ.

2. ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ :
ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಪಿಪಿ ರೆಡ್ಡಿ ಎಂಬವರ ಒಡೆತನದ ಕಂಪನಿ ಇದಾಗಿದ್ದು, ಈ ಪಿಪಿ ರೆಡ್ಡಿ ತೆಲಂಗಾಣದ ಮಾಜಿ ಸಿಎಂ ಕೆಸಿಅರ್ ಅವರಿಗೆ ಆಪ್ತ ಎನ್ನಲಾಗಿದೆ. ತೆಲಂಗಾಣಲ್ಲಿ ಬಿಆರ್ ಎಸ್ ಸರ್ಕಾರದ ಅವಧಿಯಲ್ಲಿ 1.47 ಲಕ್ಷ ಕೋಟಿ ಮೊತ್ತದ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಮಾಡಿದ್ದು ಇದೇ ಮೇಘಾ ಇಂಜಿನಿಯರಿಂಗ್ ಕಂಪನಿ ಎನ್ನುವುದು ಇಲ್ಲಿ ಗಮನಾರ್ಹ.

3.ಕ್ವಿಕ್ ಸಪ್ಲೈ ಚೈನ್ ಪ್ರೈ.ಲಿಮಿಟೆಡ್:
ಈ ಕಂಪನಿ 410 ಕೋಟಿ ರೂ ದೇಣಿಗೆಯನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ‌. ಈ ಕಂಪನಿಯ ನಿರ್ದೇಶಕರಲ್ಲಿ ಒಬ್ಬರು ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್‌ನ ನಿರ್ದೇಶಕರೂ ಹೌದು. ಕೆಲ ವರದಿಗಳ ಪ್ರಕಾರ, ರಿಲಯನ್ಸ್ ಕಂಪನಿ ಕ್ವಿಕ್ ಸಪ್ಲೈ ಹೆಸರಿನಲ್ಲಿ ದೇಣಿಗೆ ನೀಡಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿಯಿಲ್ಲ.

4. ವೇದಾಂತ ಲಿಮಿಟೆಡ್:
ರೂ. 399 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿರುವ ಈ ಕಂಪನಿ ವಿರುದ್ದ ಸಾಲದ ಆರೋಪ ಮತ್ತು ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಆರೋಪಗಳಿವೆ. ಗಣಿಗಾರಿಕೆ ದೈತ್ಯ ವೇದಾಂತ ಲಿಮಿಟೆಡ್ ಉದ್ಯಮಿ ಅನಿಲ್ ಅಗರ್ವಾಲ್ ಸ್ಥಾಪಿಸಿದ ಕಂಪನಿಯಾಗಿದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ.

5. ಹಲ್ದಿಯಾ ಎನರ್ಜಿ ಲಿಮಿಟೆಡ್ :
ಈ ಕಂಪನಿ ರೂ. 375 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. 1994 ರಲ್ಲಿ ಸ್ಥಾಪಿಯವಾದ ಈ ಕಂಪನಿ ಆರ್‌ಪಿ-ಸಂಜೀವ್ ಗೋಯೆಂಕಾ ಗ್ರೂಪ್‌ನ ಭಾಗವಾದ ಸಿಇಎಸ್‌ಸಿ ಲಿಮಿಟೆಡ್‌ನ ಒಡೆತನದಲ್ಲಿದೆ. ಇದು ಕೋಲ್ಕತ್ತಾ ನಗರ ಮತ್ತು ಅದರ ಉಪನಗರಗಳ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಉಷ್ಣ ವಿದ್ಯುತ್ ಸ್ಥಾವರವನ್ನು ನಿರ್ವಹಿಸುತ್ತದೆ.

6. ಎಸ್ಸೆಲ್ ಮೈನಿಂಗ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್:
ಈ ಕಂಪನಿ 224.5 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಈ ಕಂಪನಿ ದೇಶದ ಅತಿದೊಡ್ಡ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿಗಳಲ್ಲಿ ಒಂದಾಗಿದೆ ಮತ್ತು ನೋಬೆಲ್ ಫೆರೋ ಮಿಶ್ರಲೋಹಗಳ ಉತ್ಪಾದಕರಲ್ಲಿ ಒಂದಾಗಿದೆ.

