Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

ಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

- Advertisement -
- Advertisement -

ಕೇಂದ್ರದ ಆಡಳಿತರೂಢ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಚುನಾವಣಾ ಬಾಂಡ್‌ ಮೂಲಕ 6,060 ಕೋಟಿ ರೂಪಾಯಿ ಪಡೆದಿರುವ ಕುರಿತು ವಿಶೇಷ ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಒತ್ತಾಯಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಯಂತಹ ಕೇಂದ್ರೀಯ ಸಂಸ್ಥೆಗಳ ದಾಳಿ ಎದುರಿಸಿದ ಬೆನ್ನಲ್ಲೇ ಹಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದಿರುವುದನ್ನು ಪ್ರಸ್ತಾಪಿಸಿದರು. ಬಿಜೆಪಿ ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆದಿದ್ದರೂ, ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

‘ನಾ ಖಾವೂಂಗ ನಾ ಖಾನೆ ದೂಂಗಾ’ (ತಿನ್ನುವುದಿಲ್ಲ, ಇತರರನ್ನು ತಿನ್ನಲು ಬಿಡುವುದಿಲ್ಲ)’ ಎಂದು ಪ್ರಧಾನಿ ಹೇಳುತ್ತಾರೆ. ಆದರೆ, ಇಂದು ಬಿಜೆಪಿ ಚುನಾವಣಾ ಬಾಂಡ್‌ಗಳಿಂದ ಹಣ ಗಳಿಸಿದೆ ಎಂಬುವುದನ್ನು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದೆ. ಎಸ್‌ಬಿಐ ಅಂಕಿ ಅಂಶಗಳು ಬಿಜೆಪಿಗೆ 50ರಷ್ಟು ಮತ್ತು ಕಾಂಗ್ರೆಸ್‌ಗೆ ಶೇ.11ರಷ್ಟು ದೇಣಿಗೆ ಬಂದಿರುವುದಾಗಿ” ತೋರಿಸಿದೆ ಎಂದಿದ್ದಾರೆ.

“ನಮ್ಮ ಮತದಾರರ ಸಂಖ್ಯೆ ಶೇಕಡಾವಾರು ನೋಡಿದರೆ ಸುಮಾರು ಮೂರನೇ ಒಂದು ಭಾಗ ಇದೆ. ಉಳಿದ ಜನರು ಬಿಜೆಪಿ ಸೇರಿದಂತೆ ಮೂರನೇ ಎರಡರಷ್ಟು ಇದ್ದಾರೆ. ಆದರೆ, ಬಿಜೆಪಿಯವರು ದೇಣಿಗೆಯಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪಡೆದಿದ್ದಾರೆ. ಅವರು ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಬಂಡವಾಳಶಾಹಿಗಳು ಅಥವಾ ಇತರ ಕಂಪನಿಗಳು ಈ ರೀತಿ ದೇಣಿಗೆ ನೀಡಬಹುದೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ದೇಣಿಗೆ ನೀಡಿದ ಕೆಲವೊಂದು ಕಂಪನಿಗಳು ಸಂಶಯಾಸ್ಪದವಾಗಿವೆ. ಅವರು ಯಾರು ಎಂದು ಗೊತ್ತಿಲ್ಲ. ಒಂದೋ ಅವರು ಇಡಿ, ಐಟಿ ಇಲಾಖೆಯ ಬೆದರಿಕೆಗೆ ಮಣಿದವರು ಆಗಿರಬಹುದು. ಮೋದಿ ಸರ್ಕಾರ ನಮ್ಮ ಪಕ್ಷಕ್ಕೆ ದೇಣಿಗೆ ನೀಡುವಂತೆ ಬೆದರಿಕೆ ಹಾಕಿರಬಹುದು. ಇಲ್ಲದಿದ್ದರೆ ಬಿಜೆಪಿ ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಎಂದು ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ನೀವು (ಬಿಜೆಪಿ) ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದೀರಿ. ಆದರೆ ಕಾಂಗ್ರೆಸ್ ಕಾರ್ಯಕರ್ತರು, ಸಂಸದರು ಮತ್ತು ಇತರ ಸಣ್ಣ ದಾನಿಗಳಿಂದ ದೇಣಿಗೆ ಪಡೆದರೆ, ನಮ್ಮ ಖಾತೆಗಳನ್ನೇ ಸ್ಥಗಿತಗೊಳಿಸಿದ್ದೀರಿ. ನೀವು 6,000 ಕೋಟಿ ರೂ.ಪಡೆದಿದ್ದೀರಿ. ನಮ್ಮ ಖಾತೆಗಳು ಸ್ಥಗಿತಗೊಂಡಿವೆ. ನಾವು ಹೇಗೆ ಚುನಾವಣೆ ಎದುರಿಸುವುದು? ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದರೆ, ಅವರು ಚುನಾವಣೆಗೆ ಸ್ಪರ್ಧಿಸುವುದು ಹೇಗೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌ಬಿಐ: ಮತ್ತೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...