2022 ರಲ್ಲಿ, ಕಂಪನಿಯು ಸಾಂಚಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಬಕ್ಸ್ವಾಹಾ ಅರಣ್ಯದಲ್ಲಿ ತನ್ನ ಗಣಿಗಾರಿಕೆ ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಿದಾಗ ಹಿಂಸಾಚಾರದ ಬೆದರಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಮಧ್ಯಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿತ್ತು. 2014 ರಲ್ಲಿ, ಒಡಿಶಾದಲ್ಲಿ ಗಣಿಗಾರಿಕೆ ನಿಯಮ ಉಲ್ಲಂಘನೆಯ ಆರೋಪದ ತನಿಖೆಗೆ ನಿಯೋಜಿಸಲಾದ ತಜ್ಞರ ಸಮಿತಿಯು, ಎಸ್ಸೆಲ್ ಮೈನಿಂಗ್ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ನಡೆಸಿದೆ ಎಂದು ಹೇಳಿತ್ತು.

7. ವೆಸ್ಟರ್ನ್ ಯುಪಿ ಪವರ್ ಟ್ರಾನ್ಸ್‌ಮಿಷನ್ ಕಂಪನಿ ಲಿಮಿಟೆಡ್:
ಈ ಕಂಪನಿ ಮೇಲೆ ಮೇಘಾ ಗ್ರೂಪ್ ಷೇರುದಾರರ ನಿಯಂತ್ರಣ ಇದೆ. ಇದು ರೂ 220 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಮೇಘಾ ಇಂಜಿನಿಯರಿಂಗ್ ಮತ್ತು ಇದು ಜಂಟಿಯಾಗಿ 1,186 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

8. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್:
ಇದು 2019 ರಿಂದ 195 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಕೋಲ್ಕತ್ತಾ ಮೂಲದ ಈ ಕಂಪನಿ ಆಹಾರ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ನಡೆಸುತ್ತಿದೆ.

9.ಎಂಕೆಜಿ ಎಂಟರ್‌ಪ್ರೈಸಸ್ ಲಿಮಿಟೆಡ್:
ಕೋಲ್ಕತ್ತಾದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಈ ಕಂಪನಿ ಉಕ್ಕಿನ ವ್ಯವಹಾರ ನಡೆಸುತ್ತದೆ. ಇದು 180 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀಸಿದೆ. ಇದರ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಮಹೇಂದ್ರ ಕುಮಾರ್ ಜಲನ್ ಕೆಲವು ಕೆವೆಂಟರ್ ಕಂಪನಿಗಳ ನಿರ್ದೇಶಕರೂ ಆಗಿದ್ದಾರೆ. ಕೆವೆಂಟರ್ ಫುಡ್‌ಪಾರ್ಕ್ ಇನ್ಫ್ರಾ ಲಿಮಿಟೆಡ್ ಜೊತೆ ಇದು ಉತ್ತಮ ಸಂಬಂಧ ಹೊಂದಿದೆ.

10. ಮದನ್‌ಲಾಲ್ ಲಿಮಿಟೆಡ್: 
ಈ ಕಂಪನಿ 185.5 ಕೋಟಿ ರೂ.ಗಳ ಬಾಂಡ್‌ಗಳನ್ನು ಖರೀದಿಸಿದೆ. ಕಂಪನಿಯು ಎಂಕೆಜೆ ಗ್ರೂಪ್ ಮತ್ತು ಕೆವೆಂಟರ್ ಗ್ರೂಪ್ ಕಂಪನಿಗಳ ಭಾಗವಾಗಿದೆ. ಈ ಕಂಪನಿಯು ಸೆಕ್ಯುರಿಟೀಸ್ ಮತ್ತು ರಿಯಲ್ ಎಸ್ಟೇಟ್ ವಲಯದ ಖರೀದಿ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದೆ.

ಸುಪ್ರೀಂ ಆದೇಶದಲ್ಲಿ ಮಾರ್ಪಾಡು ಕೋರಿ ಚು.ಆಯೋಗ ಅರ್ಜಿ:

ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ನೀಡಿರುವ ಆದೇಶದಲ್ಲಿ ಮಾರ್ಪಾಡು ಕೋರಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಇಂದು (ಮಾರ್ಚ್ 15, ಶುಕ್ರವಾರ) ನಡೆಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗದೆ. ಈ ದಾಖಲೆಗಳ ಪ್ರತಿಗಳನ್ನು ತಾನು ಕಾದಿಟ್ಟುಕೊಂಡಿಲ್ಲ. ಹೀಗಾಗಿ, ಪ್ರಕರಣದ ಕುರಿತ ದಾಖಲೆಗಳನ್ನು ತನಗೆ ಮರಳಿಸಿದರೆ ಕೋರ್ಟ್ ನಿರ್ದೇಶನ ಪಾಲನೆ ಮಾಡಲು ಸಾಧ್ಯವಾಗಲಿದೆ ಎಂದು ಚುನಾವಣಾ ಆಯೋಗ ಕೋರಿದೆ.

ಇದನ್ನೂ ಓದಿ: ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...